ಗಾಂಧಿ ಅಭಿಮಾನಿ ನಾಥೂರಾಮ್‌


Team Udayavani, Dec 16, 2018, 11:22 AM IST

nathoram.jpg

ಇತ್ತೀಚೆಗೆ ನಿರ್ದೇಶಕ ರಿಷಭ್‌ ಶೆಟ್ಟಿ ಹೆಸರು ನಿರ್ದೇಶನಕ್ಕಿಂತ ಹೆಚ್ಚಾಗಿ ಅಭಿನಯದಲ್ಲೆ ಕೇಳಿ ಬರುತ್ತಿದೆ. ಸದ್ಯ ರಿಷಭ್‌ ಶೆಟ್ಟಿ ಅಭಿನಯಿಸಿರುವ “ಬೆಲ್‌ ಬಾಟಂ’ ಚಿತ್ರದ ಚಿತ್ರೀಕರಣ ಮುಗಿದು, ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿದೆ. ಇದರ ನಡುವೆಯೇ ರಿಷಭ್‌ ಶೆಟ್ಟಿ ಅಭಿನಯದ ಮತ್ತೂಂದು ಚಿತ್ರ “ನಾಥೂರಾಮ್’ ಸೆಟ್ಟೇರಿದೆ. ಕಿರುತೆರೆಯಲ್ಲಿ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿರುವ ವಿನು ಬಳಂಜ “ನಾಥೂರಾಮ್’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಈ ಮೂಲಕ ವಿನು ಬಳಂಜ ಹಿರಿತೆರೆಯಲ್ಲೂ ಹೊಸ ಇನ್ನಿಂಗ್ಸ್‌ ಆರಂಭಿಸುವ ಉತ್ಸಾಹದಲ್ಲಿದ್ದಾರೆ. ಇತ್ತೀಚೆಗೆ ನಡೆದ ಮುಹೂರ್ತ ಸಮಾರಂಭದಲ್ಲಿ ನಟ ರಕ್ಷಿತ್‌ ಶೆಟ್ಟಿ ಹಾಜರಿದ್ದು, “ನಾಥೂರಾಮ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಇನ್ನು ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಿದ ಚಿತ್ರತಂಡ, ಚಿತ್ರದ ಹೆಸರು “ನಾಥೂರಾಮ್’ ಅಂತಿದ್ದರೂ, ನಾಥೊರಾಮ್‌ ಗೋಡ್ಸೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ.

ಚಿತ್ರದ ನಾಯಕ  ನಾಥೂರಾಮ್ ಗಾಂಧೀಜಿ ಅವರ ಅಭಿಮಾನಿಯಾಗಿರುತ್ತಾನೆ. ಗಾಂಧಿಯ ತತ್ವಗಳನ್ನು ತನ್ನ ಜೀವನದಲ್ಲೂ ಅಳವಡಿಸಿಕೊಂಡಿರುತ್ತಾನೆ. ಇಂಥ ನಾಯಕನ ಬದುಕಿನಲ್ಲಿ ನಂತರ ಏನೇನು ಬೆಳವಣಿಗೆಗಳಾಗುತ್ತವೆ ಎನ್ನುವುದೇ “ನಾಥೂರಾಮ್’ ಚಿತ್ರದ ಎಳೆ ಎನ್ನುತ್ತದೆ ಚಿತ್ರತಂಡ. ಇದೇ ಡಿಸೆಂಬರ್‌ ಅಂತ್ಯದಿಂದ ಚಿತ್ರದ ಶೂಟಿಂಗ್‌ ಆರಂಭವಾಗಲಿದ್ದು, ಸುಮಾರು 50 ದಿನಗಳ ಕಾಲ ಶೂಟಿಂಗ್‌ ನಡೆಯಲಿದೆ. ಸದ್ಯ ಚಿತ್ರದ ನಾಯಕಿಯ ಆಯ್ಕೆ ಅಂತಿಮ ಹಂತದಲ್ಲಿದ್ದು, ಕೆಲ ದಿನಗಳಲ್ಲಿ ನಾಯಕಿಯ ಹೆಸರನ್ನು ಘೋಷಿಸುವುದಾಗಿ ತಿಳಿಸಿದೆ ಚಿತ್ರತಂಡ.

ಉಳಿದಂತೆ ರಿಷಭ್‌ ಶೆಟ್ಟಿ ಅವರೊಂದಿಗೆ ಕಿಶೋರ್‌ ಕುಮಾರ್‌, ಅಚ್ಯುತ ಕುಮಾರ್‌, ಪ್ರಮೋದ್‌ ಶೆಟ್ಟಿ ಮೊದಲಾದ ಕಲಾವಿದರ ತಾರಾಗಣವಿದೆ. ಚಿತ್ರದ ಹಾಡುಗಳಿಗೆ ಬಿ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆ ಇದೆ. ಚಿತ್ರಕ್ಕೆ ಅರವಿಂದ್‌ ಎಸ್‌. ಕಶ್ಯಪ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನ, ಮಾಸ್ತಿ ಸಂಭಾಷಣೆ ಇದೆ. ಈ ಹಿಂದೆ “ರಂಗಿತರಂಗ’ ಚಿತ್ರ ನಿರ್ಮಿಸಿರುವ  ಹೆಚ್‌.ಕೆ ಪ್ರಕಾಶ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.