ಇಂದು ನಿರ್ಮಾಪಕರ ಸಂಘದ ಚುನಾವಣೆ
Team Udayavani, Dec 29, 2019, 7:00 AM IST
ಇಂದು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ರಾಜೇಂದ್ರ ಸಿಂಗ್ ಬಾಬು ಮತ್ತು ರಾಮಕೃಷ್ಣ ಡಿ.ಕೆ. (ಪ್ರವೀಣ್ಕುಮಾರ್) ಸ್ಪರ್ಧೆಗಿಳಿದಿದ್ದಾರೆ. ಇಬ್ಬರ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದ್ದು, ಯಾರು ನಿರ್ಮಾಪಕರ ಸಂಘದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕು. ಆರಂಭದಲ್ಲಿ ನಿರ್ಮಾಪಕ ಮುನಿರತ್ನ ಅವರು ಸ್ಪರ್ಧಿಸಲು ಮುಂದಾಗಿದ್ದರು.
ಆದರೆ, ರಾಜಕೀಯ ಸೇರಿದಂತೆ ಹಲವು ಕಾರ್ಯಗಳಲ್ಲಿ ಬಿಝಿಯಾಗಿರುವುದರಿಂದ ಮುನಿರತ್ನ ಅವರು ನಿರ್ಮಾಪಕರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಹಾಗಾಗಿ, ರಾಜೇಂದ್ರ ಸಿಂಗ್ ಬಾಬು ಹಾಗೂ ರಾಮಕೃಷ್ಣ ಅವರ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಇನ್ನು, ಉಪಾಧ್ಯಕ್ಷ ಸ್ಥಾನಕ್ಕೆ ದಿನೇಶ ಎಸ್, (ದಿನೇಶ್ ಗಾಂಧಿ, ರಾಮಮೂರ್ತಿ, ಎಂ.ಜಿ. ಮತ್ತು ಶ್ರೀನಿವಾಸ್ ಹೆಚ್.ಸಿ.(ಶಿಲ್ಪ) ಇವರುಗಳು ಸ್ಪರ್ಧಿಸಿದ್ದಾರೆ. ಗೌರವ ಕಾರ್ಯ ದರ್ಶಿ ಸ್ಥಾನಕ್ಕೆ ಕೇಶವ ಬಿ.ಆರ್ ಹಾಗು ಕೆ.ಮಂಜು ನಡುವೆ ಸ್ಪರ್ಧೆ ನಡೆಸಯಲಿದೆ.
ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ರಮೇಶ್ ಯಾದವ್ ಎಂ. ಅವರು ಒಬ್ಬರೇ ಕಣದಲ್ಲಿರು ವುದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಹಾಗೆಯೇ ಖಜಾಂಚಿ ಸ್ಥಾನಕ್ಕೂ ಆರ್.ಎಸ್.ಗೌಡ ಅವರೊಬ್ಬರೇ ಕಣದಲ್ಲಿರುವುದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. 2011ರ ಬಳಿಕ ಇಲ್ಲಿವರೆಗೆ ನಿರ್ಮಾಪಕರ ಸಂಘಕ್ಕೆ ಚುನಾವಣೆ ನಡೆದಿರಲಿಲ್ಲ. ಎರಡು ವರ್ಷಕ್ಕೊಮ್ಮೆ ನಡೆಯಬೇಕಿದ್ದ ಚುನಾವಣೆ ಎಂಟು ವರ್ಷದ ಬಳಿಕ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ