ಶೀಘ್ರದಲ್ಲಿ ರಿಲೀಸ್ ಆಗಲಿದೆ ‘ಫೋರ್ ವಾಲ್ಸ್‘ ಸಿನಿಮಾ
Team Udayavani, Jan 30, 2022, 1:14 PM IST
ಮೊದಲ ಬಾರಿಗೆ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ “ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿಯಲ್ಲಿ “ಫೋರ್ ವಾಲ್ಸ್” ಸಿನಿಮಾ ಬಿಡುಗಡೆಯಾಗಲಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು. ಈಗಾಗಲೇ ವಿಜಯ್ ಪ್ರಕಾಶ್ ಕಂಠದಲ್ಲಿ ಮೂಡಿ ಬಂದಿರುವ “ಕಣ್ಮಣಿಯೇ ಕಣ್ಮಣಿಯೇ’ ಹಾಡಿನ ಲಿರಿಕಲ್ ವಿಡಿಯೋ ಸಾಂಗ್ ಸಖತ್ ಸದ್ದು ಮಾಡಿತ್ತು. ಅಚ್ಯುತ್ ಕುಮಾರ್ ಸೈಕಲ್ ಹಿಡಿದು ಗೆಳತಿ ಹಿಂದೆ ಸುತ್ತುತ್ತ, ಪ್ರೀತಿ ನಿವೇದನೆ ಮಾಡುವ ಹಾಡು ಕೇಳುಗರಿಗೆ ಮೋಡಿ ಮಾಡಿತ್ತು.
ತಲಗೇರಿ ಬರೆದ ಸಾಹಿತ್ಯಕ್ಕೆ ಸಂಗೀತ ನಿರ್ದೇಶಕ ಆನಂದ ರಾಜಾ ವಿಕ್ರಮ ಇಂಪಾದ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡಿನ ವಿಡಿಯೋ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಸೌಂಡ್ ಮಾಡುತ್ತಿದೆ. ” ಫೋರ್ ವಾಲ್ಸ್’ ಚಿತ್ರಕ್ಕೆ ಮಂತ್ರಂ ಸಿನಿಮಾ ಮೂಲಕ ಚಂದನವನಕ್ಕೆ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದ್ದ ಎಸ್.ಎಸ್ ಸಜ್ಜನ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಚ್ಯುತ್ ಕುಮಾರ್ ನಾಯಕ ನಟನಾಗಿ ಮಿಂಚಿದ್ದು, ಮೂರು ಶೇಡ್ನಲ್ಲಿ ಚಿತ್ರದಲ್ಲಿ ಕಾಣಸಿಗಲಿದ್ದಾರೆ. ಟೀಸರ್ನಲ್ಲಿನ ಅಚ್ಯುತ್ ಕುಮಾರ್ ಹೊಸ ಗೆಟಪ್ನ ಕಂಡ ಚಿತ್ರಪ್ರೇಮಿಗಳು ಸಿನಿಮಾ ಬಗ್ಗೆ ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ಅಚ್ಯುತ್, “ಆರಂಭದಲ್ಲಿ ಈ ಚಿತ್ರದ ಟೈಟಲ್ ಕೇಳಿದಾಗ “ಥೂ ಯಾವುದು ಗುರು ಇದು ಬಿ ಗ್ರೇಡ್ ಪಿಕ್ಚರ್’ ಅಂದುಕೊಂಡೆ. ಆದರೆ, ಕಥೆ ಕೇಳಿದ ನಂತರ ನನಗೆ ಇಷ್ಟವಾಯಿತು. ಒಂದು ಕುಟುಂಬದ ಒಳಗೆ ನಡೆಯುವ ಕಥೆ. ತಂದೆ ತನ್ನ ಮಕ್ಕಳ ಸುತ್ತ ಹೇಗೆ ತನ್ನ ಬದುಕನ್ನು ಕಟ್ಟುತ್ತಾನೆ ಎಂಬ ಅಂಶ ಇಲ್ಲಿ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಬೇರೆ ಬೇರೆ ಭಿನ್ನ ಸ್ಥಿತಿಗಳು, ಸವಾಲುಗಳು ಬರುತ್ತವೆ. ಹಾಗಂತ ಗೋಳಿನ ಕಥೆಯಲ್ಲ. ಲವ ಲವಿಕೆಯಿಂದ ಹೇಳಿದ್ದಾರೆ’ ಎಂದರು.
ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಚಿತ್ರವಾಗಿದ್ದು, ತಂದೆ, ಮಗನ ನಡುವಿನ ಬಾಂಧವ್ಯದ ಕತೆ ಚಿತ್ರದಲ್ಲಿದೆ. ಮನರಂಜನೆಗೆ ಎಲ್ಲೂ ಕೊರತೆ ಇಲ್ಲ ಎನ್ನುವುದು ಚಿತ್ರತಂಡದ ಮಾತು. ಎಸ್.ವಿ ಪಿಕ್ಚರ್ಸ್ ಬ್ಯಾನರ್ನಲ್ಲಿ ಟಿ. ವಿಶ್ವನಾಥ್ ನಾಯಕ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಡಾ. ಪವಿತ್ರಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಡಾ. ಜಾಹ್ನವಿ ಜ್ಯೋತಿ, ದತ್ತಣ್ಣ, ಭಾಸ್ಕರ್ ನೀನಾಸಂ, ಶ್ರೇಯಾ ಶೆಟ್ಟಿ,ಆಂಚಲ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾ ಬಳಗದಲ್ಲಿದ್ದಾರೆ. ವಿಡಿಆರ್ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ವಿತರಣೆಯನ್ನು ಸತ್ಯಪ್ರಕಾಶ್ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ