ವಾಮಾಚಾರದ ವಿರುದ್ಧ ‘ಗದಾಯುದ್ಧ’


Team Udayavani, Oct 1, 2022, 4:17 PM IST

ವಾಮಾಚಾರದ ವಿರುದ್ಧ ‘ಗದಾಯುದ್ಧ’

ರನ್ನನ “ಗದಾಯುದ್ಧ’ದ ಬಗ್ಗೆ ಬಹುತೇಕರು ಕೇಳಿರುತ್ತೀರಿ. ಈಗ ಅದೇ “ಗದಾಯುದ್ಧ’ ಎಂಬ ಹೆಸರಿನಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿದೆ. ಅಂದಹಾಗೆ, ಈ ಸಿನಿಮಾದ ಹೆಸರು “ಗದಾಯುದ್ಧ’ ಅಂತಿದ್ದರೂ, ಈ ಸಿನಿಮಾಕ್ಕೂ ರನ್ನನ “ಗದಾಯುದ್ಧ’ ಕೃತಿಗೂ ಯಾವುದೇ ಸಂಬಂಧವಿಲ್ಲ. ಸಿನಿಮಾದ ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ ತಮ್ಮ ಸಿನಿಮಾಕ್ಕೆ “ಗದಾಯುದ್ಧ’ ಅಂತ ಹೆಸರಿಟ್ಟಿದೆ.

ಈಗಾಗಲೇ “ಗದಾಯುದ್ಧ’ ಸಿನಿಮಾದ ಬಹುತೇಕ ಕೆಲಸಗಳನ್ನು ಸದ್ದಿಲ್ಲದೆ ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಟೀಸರ್‌ ಮತ್ತು ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ಶ್ರೀವತ್ಸ ರಾವ್‌, “ಕಣ್ಣಿಗೆ ಕಾಣುವ ಶಕ್ತಿಗಳ ವಿನಾಶಕ್ಕೆ ಮಿಸೆಲ್‌ ಬೇಕಾದರೆ, ಕಣ್ಣಿಗೆ ಕಾಣದ ಶಕ್ತಿಗಳ ವಿನಾಶಕ್ಕೆ ಗದೆ ಬೇಕು. ಅಂಥದ್ದೇ ವಿಷಯವನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ. ಭಸ್ಮಾಸುರನ ವಂಶಸ್ಥರು ಇಂದಿಗೂ ಜೀವಂತವಾಗಿದ್ದು, ಸಮುದ್ರದ ಮಧ್ಯೆದಲ್ಲಿರುವ ಒಂದು ದ್ವೀಪದಲ್ಲಿ ವಾಮಾಚಾರದ ಮೂಲಕ ಜನರನ್ನು ಕೊಲ್ಲುತ್ತಿರುತ್ತಾರೆ. ಇಂಥ ದುಷ್ಟರ ರಕ್ಷಣೆಗೆ ಭೀಮ ಮತ್ತೂಮ್ಮೆ ಹುಟ್ಟಿ ಬಂದು ಅವರನ್ನು ಹೇಗೆ ಸಂಹರಿಸುತ್ತಾನೆ ಎನ್ನುವುದು ಸಿನಿಮಾದ ಕಥೆಯ ಎಳೆ. ಕಾಲ್ಪನಿಕ ಕಥೆಯಾದರೂ ಸಾಕಷ್ಟು ಸತ್ಯ ಘಟನೆಗಳನ್ನು ಇಟ್ಟುಕೊಂಡು ಅದನ್ನು ವೈಜ್ಞಾನಿಕವಾಗಿ ಮತ್ತು ಮನರಂಜನಾತ್ಮಕವಾಗಿ ಸಿನಿಮಾದಲ್ಲಿ ಹೇಳಿದ್ದೇವೆ’ ಎಂದು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಸಿನಿಮಾದಲ್ಲಿ ಭೀಮನನ್ನು ಪ್ರತಿನಿಧಿಸುವಂಥ ಪಾತ್ರದಲ್ಲಿ ನಾಯಕ ಸುಮಿತ್‌ ಕಾಣಿಸಿಕೊಂಡಿದ್ದಾರೆ. “ಭಾರತದಲ್ಲಿ ಪ್ರತಿವರ್ಷ ಸರಿ ಸುಮಾರು 8 ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಬಹುತೇಕ ಆತ್ಮಹತ್ಯೆಗಳ ಹಿಂದೆ ಕೊಲೆಯ ಸಂಚು ಇರುತ್ತದೆ. ಪೌರಾಣಿಕ ಎಳೆ ,ವಾಮಾಚಾರ ವಿಷಯವನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಲವ್‌, ಆ್ಯಕ್ಷನ್‌, ಸಸ್ಪೆನ್ಸ್‌ ಎಲ್ಲವೂ ಸಿನಿಮಾದಲ್ಲಿದೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು ನಾಯಕ ಸುಮಿತ್‌.

ನಿರ್ಮಾಪಕ ನಿತಿನ್‌ ಶಿರಗೂರ್ಕರ್‌, ನಟಿ ಧನ್ಯಾ ಪಾಟೀಲ್‌, ನಟ ಡ್ಯಾನಿ ಕುಟ್ಟಪ್ಪ, ಛಾಯಾಗ್ರಹಕ ಸುರೇಶ ಬಾಬು, ಸಂಗೀತ ನಿರ್ದೇಶಕ ಶಾದ್ರಚ್‌ ಸೋಲೊಮನ್‌ ಸಂಗೀತ, ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್‌, ಚೇತನ್‌ ಅನಿಕೇತ್‌ ಮೊದಲಾದವರು “ಗದಾಯುದ್ಧ’ದ ಬಗ್ಗೆ ಒಂದಷ್ಟು ಮಾತನಾಡಿದರು.

ಈ ಹಿಂದೆ “ಮೃಗಶಿರ’ ಸಿನಿಮಾವನ್ನು ನಿರ್ದೇಶಿಸಿದ್ದ ಶ್ರೀವತ್ಸ ರಾವ್‌ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “ನಿತಿನ್‌ ಶಿರಗೂರ್ಕರ್‌ ಫಿಲಂಸ್‌’ ಬ್ಯಾನರಿನಲ್ಲಿ ನಿತಿನ್‌ ಶಿರಗೂರ್ಕರ್‌ ಈ ಸಿನಿಮಾ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.