ಜು.7 ರಂದು “ಕುರುಕ್ಷೇತ್ರ’ ಹಾಡುಗಳ ದರ್ಬಾರ್‌

"ಸಾಹೋರೇ ಸಾಹೋರೇ ಆಜಾನು ಬಾಹುರೇ, ರಾಜಾಧಿ ರಾಜ ...' ಹಾಡಲ್ಲಿ ದಚ್ಚು ದರ್ಶನ

Team Udayavani, Jun 29, 2019, 3:00 AM IST

KURUKSHETRA

ದರ್ಶನ್‌ ಅಭಿನಯದ 50 ನೇ ಚಿತ್ರ “ಮುನಿರತ್ನ ಕುರುಕ್ಷೇತ್ರ’ ಬಿಡುಗಡೆ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಆಗಸ್ಟ್‌ 9 ಉತ್ತರವಾಗಿತ್ತು. ಸ್ವತಃ ನಿರ್ಮಾಪಕ ಮುನಿರತ್ನ ಅವರು, ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆ ಮುಂದೆ ಹೋಗುವುದಿಲ್ಲ. ಆಗಸ್ಟ್‌ 9 ರಂದು ಚಿತ್ರವನ್ನು ಬಿಡುಗಡೆ ಮಾಡುವುದು ಖಚಿತ ಎಂದು ಹೇಳಿದ್ದರು.

ಈಗ “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಹೊಸ ಸುದ್ದಿಯೆಂದರೆ, ಜುಲೈ 7 ರಂದು ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದು ವಿಶೇಷ. ಜುಲೈ 7 ಕ್ಕೆ ಹಾಡುಗಳು ಹೊರಬಂದರೆ, ಆಗಸ್ಟ್‌ 9 ರಂದು ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಬಹುತಾರಾಗಣದ ಚಿತ್ರ ಎಂದೇ ಬಿಂಬಿತವಾಗಿರುವ “ಮುನಿರತ್ನ ಕುರುಕ್ಷೇತ್ರ’ ಅದ್ಧೂರಿಯಾಗಿಯೇ ಮೂಡಿ ಬಂದಿದೆ.

ಬಹುತೇಕ ಚಿತ್ರದ ಚಿತ್ರೀಕರಣ ಹೈದರಾಬಾದ್‌ನ ರಾಮೋಜಿರಾವ್‌ ಫಿಲ್ಮ್ ಸಿಟಿಯ ನಡೆದಿದೆ. ಇಡೀ ಚಿತ್ರೀಕರಣ ಸೆಟ್‌ನಲ್ಲೇ ನಡೆದಿದ್ದು, ಅದಕ್ಕಾಗಿ 20ಕ್ಕೂ ಹೆಚ್ಚು ಕಲರ್‌ಫ‌ುಲ್‌ ಆಗಿರುವಂತಹ ಸೆಟ್‌ ಹಾಕಿದ್ದು ವಿಶೇಷ. ಸೆಟ್‌ನ ವಿಶೇಷತೆಯಲ್ಲಿ ದರ್ಬಾರ್‌ ಹಾಲ್‌ ಕೂಡಾ ಒಂದು. ಇದು ಚಿತ್ರದಲ್ಲೇ ಅತಿದೊಡ್ಡ ಸೆಟ್‌ ಎನ್ನಲಾಗಿದೆ.

ಚಿತ್ರದಲ್ಲಿ ದರ್ಶನ್‌ ದುರ್ಯೋದನ ಪಾತ್ರ ಮಾಡಿದ್ದು, ಅವರ ಎಂಟ್ರಿಯೇ ಅದ್ಧೂರಿಯಾಗಿ ಮೂಡಿ ಬಂದಿದೆ ಎಂಬುದು ಚಿತ್ರತಂಡದ ಮಾತು. “ಸಾಹೋರೇ ಸಾಹೋರೇ ಆಜಾನುಬಾಹುರೇ, ರಾಜಾಧಿ ರಾಜ …’ ಎಂಬ ಹಾಡಿನ ಮೂಲಕ ನೂರಾರು ಕುದುರೆಗಳು, ಆನೆ, 500ಕ್ಕೂ ಹೆಚ್ಚು ಜ್ಯೂನಿಯರ್ ಭಾಗಿಯಾಗಿರುವ ಈ ಹಾಡಿನಲ್ಲಿ ದರ್ಶನ್‌ ಆನೆಮೇಲೆ ಕುಳಿತು ಗಾಂಭೀರ್ಯದೊಂದಿಗೆ ಬರುವ ದೃಶ್ಯದ ಮೂಲಕ ಅವರ ದರ್ಶನ ಆಗುವುದು ಚಿತ್ರದ ಹೈಲೈಟ್‌ ಎಂಬುದು ಚಿತ್ರತಂಡದ ಹೇಳಿಕೆ.

ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ನಿಖೀಲ್‌ಕುಮಾರ್‌, ರವಿ ಚೇತನ್‌, ಶ್ರೀನಿವಾಸ ಮೂರ್ತಿ, ಮೇಘನಾರಾಜ್‌, ಹರಿಪ್ರಿಯಾ, ಡ್ಯಾನಿಶ್‌ ಸೇರಿದಂತೆ ಕನ್ನಡದ ಬಹುತೇಕ ನಟರು ನಟಿಸಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತವಿದೆ.

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.