ಫೇಸ್‌ಬುಕ್‌ ಫೇಸ್‌ ತಂದ ಅದೃಷ್ಟ!

ರತ್ನಮಂಜರಿಯಲ್ಲಿ ರಾಜ್‌ಯೋಗ

Team Udayavani, May 13, 2019, 3:00 AM IST

Rajcharan

ಕೆಲವರು ಹೀರೋ ಆಗಬೇಕು ಅಂತ ಸಾಕಷ್ಟು ತಯಾರಿ ನಡೆಸುತ್ತಾರೆ, ಸಿಕ್ಕ ಸಿಕ್ಕ ಕಡೆ ಆಡಿಷನ್‌ಗೂ ಹೋಗುತ್ತಾರೆ. ಆದರೆ, ಹೀರೋ ಆಗುವ ಅದೃಷ್ಟ ಮಾತ್ರ ಅಷ್ಟಕ್ಕಷ್ಟೆ. ಇನ್ನೂ ಕೆಲವರಿಗೆ ಹೀರೋ ಆಗುವ ಅವಕಾಶ ಹುಡುಕಿಕೊಂಡೇ ಬಂದುಬಿಡುತ್ತೆ. ಆ ಸಾಲಿಗೆ ರಾಜ್‌ಚರಣ್‌ ಕೂಡ ಸೇರುತ್ತಾರೆ. ಯಾರು ಈ ರಾಜ್‌ಚರಣ್‌ ಎಂಬ ಪ್ರಶ್ನೆಗೆ “ರತ್ನಮಂಜರಿ’ ಚಿತ್ರ ತೋರಿಸಬೇಕು.

ಹೌದು, “ರತ್ನಮಂಜರಿ’ ಚಿತ್ರದ ಹೀರೋ ಈ ರಾಜ್‌ಚರಣ್‌. ಇವರಿಗೆ ಈ ಚಿತ್ರದಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು ಫೇಸ್‌ಬುಕ್‌ ಮೂಲಕ. ಇವರ ಫೇಸ್‌ಬುಕ್‌ ಪ್ರೊಫೈಲ್‌ ನೋಡಿದ ನಿರ್ದೇಶಕ ಪ್ರಸಿದ್ಧ್ ಅವರು ಡೆನ್ಮಾರ್ಕ್‌ನಿಂದಲೇ ಕಾಲ್‌ ಮಾಡಿ, “ಚಿತ್ರವೊಂದಕ್ಕೆ ಆಡಿಷನ್‌ ಇದೆ, ನೀವು ಬನ್ನಿ, ಆಯ್ಕೆಯಾದರೆ, ನೀವೇ ಹೀರೋ’ ಅಂದರಂತೆ.

ಆದರೆ, ರಾಜ್‌ಚರಣ್‌ಗೆ ಅದೇಕೋ ಅವರ ಮಾತು ಮೊದಲು ನಂಬಿಕೆ ಬರಲಿಲ್ಲವಂತೆ. ಇದೆಲ್ಲೋ ಫೇಕ್‌ ಇರಬೇಕು ಅಂತ ಸುಮ್ಮನಿದ್ದರಂತೆ. ನಾನು ಹೊಸಬ. ನನ್ನ ಫೇಸ್‌ಬುಕ್‌ ಫೇಸ್‌ ನೋಡಿ ಅವಕಾಶ ಎಲ್ಲಿಂದ ಬರಬೇಕು ಅಂತ ಯೋಚಿಸುತ್ತಲೇ ತಮ್ಮ ಪಾಡಿಗೆ ತಾವಿದ್ದರಂತೆ. ಕೊನೆಗೆ ನಿರ್ದೇಶಕ ಪ್ರಸಿದ್ಧ್ ಅವರು ಇಂಡಿಯಾಗೆ ಬಂದ ಕೂಡಲೇ ರಾಜ್‌ಚರಣ್‌ಗೆ ಕಾಲ್‌ ಮಾಡಿ, ಬನ್ನಿ ಅಂದಿದ್ದಾರೆ.

ಆಡಿಷನ್‌ ಕೂಡ ನಡೆಸಿದ್ದಾರೆ. ಆದರೆ, ರಾಜ್‌ಚರಣ್‌ಗೆ ಆಡಿಷನ್‌ ಪಾಸ್‌ ಆಯ್ತಾ ಇಲ್ಲವೋ ಎಂಬ ಗೊಂದಲವಿತ್ತಂತೆ. ಯಾಕೆಂದರೆ, ನಿರ್ದೇಶಕರು, ಎನ್‌ಆರ್‌ಐ ಕನ್ನಡಿಗರು ಸೇರಿ ಮಾಡುತ್ತಿರುವ ಚಿತ್ರವಿದು. ನಿನ್ನನ್ನು ಲಿಸ್ಟ್‌ನಲ್ಲಿ ಇಟ್ಟಿರ್ತೀನಿ. ಯುಎಸ್‌ನಲ್ಲೇ ಹೀರೋ ಹುಡುಕಾಟ ನಡೆಯುತ್ತಿದೆ. ಹಾಗೊಂದು ವೇಳೆ ಸಿಗದೇ ಇದ್ದರೆ ನೀನೇ ಹೀರೋ ಅಂದಿದ್ದರಂತೆ.

ಎರಡು ತಿಂಗಳ ಬಳಿಕ ಪ್ರಸಿದ್ಧ್ ಕಾಲ್‌ ಮಾಡಿ, ನೀನೇ ನಮ್ಮ ಚಿತ್ರಕ್ಕೆ ಹೀರೋ ಅಂದರಂತೆ. ಹಾಗೆ ನಡೆದ ಮಾತುಕತೆ, ಚಿತ್ರವಾಗಿ, ಈಗ ಬಿಡುಗಡೆ ಹಂತಕ್ಕೆ ಬಂದಿದೆ. ಮೇ.17 ರಂದು “ರತ್ನಮಂಜರಿ’ ಬಿಡುಗಡೆಗೆ ಸಿದ್ಧವಾಗಿದೆ. ಆ ಕುರಿತು ರಾಜ್‌ಚರಣ್‌ ಹೇಳುವುದಿಷ್ಟು. “ನಾನು ನಾಗತಿಹಳ್ಳಿ ಚಂದ್ರಶೇಖರ್‌ ಅವರ “ಟೆಂಟ್‌ ಸಿನಿಮಾ’ ಶಾಲೆಯ ವಿದ್ಯಾರ್ಥಿ.

ಅಲ್ಲಿ ನಟನೆ ತರಬೇತಿ ಕಲಿತಿದ್ದೇನೆ. “ರತ್ಮಮಂಜರಿ’ ಚಿತ್ರಕ್ಕೆ ವರ್ಕ್‌ಶಾಪ್‌ ನಡೆಸಿದ್ದು, ನೃತ್ಯ ನಿರ್ದೇಶಕ ಮೋಹನ್‌ ಬಳಿಕ ಡ್ಯಾನ್ಸ್‌ ಕಲಿತರೆ, ವಿಕ್ರಮ್‌ ಮಾಸ್ಟರ್‌ ಬಳಿ ಸ್ಟಂಟ್ಸ್‌ ಕಲಿತಿದ್ದೇನೆ. ಇನ್ನು, ರಾಜು ವೈವಿಧ್ಯ ಅವರ ಬಳಿ ನಟನೆ ಬಗ್ಗೆ ಸಾಕಷ್ಟು ವಿಷಯ ತಿಳಿದುಕೊಂಡೆ. ಆ ನಂತರ ಕ್ಯಾಮೆರಾ ಮುಂದೆ ನಿಂತೆ. ಶೇ.60 ರಷ್ಟು ಕೂರ್ಗ್‌ ನಲ್ಲಿ ಚಿತ್ರೀಕರಣ ನಡೆಸಲಾಗಿದೆ.

ನಮ್ಮ ಚಿತ್ರದ ಚಿತ್ರೀಕರಣ ನಡೆದು ಒಂದು ವಾರದಲ್ಲೇ ಕೂರ್ಗ್‌ ಪ್ರಕೃತಿ ವಿಕೋಪದಿಂದ ಹಾಳಾಯಿತು. ಆ ಸುಂದರ ತಾಣ ನಮ್ಮ ಚಿತ್ರದಲ್ಲಿ ಸೆರೆಯಾಗಿದೆ. ಈಗ ಮೊದಲಿನಂತೆ ಆ ಸ್ಥಳವಿಲ್ಲ. ಇನ್ನು, ಇದೊಂದು ನೈಜ ಘಟನೆ ಆಧರಿತ ಚಿತ್ರ. ಅಮೆರಿಕದಲ್ಲಿ ನಡೆದ ಘಟನೆ ಇಟ್ಟುಕೊಂಡು ಚಿತ್ರ ಮಾಡಲಾಗಿದೆ. ನಾನು ಎನ್‌ಆರ್‌ಐ ಕನ್ನಡಿಗನ ಪಾತ್ರ ಮಾಡಿದ್ದೇನೆ.

ಇಲ್ಲೊಂದು ಲವ್‌ಸ್ಟೋರಿ ಇದೆ. ಇಂಡಿಯಾಗೆ ಅವನು ಯಾಕೆ ಬರುತ್ತಾನೆ ಎಂಬುದೇ ಕಥೆ. ಇದು ಮರ್ಡರ್‌ ಮಿಸ್ಟ್ರಿ ಹೊಂದಿದೆ. ಚಿತ್ರದಲ್ಲಿ ಅಖೀಲಾ ಪ್ರಕಾಶ್‌, ಶ್ರದ್ಧಾ ಸಾಲಿಯನ್‌, ಪಲ್ಲವಿರಾಜ್‌ ಮೂವರು ನಾಯಕಿಯರಿದ್ದಾರೆ.

“ರತ್ನಮಂಜರಿ’ ವಿಶೇಷವೆಂದರೆ, ಅಕ್ಕ ಸಮ್ಮೇಳನದಲ್ಲಿ ಆಡಿಯೋ ಬಿಡುಗಡೆಯಾದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆ ಇದೆ’ ಎನ್ನುವ ರಾಜ್‌ಚರಣ್‌ಗೆ ಚಿತ್ರದ ಮೇಲೆ ಭರವಸೆ ಇದೆ. ಜನರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲದೊಂದಿಗೆ ಸದ್ಯ, ಮೂರು ಚಿತ್ರಗಳ ಮಾತುಕತೆಯಲ್ಲಿ ತೊಡಗಿದ್ದಾರಂತೆ. ಅತ್ತ ತೆಲುಗಿನಿಂದಲೂ ಅವಕಾಶ ಬಂದಿದೆ’ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.