ಸೌಂದರ್ಯ ನೆನಪು: ‘ಸೌಮ್ಯ’ ದುರಂತ ಸಾವಿಗೆ 16ವರ್ಷ, ಅಕಾಲಕ್ಕೆ ಕಣ್ಮರೆಯಾದ ಅದ್ಭುತ ಪ್ರತಿಭೆ


Team Udayavani, Apr 17, 2020, 8:09 AM IST

soundarya

ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಬಾರತೀಯ ಭಾಷೆಗಳ ಚಿತ್ರರಂಗದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ನಟಿ ಸೌಂದರ್ಯ ನಮ್ಮನ್ನಗಲಿ ಇಂದಿಗೆ (ಏ. 17) ಹದಿನಾರು  ವರ್ಷಗಳಾದವು. ಆದರೂ ಅವರು ಅಭಿನಯಿಸಿರುವ ಸಿನಿಮಾಗಳ ಮೂಲಕ ಇನ್ನೂ ಅಭಿಮಾನಿಗಳ ಮನದಲ್ಲಿ ಚಿರಪರಿಚಿತರಾಗಿದ್ದಾರೆ. ಚಿತ್ರನಟಿ, ನಿರ್ಮಾಪಕಿಯಾಗಿಯೂ ಬೆಳೆದು ಸಾಧನೆ ಶಿಖರವೇರಿದ್ದ ನಟಿ ತಮ್ಮ ಸರಳತೆಗೆ ಸಹ ಹೆಸರಾಗಿದ್ದರು. ಇಂತಹ ಮೇರು ನಟಿ ವಿಮಾನ ದುರಂತದಲ್ಲಿ ಅಕಾಲ ಮೃತ್ಯುವಿಗೀಡಾದದ್ದು ಮಾತ್ರ ಅವರ  ಅಭಿಮಾನಿಗಳಿಗೆ ಮರೆಯಲಾಗದ ನೋವನ್ನುಂಟುಮಾಡಿತ್ತು.

ನಟಿ ಸೌಂದರ್ಯ ಹೆಸರಿನಂತೆ ಸುರದ್ರೂಪಿ ಹೆಣ್ಣು ಮಗಳು. ಜುಲೈ 18, 1972ಲ್ಲಿ ಹುಟ್ಟಿದ ಸೌಂದರ್ಯ ವೈದ್ಯೆಯಾಗಬೇಕೆಂದಿದ್ದವರು ಆಕಸ್ಮಿಕವಾಗಿ ಚಲನಚಿತ್ರರಂಗ ಪ್ರವೇಶಿಸಿದ್ದರು. ‘ಸೌಮ್ಯ’ಈಕೆಯ ಮೂಲ ಹೆಸರಾಗಿದ್ದು ತಮ್ಮ ಹಲವು ಚಿತ್ರಗಳಲ್ಲಿ ಇದೇ ಹೆಸರನ್ನು ಬಳಸಿಕೊಂಡಿದ್ದಾರೆ.

ತೂಗುವೆ ಕೃಷ್ಣನ, ಸಿಪಾಯಿ, ನಾನು ನನ್ನ ಹೆಂಡ್ತೀರು, ಶ್ರೀ ಮಂಜುನಾಥ, ಆರ್ಯಭಟ, ದೋಣಿಸಾಗಲಿ, ಆಪ್ತಮಿತ್ರ  ಸೇರಿ ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದ ನಟಿ ತೆಲುಗು, ತಮಿಳು, ಮಲಯಾಳಗಳಲ್ಲಿ ಸಹ ಬಹು ಬೇಡಿಕೆಯ ನಟಿಯಾಗಿದ್ದರು.

ಗಿರೀಶ್ ಕಾಸರವಳ್ಳಿಯವರ ‘ದ್ವೀಪ’ ಚಿತ್ರದ ಮೂಲಕ ನಿರ್ಮಾಪಕಿಯಾಗಿಗೂ ಗುರುತಿಸಿಕೊಂಡು. ಈ ಚಿತ್ರಕ್ಕೇ ಕೇಂದ್ರ ಸರ್ಕಾರದ ‘ಸ್ವರ್ಣಕಮಲ’ ಪ್ರಶಸ್ತಿ ಲಭಿಸಿತ್ತು. ಅದರ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ ಉತ್ತಮ ಚಿತ್ರ ಪ್ರಶಸ್ತಿ ಮತ್ತು ಉತ್ತಮ ನಟಿ ಪ್ರಶಸ್ತಿ ಕೂಡಾ ಸೌಂದರ್ಯ ಅವರಿಗೆ ಸಿಕ್ಕಿದೆ. ದೋಣಿ ಸಾಗಲಿ ಚಿತ್ರದಲ್ಲಿ ಸೌಂದರ್ಯ ಅವರ ಅದ್ಭುತ ನಟನೆಗೆ ರಾಜ್ಯ ಸರ್ಕಾರ ಶ್ರೇಷ್ಠ ನಟಿ ಪ್ರಶಸ್ತಿ ನೀಡಿತ್ತು.

ಇನ್ನು ಸೌಂದರ್ಯ  ಡಾ. ಎಸ್. ಎಲ್. ಭೈರಪ್ಪನವರ ಶ್ರೇಷ್ಠ ಕಾದಂಬರಿ  ‘ಗೃಹಭಂಗ’ ವನ್ನು ಕಿರುತೆರೆಯಲ್ಲಿ ಧಾರಾವಾಹಿಯಾಗಿ ಮೂಡಿಸಿದ್ದರು. ಗಿರೀಶ್ ಕಾಸರವಳ್ಳಿ ಅವರ ನಿರ್ದೇಶನದ  ಈ ಧಾರಾವಾಹಿ ದೂರದರ್ಶನದಲ್ಲಿ ಮೂಡಿಬಂದ ಮಹತ್ವದ ಧಾರಾವಾಹಿಗಳಲ್ಲಿ ಒಂದೆಂದು ಗುರುತಿಸಿಕೊಂಡಿದೆ.

ಆಪ್ತಮಿತ್ರ ಚಿತ್ರ ಸೌಂದರ್ಯ ಅವರ ಕಡೆಯ ಚಿತ್ರವಾಗಿದ್ದು ಅದರಲ್ಲಿನ “ನಾಗವಲ್ಲಿ” ಪಾತ್ರ ಎಂದೆಂದಿಗೂ ಮರೆಯಲಾಗದ್ದು. ಡಾ. ವಿಷ್ಣುವರ್ಧನ್ , ಸೌಂದರ್ಯ ಮತ್ತು ಅವಿನಾಶ್, ದ್ವಾರಕೀಶ್ ಮೊದಲಾದವರು ನಟಿಸಿದ್ದ ಈ ಚಿತ್ರದಲ್ಲಿ ಸೌಂದರ್ಯ ಅಭಿನಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. 16 ವರ್ಷದ ಸಿನಿ ಬದುಕಿನಲ್ಲಿ 102 ಚಿತ್ರಗಳಲ್ಲಿ ನಟಿಸಿದ್ದರು.

ಸಾಮಾಜಿಕ ಕಾಳಜಿ ಹೊಂದಿದ್ದ ನಟಿ ಸೌಂದರ್ಯ ತಾವು ಹುಟ್ಟಿದ ಬಂಗಾರಪೇಟೆ ತಾಲೂಕಿನ ಗಂಜಿಗುಂಟೆ ಗ್ರಾಮದ ಶಾಲೆಗಾಗಿ ಕಟ್ಟಡವನ್ನು ಕಟ್ಟಿಸಿಕೊಟ್ಟಿದ್ದರು. ಇಂದಿಗೂ ಆ ಶಾಲಾ ಕಟ್ಟಡದ ಮೇಲೆ ನಟಿ ಸೌಂದರ್ಯ ಹೆಸರು ಶಾಶ್ವತವಾಗಿ ಉಳಿದಿದೆ.

2004ರ ಏಪ್ರಿಲ್ 17ರಂದು ಬೆಂಗಳೂರಿನ ಜಕ್ಕೂರು ವಿಮಾನ ನೆಲೆಯಿಂದ ಆಂಧ್ರ ಪ್ರದೇಶಕ್ಕೆ ಚುನಾವಣಾ ಪ್ರಚಾರ ಸಲುವಾಗಿ ಹೊರಟಾಗ ವಿಮಾನ ಪತನವಾಗಿ ಸಜೀವ ದಹನವಾಗಿದ್ದರು. ಈ ದುರಂತದ ವೇಳೆ ನಟಿ ಸೌಂದರ್ಯ ಹಾಗೂ ಅವರ ಅಣ್ಣ ಅಮರನಾಥ್ ಸಾವನ್ನಪ್ಪಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.