ಕೊನೆಗೂ ಕ್ಷಮೆ ಕೇಳಿದ “ಗಂಡ ಹೆಂಡತಿ’ ಸಂಜನಾ
Team Udayavani, Nov 13, 2018, 4:27 PM IST
ನಿರ್ದೇಶಕ ರವಿ ಶ್ರೀವತ್ಸ ಮೇಲೆ ಮಿ ಟೂ ಆರೋಪ ಮಾಡಿದ್ದ ನಟಿ ಸಂಜನಾ ಗಲ್ರಾನಿ ಕೊನೆಗೂ ನಿರ್ದೇಶಕರ ಸಂಘದ ಮುಂದೆ ಬಹಿರಂಗ ಕ್ಷಮೆ ಕೋರಿದ್ದಾರೆ. “ನಾನು ಯಾರ ಮನಸ್ಸನ್ನು ನೋಯಿಸುವ ಸಲುವಾಗಿ ಅರೋಪ ಮಾಡಿಲ್ಲ, ಸಿನಿಮಾದ ಚಿತ್ರೀಕರಣದ ವೇಳೆ ನನಗಾದ ನೋವನ್ನು ಹೇಳಿಕೊಂಡಿದ್ದು, ನನ್ನ ಅಭಿಪ್ರಾಯವನ್ನಷ್ಟೇ ತಿಳಿಸಿದ್ದೇನೆ’ ಎಂದಿದ್ದಾರೆ.
ಚಲನಚಿತ್ರ ನಿರ್ದೇಶಕರ ಸಂಘವು ನವೆಂಬರ್ 8ರ ಒಳಗೆ ಸಂಜನಾ ಬಂದು ಚಿತ್ರದ ನಿರ್ದೇಶಕ ರವಿ ಶ್ರೀ ವತ್ಸ ಅವರ ಬಳಿ ಬಹಿರಂಗ ಕ್ಷಮೆ ಕೇಳಬೇಕು ಎಂಬ ಗಡುವನ್ನು ನೀಡಿತ್ತು. ಅದರಂತೆ ಇಂದು, ಕಲಾವಿದರ ಸಂಘದ ಅಧ್ಯಕ್ಷ ರೆಬೆಲ್ ಸ್ಟಾರ್ ಅಂಬರೀಶ್ ಸಮ್ಮುಖದಲ್ಲಿ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಟಿ ಸಂಜನಾ ಗಲ್ರಾನಿ ಕ್ಷಮೆ ಕೇಳಿದ್ದಾರೆ. ಅಲ್ಲದೇ ಕಲಾವಿದರ ಸಂಘದ ಹಿರಿಯರ ಮಾತಿಗೆ ಬೆಲೆಕೊಟ್ಟು, ನಿರ್ದೇಶಕ ಸಂಘದವರ ಮನ ನೋಯಿಸಿದ್ದಕ್ಕೆ ಕ್ಷಮೆ ಕೇಳುತ್ತಾ ಇದ್ದೇನೆ ಎಂದರು ಸಂಜನಾ.
ಏನಿದು ಆರೋಪ: “ಗಂಡ ಹೆಂಡತಿ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನನ್ನ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದು, ಒತ್ತಾಯ ಮಾಡಿ ಕಿಸ್ಸಿಂಗ್ ಸೀನ್ ಮಾಡಿಸಿದ್ರು, ನಂಗಿನ್ನೂ ಆಗ ಏನು ಗೊತ್ತಾಗ್ತಾ ಇರಲಿಲ್ಲ ಎಂಬ ಮಿ ಟೂ ಅಭಿಯಾನದಲ್ಲಿ ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಸಂಜನಾ ಗಲ್ರಾನಿ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ