ಕನ್ನಡ ಚಿತ್ರರಂಗದಲ್ಲಿ ಗರಿಗೆದರಿದ ನಿರೀಕ್ಷೆ

ತಮಿಳುನಾಡು ಚಿತ್ರಮಂದಿರಗಳಲ್ಲಿ 100% ಸೀಟು ಭರ್ತಿಗೆ ಅವಕಾಶ

Team Udayavani, Jan 5, 2021, 11:40 AM IST

ಕನ್ನಡ ಚಿತ್ರರಂಗದಲ್ಲಿ ಗರಿಗೆದರಿದ ನಿರೀಕ್ಷೆ

ಕೋವಿಡ್ ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಸರ್ಕಾರ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಶೇ. 50 ರಷ್ಟು ಪ್ರೇಕ್ಷಕರ ಅನುಮತಿಗೆ ಅವಕಾಶ ಕಲ್ಪಿಸಿ, ಸಿನಿಮಾಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಅದಾದ ಬಳಿಕ ಚಿತ್ರಮಂದಿಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಇದೇ ಮಾರ್ಗಸೂಚಿ ಅನ್ವಯ ಶೇ. 50ರಷ್ಟು ಆಸನಗಳನ್ನು ಮಾತ್ರ ಪ್ರೇಕ್ಷಕರಿಗೆ ಕಲ್ಪಿಸಿ ಸಿನಿಮಾಗಳ ಪ್ರದರ್ಶನಕ್ಕೆ ಮುಂದಾಗಿದ್ದವು. ಇದರನಡುವೆಯೇ ಕೆಲ ತಿಂಗಳಿನಿಂದ ಚಿತ್ರ ಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ವಿಧಿಸಿರುವ ಪ್ರೇಕ್ಷಕರಿಗೆ ಶೇ. 50ರಷ್ಟು ಪ್ರವೇಶ ನಿರ್ಬಂಧವನ್ನು ಹಿಂತೆಗೆಯುವಂತೆ,ಚಿತ್ರೋದ್ಯಮ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನುಒತ್ತಾಯಿಸುತ್ತ ಬಂದಿದೆ. ಇದೀಗ ಈನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವತಮಿಳುನಾಡು ಸರ್ಕಾರ, ತನ್ನ ರಾಜ್ಯದ ಚಿತ್ರಮಂದಿರಗಳಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ಅನ್ವಯವಾಗುತ್ತಿದ್ದ, ಈ ನಿಯಮವನ್ನು ಹಿಂತೆಗೆದುಕೊಂಡಿದೆ. ಜ. 10 ರಿಂದ ಅನ್ವಯವಾಗುವಂತೆ, ತಮಿಳುನಾಡಿನ ಎಲ್ಲ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಈ ಹಿಂದಿನಂತೆ ಶೇ. 100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ತಮಿಳು ಚಿತ್ರೋದ್ಯಮ ಸೇರಿದಂತೆ, ದಕ್ಷಿಣ ಭಾರತದ ಬಹುತೇಕ ಎಲ್ಲ ಚಿತ್ರಮಂದಿರಗಳು ಮತ್ತುಬಾಲಿವುಡ್‌ ಕೂಡ ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿವೆ.

ಇನ್ನು ಪಕ್ಕದ ತಮಿಳುನಾಡಿನಲ್ಲಿ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ವಿಧಿಸಿದ್ದ ಶೇ. 50 ರಷ್ಟು ಪ್ರೇಕ್ಷಕರನಿರ್ಬಂಧ ತೆರವಾಗುತ್ತಿದ್ದಂತೆ, ಕರ್ನಾಟಕದಲ್ಲೂ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ವಿಧಿಸಿರುವಈ ನಿರ್ಬಂಧ ಹಿಂತೆಗೆದುಕೊಳ್ಳಬಹುದು ಎಂಬ ನಿರೀಕ್ಷೆಕನ್ನಡ ಚತ್ರರಂಗದಲ್ಲೂ ಗರಿಗೆದರಿದೆ. ಈ ಬಗ್ಗೆಮಾತನಾಡಿರುವ ಚಿತ್ರರಂಗದ ಪ್ರಮುಖ ಗಣ್ಯರುಆದಷ್ಟು ಬೇಗ ಕರ್ನಾಟದಲ್ಲೂ ಚಿತ್ರಮಂದಿರಗಳು ಮತ್ತುಮಲ್ಟಿಪ್ಲೆಕ್ಸ್‌ಗಳಿಗೆ ವಿಧಿಸಿದ್ದ ಶೇ. 100ರಷ್ಟು ಪ್ರೇಕ್ಷಕರ ಪ್ರವೇಶಾತಿಗೆ ಅನುಮತಿ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕೆಜಿಎಫ್ ಟೈಮ್ಸ್‌ ಮೂಲಕ ಟೀಸರ್‌ ರಿಲೀಸ್‌ ಅನೌನ್ಸ್‌

ಈಗ ಸರ್ಕಾರ ಕೊಟ್ಟಿರುವ ಶೇ. 50ರಷ್ಟು ಪ್ರವೇಶದಲ್ಲಿ ಸಿನಿಮಾಗಳನ್ನು ಬಿಡುಗಡೆ ಮಾಡಿ, ಹಾಕಿದ ಬಂಡವಾಳ ವಾಪಾಸ್‌ ಪಡೆಯುವುದು ಸಾಧ್ಯವೇ ಇಲ್ಲ. ಆದಷ್ಟು ಬೇಗ ಥಿಯೇಟರ್‌ ಮತ್ತುಮಲ್ಟಿಪ್ಲೆಕ್ಸ್‌ಗಳಲ್ಲಿ ನೂರಕ್ಕೆ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಕೊಡಿ ಅನ್ನೋದು ಬಹಳ ದಿನಗಳಿಂದ ನಮ್ಮ ನಿರ್ಮಾಪಕರು, ಪ್ರದರ್ಶಕರ ಬೇಡಿಕೆ. ನಮಗಿಂತಮುಂಚೆ ಈಗ, ತಮಿಳುನಾಡು ಸರ್ಕಾರ ಅಲ್ಲಿರುವ ಶೇ.50ರಷ್ಟು ಪ್ರವೇಶ ನಿರ್ಬಂಧ ತೆಗೆದು ಹಾಕಿದೆ. ಇದುನಿಜಕ್ಕೂ ಸ್ವಾಗತಾರ್ಹ. ನಮ್ಮಲ್ಲೂ ಕೂಡಲೇ ಥಿಯೇಟರ್ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಕಲ್ಪಿಸಿಕೊಡಬೇಕು. ಪ್ರವೀಣ್‌ ಕುಮಾರ್‌, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ

ನಮ್ಮ ನೂರಾರು ನಿರ್ಮಾಪಕರು ತಮ್ಮ ಸಿನಿಮಾ ರಿಲೀಸ್‌ ಮಾಡೋದಕ್ಕೆ ಕಾಯುತ್ತಿದ್ದಾರೆ. ಥಿಯೇಟರ್‌ಮತ್ತು ಮಲ್ಟಿಪ್ಲೆಕ್ಸ್‌ಗಳ ಪ್ರವೇಶಕ್ಕೆ ಪೂರ್ಣ ಪ್ರಮಾಣದಅನುಮತಿ ಸಿಕ್ಕರೆ ಬಹುತೇಕ ನಿರ್ಮಾಪಕರು ತಮ್ಮಸಿನಿಮಾಗಳನ್ನು ಬಿಡುಗಡೆ ಮಾಡಲಿದ್ದಾರೆ. ಸರ್ಕಾರಕ್ಕೆ ಈಬಗ್ಗೆ ಸೋಮವಾರ ಲಿಖೀತ ಮನವಿ ಸಲ್ಲಿಸಿದ್ದೇವೆ. ಇಂದು(ಮಂಗಳವಾರ) ಖುದ್ದಾಗಿ ಸಿ.ಎಂ ಅವರನ್ನು ಭೇಟಿ ಮಾಡಿ ಅನುಮತಿ ನೀಡುವಂತೆ ಮನವಿ ಮಾಡುವ ಯೋಚನೆ ಇದೆ. ಆದಷ್ಟು ಬೇಗ ನಮ್ಮಲ್ಲೂ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ ಗಳಲ್ಲಿ ನೂರಕ್ಕೆ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಸರ್ಕಾರ ಕೊಡುತ್ತದೆ ಎಂಬ ನಂಬಿಕೆ ಇದೆ. ಡಿ.ಆರ್‌ ಜೈರಾಜ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ

ಶೇ. 50ರಷ್ಟು ಪ್ರವೇಶ ಇಟ್ಟುಕೊಂಡು ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳನ್ನು ನಡೆಸುವುದು ಬಹಳ ಕಷ್ಟ.ಥಿಯೇಟರ್‌ಗಳ ನಿರ್ವಹಣೆಯನ್ನೂ ಮಾಡಲಾಗುತ್ತಿಲ್ಲ.ಈಗಾಗಲೇ ಕೋವಿಡ್‌ ಲಾಕ್‌ಡೌನ್‌ನಿಂದ ಆರೇಳುತಿಂಗಳು ಸಂಪೂರ್ಣವಾಗಿ ಥಿಯೇಟರ್‌ಗಳನ್ನು ಮುಚ್ಚಿದ್ದರಿಂದ, ಅವುಗಳ ಮಾಲೀಕರು, ಕಾರ್ಮಿಕರುಎಲ್ಲರೂ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗಾಗಲೇ ಈ ಬಗ್ಗೆ ಸರ್ಕಾರಕ್ಕೂ ಹಲವು ಬಾರಿ ಮನವಿ ಮಾಡಿದ್ದೇವೆ. ನೂರಕ್ಕೆನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡಿದರೆ ಮಾತ್ರ, ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳನ್ನು ನಡೆಸೋದಕ್ಕೆ ಸಾಧ್ಯ. ಈಗಾಗಲೇ ಸಾಕಷ್ಟು ತಡವಾಗಿದೆ. ಇನ್ನಾದರೂ ಸರ್ಕಾರ ಕೂಡಲೇ ಈಗ ಹಾಕಿರುವ ಶೇ. 50ರಷ್ಟು ಪ್ರವೇಶ ನಿರ್ಬಂಧವನ್ನು ಹಿಂತೆಗೆದುಕೊಳ್ಳಬೇಕು. ಕೆ.ವಿ ಚಂದ್ರಶೇಖರ್‌, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘ ಅಧ್ಯಕ್ಷ

ಆದಷ್ಟು ಬೇಗ, ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ನೂರಕ್ಕೆ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಕೊಡಬೇಕು ಅಂಥ ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದೇವೆ. ಈಗಲೂ ಕೂಡ ನಮ್ಮ ಸರ್ಕಾರಕ್ಕೆ ಅದನ್ನೇ ಹೇಳುತ್ತಿದ್ದೇವೆ. ಪಕ್ಕದ ತಮಿಳುನಾಡಿನಲ್ಲಿ ಕೊಟ್ಟಿರುವಂತೆ, ನಮ್ಮ ರಾಜ್ಯದಲ್ಲೂ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಪೂರ್ಣ ಪ್ರಮಾಣದ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಬೇಕು. ಆದಷ್ಟು ಬೇಗ ಅನುಮತಿ ಸಿಗುತ್ತದೆ ಎಂಬ ನಿರೀಕ್ಷೆ ಇದೆ. ಕೆ.ಪಿ ಶ್ರೀಕಾಂತ್‌, ನಿರ್ಮಾಪಕ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.