ಇಂಗ್ಲಿಷ್‌, ಮೊಬೈಲ್‌ ಬಳಸದ ಹೀಗೊಂದು ಚಿತ್ರ!

ಪ್ರೀತಿ ಅಂದರೆ ಹೀಗೂ ಇರಬಹುದಾ?

Team Udayavani, Jan 9, 2020, 7:02 AM IST

Prema-Yuddham

ಪ್ರೇಮ ಮತ್ತು ಯುದ್ಧ ಎರಡು ಪರಸ್ಪರ ವಿರುದ್ದ ದಿಕ್ಕಿನಲ್ಲಿ ಸಿಗುವ ಪದಗಳು. ಈ ಎರಡೂ ವಿರುದ್ದ ಪದಗಳನ್ನೇ ಇಲ್ಲೊಂದು ತಂಡ ತಮ್ಮ ಚಿತ್ರದ ಶೀರ್ಷಿಕೆಯಾಗಿ ಇಟ್ಟುಕೊಂಡಿದೆ. ಅಂದಹಾಗೆ, ಆ ಚಿತ್ರದ ಹೆಸರು “ಪ್ರೇಮಯುದ್ಧಂ’. ಇನ್ನು ಸಾಮಾನ್ಯವಾಗಿ ಇತ್ತೀಚೆಗೆ ಬರುತ್ತಿರುವ ಬಹುತೇಕ ಚಿತ್ರಗಳಲ್ಲಿ ಇಂಗ್ಲಿಷ್‌ ಸಂಭಾಷಣೆಗಳು, ಮೊಬೈನ್‌ ಪೋನ್‌ ಬಳಕೆ ಇದ್ದೇ ಇರುತ್ತದೆ. ಆದರೆ ಈ ಚಿತ್ರದ ವಿಶೇಷವೆಂದರೆ, ಪಕ್ಕಾ ಕನ್ನಡದ ಗ್ರಾಮೀಣ ಸೊಗಡಿನಲ್ಲಿ ಸಾಗುವ ಈ ಚಿತ್ರದಲ್ಲಿ, ಎಲ್ಲಿಯೂ ಇಂಗ್ಲಿಷ್‌ ಸಂಭಾಷಣೆ ಮತ್ತು ಮೊಬೈಲ್‌ ಪೋನ್‌ಗಳನ್ನು ಬಳಕೆಯೇ ಮಾಡಿಲ್ಲವಂತೆ!

ಸದ್ಯ ತನ್ನ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳ ಅಂತಿಮ ಹಂತ ದಲ್ಲಿ ರುವ “ಪ್ರೇಮಯುದ್ಧಂ’ ಚಿತ್ರ ತಂಡ, ಇತ್ತೀಚೆಗೆ ತನ್ನ ಹಾಡುಗಳನ್ನು ಮತ್ತು ಲಿರಿಕಲ್‌ ವಿಡಿಯೋ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿದೆ. ನಟಿ ಸ್ಪರ್ಶ ರೇಖಾ “ಪ್ರೇಮ ಯುದ್ಧಂ’ ಹಾಡುಗಳನ್ನು ಮತ್ತು ಲಿರಿಕಲ್‌ ವಿಡಿಯೋ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ವೃತ್ತಿಯಲ್ಲಿ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿರುವ ಅನಿಲ್‌ “ಪ್ರೇಮಯುದ್ಧಂ’ ಚಿತ್ರದಲ್ಲಿ ನಾಯಕನಾಗಿ ಬಿಗ್‌ಸ್ಕ್ರೀನ್‌ಗೆ ಪರಿಚಯವಾಗುತ್ತಿದ್ದಾರೆ.

ರೀಲ್‌ನಲ್ಲಿ ಪಕ್ಕಾ ಹಳ್ಳಿ ಹುಡುಗನಾಗಿ ಕಾಣಿಸಿಕೊಳ್ಳುತ್ತಿರುವ ಅನಿಲ್‌ಗೆ ಚಿತ್ರದುರ್ಗ ಮೂಲದ ಪಲ್ಲವಿ ನಾಯಕಿಯಾಗಿ ಜೋಡಿ. ಉಳಿದಂತೆ ಬಹುತೇಕ ಹೊಸ ಪ್ರತಿಭೆಗಳು ಚಿತ್ರದ ಇತರ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಶ್ರೀಮಂಜು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಕಾರ್ತಿಕ್‌ ವೆಂಕಟೇಶ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ರಾಮು ನರಹಳ್ಳಿ ಛಾಯಾಗ್ರಹಣ, ಅರವಿಂದ್‌ ಜೆ.ಪಿ ಸಂಕಲನವಿದೆ. ಗುರುಮೂರ್ತಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಚಿತ್ರತಂಡ, “ಕನ್ನಡಿಗರು ಮತ್ತು ಬೇರೆ ಭಾಷೆಯವರು ನಮ್ಮ ಚಿತ್ರವನ್ನು ವೀಕ್ಷಿಸಲಿ, ಕನ್ನಡದ ಸೊಗಡು ಗೊತ್ತಾಗಲಿ ಎಂಬ ಕಾರಣಕ್ಕೆ ಶುದ್ಧ ಕನ್ನಡ ಶೀರ್ಷಿಕೆ ಇಡಲಾಗಿದೆ. ಒಮ್ಮೆ ನಿರ್ದೇಶಕ, ನಿರ್ಮಾಪಕರು ಒಟ್ಟಾಗಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಮಾರ್ಗ ಮಧ್ಯೆ ಕಾರು ಕೆಟ್ಟು ನಿಂತುಕೊಳ್ಳುತ್ತದೆ. ಆ ಸಮಯಲ್ಲಿ ಔಪಚಾರಿಕವಾಗಿ ಮಾತನಾಡುವಾಗ ಅಲ್ಲಿನ ಸುಂದರ ಪರಿಸರಲ್ಲಿ ಹುಟ್ಟಿಕೊಂಡಿದ್ದೇ ಈ ಚಿತ್ರದ ಕಥೆ. ಈಗ ಆ ಕಥೆ ಚಿತ್ರವಾಗಿ ಬಿಡುಗಡೆ ಹಂತದವರೆಗೂ ಬಂದು ನಿಂತಿದೆ.

ಹಳ್ಳಿ ಹಿನ್ನಲೆಯ ಶುದ್ಧ ಪ್ರೀತಿ ಕಥೆಯಲ್ಲಿ ಪ್ರೇಮಿಗಳು ಕೇವಲ ಕಣ್ಣಲ್ಲೇ ಪ್ರೀತಿಯ ಭಾವನೆಗಳನ್ನು ತೋರಿಸುತ್ತಾರೆ. ಕನಸಿನಲ್ಲೂ ಹಾಡನ್ನು ತುರುಕಿಲ್ಲ. ಪ್ರೀತಿ ಅಂದರೆ ಹೀಗೂ ಇರಬಹುದಾ ಎಂಬ ಪ್ರಶ್ನೆ ಮೂಡುವಂತ ಸನ್ನಿವೇಶಗಳು ಚಿತ್ರದಲ್ಲಿದೆ. ಅದನ್ನು ತೆರೆಮೇಲೆ ನೋಡಿದಾಗಲೇ ಗೊತ್ತಾಗುತ್ತದೆ’ ಎಂಬ ವಿವರಣೆ ಕೊಡುತ್ತದೆ ಚಿತ್ರತಂಡ. “ಪ್ರೇಮಯುದ್ಧಂ’ ಚಿತ್ರವನ್ನು ಮಂಡ್ಯ, ಪಾಂಡವಾಪುರ, ಕನಕನಮಾರುಡಿ ಹಾಗೂ ಬ್ಯಾಡರಹಳ್ಳಿಯ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆಯಂತೆ. ಫೆಬ್ರವರಿ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.