ಮತ್ತೆ ಒಂದಾದ ಗಣೇಶ್ – ಪ್ರೀತಂ ಗುಬ್ಬಿ; ಯುಗಾದಿಯಂದು ಹೊಸ ಚಿತ್ರದ ಟೈಟಲ್ ರಿಲೀಸ್
Team Udayavani, Mar 31, 2022, 11:03 AM IST
ನವ ಸಂವತ್ಸರ ಯುಗಾದಿಯಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಹೊಸ ಚಿತ್ರದ ಟೈಟಲ್ ಬಿಡುಗಡೆಯಾಗಲಿದೆ. ಈ ಹಿಂದೆ ಹಲವು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ಪ್ರೀತಂ ಗುಬ್ಬಿ ಮತ್ತು ಗಣೇಶ್ ಮತ್ತೆ ಒಂದಾಗುತ್ತಿದ್ದಾರೆ.
ಈ ಹಿಂದೆ ಗಣೇಶ್ ಗೆ ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’ ಮತ್ತು ‘99’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರೀತಿಂ ಗುಬ್ಬಿ ಇದೀಗ ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಹೊಸ ಚಿತ್ರವನ್ನು ‘ಶ್ರೀವಾರಿ ಟಾಕೀಸ್’ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.
ಯುಗಾದಿಯ ದಿನದಂದು ( ಎಪ್ರಿಲ್ 2) ಬೆಳಗ್ಗೆ 8.45ಕ್ಕೆ ಹೊಸ ಚಿತ್ರದ ಟೈಟಲ್ ಬಿಡುಗಡೆಯಾಗಲಿದೆ ಎಂದು ಗಣೇಶ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ದಿನೇಶ್ ಕಾರ್ತಿಕ್ ರನ್ನು ಧೋನಿಗೆ ಹೋಲಿಸಿದ ಆರ್ ಸಿಬಿ ನಾಯಕ ಫಾಫ್
“ನವ ಸಂವತ್ಸರ ಯುಗಾದಿಯಂದು ಹೊಸ ಚಿತ್ರದ ಟೈಟಲ್ ಲಾಂಚ್. ನಾನು , ಪ್ರೀತಂ ಗುಬ್ಬಿ ಮುಂಗಾರು ಮಳೆಯಿಂದ ಸಿನಿ ಪಯಣದಲ್ಲಿ ಜೊತೆಯಾದವರು. ನಮ್ಮ ಜೋಡಿಯ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ, 99 ಚಿತ್ರಗಳನ್ನು ನೋಡಿ ಹರಸಿದ್ದೀರಿ. ಈಗ ಶ್ರೀವಾರಿ ಟೀಕೀಸ್ ನೊಂದಿಗೆ ಮತ್ತೊಂದು ಹೊಸ ಕನಸಿನ ಪಯಣದ ಪ್ರಾರಂಭ. ಹರೆಯದ ಹೃದಯಗಳೇ, ಹರಸಿ” ಎಂದು ಗಣೇಶ್ ಟ್ವೀಟ್ ಮಾಡಿದ್ದಾರೆ.
Hi All…..Something exciting ?
Movie title launch on April 2nd at 8.45am@preethamgubbi pic.twitter.com/BEbNf3Myro
— Ganesh (@Official_Ganesh) March 31, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ