ಮಳೆಬಿಲ್ಲು ಚಿತ್ರೀಕರಣ ಮುಕ್ತಾಯ


Team Udayavani, Dec 12, 2018, 11:35 AM IST

malebil.jpg

ದರ್ಶನ್‌ ಅಭಿನಯದ “ಚಕ್ರವರ್ತಿ’ ಚಿತ್ರದಲ್ಲಿ “ಒಂದು ಮಳೆ ಬಿಲ್ಲು, ಒಂದು ಮಳೆ ಮೋಡ..’ ಎಂಬ ಹಾಡು ಸಿಕ್ಕಾಪಟ್ಟೆ ಮೆಚ್ಚುಗೆ ಪಡೆದಿದ್ದು ಗೊತ್ತೇ ಇದೆ. ಆ ಹಾಡಿನ ಸಾಲೊಂದು ಹೊಸಬರ ಚಿತ್ರದ ಶೀರ್ಷಿಕೆ ಕೂಡ ಆಗಿದೆ. “ಮಳೆಬಿಲ್ಲು’ ಎಂಬ ಹೆಸರಿಟ್ಟುಕೊಂಡು ಮಾಡಿರುವ ಚಿತ್ರ ಈಗಾಗಲೆ ಸದ್ದಿಲ್ಲದೆಯೇ ಪೂರ್ಣಗೊಂಡಿದೆ. ಈ ಚಿತ್ರಕ್ಕೆ ನಾಗರಾಜ್‌ ಹಿರಿಯೂರು ನಿರ್ದೇಶಕರು.

ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯನ್ನೂ ಅವರೇ ವಹಿಸಿಕೊಂಡಿದ್ದಾರೆ. ಅನನ್ಯ ಎಂಟರ್‌ಪ್ರೈಸಸ್‌ ಬ್ಯಾನರ್‌ನಲ್ಲಿ ನಿಂಗಪ್ಪ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಇತ್ತೀಚೆಗೆ ಚಿತ್ರದುರ್ಗ, ಹಿರಿಯೂರು ಹಾಗೂ ವಾಣಿವಿಲಾಸ ಸಾಗರ ಸುತ್ತಮುತ್ತಲಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ನಾಯಕ ಶರತ್‌ ಹಾಗೂ ನಾಯಕಿ ನಯನಾ ಕಾಂಬಿನೇಷನ್‌ನಲ್ಲಿ “ಮೊದಲಾಯಿತು ಮೊದಲು ಮೊದಲು ಶುರುವಾಯಿತು..’

ಹಾಗು “ಓ ಪ್ರೀತಿ, ಓ ಪ್ರೀತಿ…’ ಎಂಬ ಎರಡು ಹಾಡುಗಳನ್ನು ಚಿತ್ರೀಕರಿಸಲಾಗಿದೆ. ಹೈಟ್‌ ಮಂಜು ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡುಗಳನ್ನು ಚಿತ್ರೀಕರಿಸುವುದರೊಂದಿಗೆ ಚಿತ್ರೀಕರಣ ಪೂರ್ಣಗೊಂಡಿದೆ. “ಮಳೆಬಿಲ್ಲು’ ಕಥೆ ಬಗ್ಗೆ ಹೇಳುವುದಾದರೆ, ಪ್ರತಿಯೊಬ್ಬ ಯುವಕರ ಲೈಫ‌ಲ್ಲಿ  ಹುಡುಗಿಯೊಬ್ಬಳ ಪ್ರೀತಿ ಇದ್ದೇ ಇರುತ್ತೆ. ಅಂತಹ ಹುಡುಗಿಯೊಬ್ಬಳು ಚಿತ್ರದ ನಾಯಕನ ಲೈಫ‌ಲ್ಲಿ ಬಂದಾಗ, ಅವನ ಬದುಕು ಹೇಗೆ ಬಲದಾಗುತ್ತದೆ’ ಎಂಬುದು ಕಥೆ.

ಈ ಚಿತ್ರಕ್ಕೆ ಸಿ.ನಾರಾಯಣ್‌ ಛಾಯಾಗ್ರಹಣವಿದೆ. ಗಣೇಶ್‌-ನಾರಾಯಣ್‌ ಸಂಗೀತ ನೀಡಿದ್ದಾರೆ. ಎಂ.ಮುನಿರಾಜು ಸಂಕಲನ ಮಾಡಿದರೆ, ನಾಗಾರಾಜ್‌ ಸಾಹಿತ್ಯವಿದೆ. ಎಂ.ಆರ್‌.ಕಪಿಲ್‌, ಹೈಟ್‌ ಮಂಜು ನೃತ್ಯ ನಿರ್ದೇಶನ ಮಾಡಿದ್ದಾರೆ. ಡಿಫ‌ರೆಂಟ್‌ ಡ್ಯಾನಿ ಸಾಹಸವಿದೆ. ಚಿತ್ರದಲ್ಲಿ ಶರತ್‌, ನಯನಾ, ಸಂಜನಾ, ಕಿರ್ಲೋಸ್ಕರ್‌ ಸತ್ಯನಾರಾಯಣ್‌, ಮೈಕೋ ನಾಗಾರಾಜ್‌, ಶ್ರೀನಿವಾಸ ಪ್ರಭು, ಮಹಾದೇವ್‌, ಚಂದನ್‌, ಡಿಫ‌ರೆಂಟ್‌ ಡ್ಯಾನಿ, ಮೀಸೆ ಅಂಜನಪ್ಪ, ಕೃಷ್ಣ ಮೂರ್ತಿ, ಡಿ.ಕೆ.ಯಶೋಧ, ರವಿತೇಜ, ಹರ್ಷಿತ, ಪ್ರಜ್ವಲ್‌, ದಮಯಂತಿ ನಾಗಾರಾಜ್‌, ಸೌಮ್ಯ, ಲಾವಣ್ಯ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.