“ಗಡ್ಡಪ್ಪ ಸರ್ಕಲ್‌’ನಲ್ಲಿ ಪ್ರಶಸ್ತಿ ವಿಜೇತರಿಗೆ ಸನ್ಮಾನ


Team Udayavani, Jan 16, 2020, 7:04 AM IST

Gaddappa-Circle

“ನಂಗೆ ಕೇಶವ ಅವ್ರು ಬಟ್ಟೆ, ಬರೆ,ಊಟ ಎಲ್ಲವ್ನು ಕೊಟ್ಟು ಸಂತೋಷದಿಂದ ನೋಡ್ಕೊಂಡಿದ್ದಾರೆ. ಎಲ್ರೂವ ಸಿನ್ಮಾ ನೋಡ್ಬೇಕು…’ ಹೀಗೆ ತಮ್ಮದೇ ಶೈಲಿಯಲ್ಲಿ ಹೇಳಿದ್ದು “ತಿಥಿ’ ಖ್ಯಾತಿಯ ಗಡ್ಡಪ್ಪ. ಅವರು ಹೀಗೆ ಹೇಳಿಕೊಂಡಿದ್ದು, ತಮ್ಮ “ಗಡ್ಡಪ್ಪ ಸರ್ಕಲ್‌’ ಚಿತ್ರದ ಬಗ್ಗೆ. ಬಿ.ಆರ್‌.ಕೇಶವ ನಿರ್ದೇಶನದ ಈ ಚಿತ್ರ ಪೂರ್ಣಗೊಂಡಿದ್ದು, ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದು ಚಿತ್ರದ ಕುರಿತು ಮಾಹಿತಿ ಹಂಚಿಕೊಳ್ಳಲೆಂದೇ ಚಿತ್ರತಂಡ ಪತ್ರಕರ್ತರ ಮುಂದೆ ಬಂದಿತ್ತು.

ಗಡ್ಡಪ್ಪ ಅವರನ್ನು ವೇದಿಕೆಗೆ ಕರೆದ ನಿರ್ದೇಶಕರು, ಅವರ ಕೈಗೆ ಮೈಕ್‌ ಕೊಟ್ಟಾಗ, ತಮ್ಮದೇ ಧಾಟಿಯಲ್ಲಿ ಮಾತಿಗೆ ನಿಂತ ಗಡ್ಡಪ್ಪ, “ಇದಕ್ಕೆ “ಗಡ್ಡಪ್ಪ ಸರ್ಕಲ್‌’ ಅಂತ ಹೆಸರಿಟ್ಟಿದ್ದಾರೆ. ಕೇಶವ ಅವ್ರು ನಂಗೆ ಬಟ್ಟೆ, ಬರೆ, ಊಟ ಕೊಟ್ಟು ಸಿನ್ಮಾ ಮಾಡಿಸಿದ್ದಾರೆ. ಎಲ್ರೂ ಚಿತ್ರ ನೋಡಿ. ಚೆನ್ನಾಗಿದೆ’ ಅಂದರು. ನಿರ್ದೇಶಕ ಬಿ.ಆರ್‌.ಕೇಶವ ಅವರು ಗಡ್ಡಪ್ಪ ಅವರಿಗೆ ಇಲ್ಲಿ ವಿಶೇಷ ಪಾತ್ರ ಕೊಟ್ಟು ಹೈಲೈಟ್‌ ಮಾಡಿದ್ದಾರೆ.

ಆ ಕುರಿತು ಹೇಳುವ ಅವರು, “ಇದೊಂದು ಪ್ರಯೋಗ ಎನ್ನಬಹುದು. ಈವರೆಗೆ “ತಿಥಿ’ ಖ್ಯಾತಿಯ ಗಡ್ಡಪ್ಪ ಹಾಗು ಸೆಂಚುರಿ ಗೌಡ ಇಬ್ಬರಿಗೂ ಹಳ್ಳಿ ಪಾತ್ರಗಳನ್ನೇ ಕೊಡಲಾಗಿತ್ತು. ಈ ಚಿತ್ರದಲ್ಲಿ ಅವರು ಹೊಸದಾಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ, ಇದೊಂದು ಹಾಸ್ಯಮಯ ಸಿನಿಮಾ. ಸಿನಿಮಾದುದ್ದಕ್ಕೂ ತಮಾಷೆ ಜಾಸ್ತಿ. ಗಡ್ಡಪ್ಪ, ಸೆಂಚುರಿ ಗೌಡ ಅವರಿಗೆ ಸೂಟ್‌ ಹಾಕಿಸಲಾಗಿದೆ. ಇಬ್ಬರಿಗೂ ಅಂಡರ್‌ವರ್ಲ್ಡ್ ಡಾನ್‌ ಪಾತ್ರ ಕೊಡಲಾಗಿದೆ.

ಒಟ್ಟಾರೆ, ಮನರಂಜನೆ ಇಲ್ಲಿದೆ. ಚಿತ್ರ ನೋಡಿದವರು ಖುಷಿಯಿಂದ ಹೊರಬರುತ್ತಾರೆ. ಸುಮಾರು 100 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ’ ಅಂದರು ಕೇಶವ. ಅಂದು ಮತ್ತೂಂದು ವಿಶೇಷ ಕಾರ್ಯಕ್ರಮವೂ ಇತ್ತು. 2018 ರ ಸಾಲಿನ ರಾಜ್ಯ ಪ್ರಶಸ್ತಿ ಪಡೆದ ವಿಜೇತರನ್ನು ಆಹ್ವಾನಿಸಿ, ಚಿತ್ರತಂಡ ಸನ್ಮಾನಿಸಿತು. ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದ ರಾಘವೇಂದ್ರ ರಾಜಕುಮಾರ್‌, ಮೇಘನಾರಾಜ್‌, ಶ್ರೀನಿವಾಸಮೂರ್ತಿ,

ಬಸವರಾಜ್‌, ಪಿ.ಶೇಷಾದ್ರಿ, ದಯಾಳ್‌ ಪದ್ಮನಾಭ್‌, ಶಿವರುದ್ರಯ್ಯ, ವೀಣಾಸುಂದರ್‌, ಅವಿನಾಶ್‌,ರವಿಬಸ್ರೂರು, ಶರಣು ಹುಲ್ಲೂರು, ನಾಗೇಶ್‌ ಅವರನ್ನು ಅಭಿನಂದಿಸಲಾಯಿತು. ಈ ವೇಳೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್‌, ಭಾ.ಮ.ಹರೀಶ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ಕುಮಾರ್‌, ನಿರ್ಮಾಪಕ ತುಳಸೀರಾಮ್‌, ನಟ ಅಭಿ, ರಾಮ್‌, ಯೋಗಿ, ನಯನ್‌, ವಿಶ್ವಾಸ್‌, ರಾಜು ಇತರರು ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.