ಗಣೇಶ್‌ ತಮ್ಮನ ಸಿನಿಪ್ರವೇಶ

ಸೂರಜ್‌ ಕೃಷ್ಣ ಈಗ ರಾಜ!

Team Udayavani, Sep 11, 2019, 3:03 AM IST

suraj-krishna

ಕನ್ನಡದಲ್ಲಿ ಈಗಾಗಲೇ ಅನೇಕ ಸ್ಟಾರ್‌ ನಟರ ಸಹೋದರರು ಸಿನಿಮಾ ರಂಗಕ್ಕೆ ಎಂಟ್ರಿಯಾಗಿರುವುದು ಗೊತ್ತೇ ಇದೆ. ನಿರ್ದೇಶನ, ನಿರ್ಮಾಣ ಮತ್ತು ನಟನೆ ಸೇರಿದಂತೆ ಹಲವು ವಿಭಾಗದಲ್ಲಿ ಕೆಲಸ ಮಾಡುವ ಮೂಲಕ ಗುರುತಿಸಿಕೊಂಡಿರುವುದೂ ಉಂಟು. ಆ ಸಾಲಿಗೆ ಈಗ ನಟ ಗಣೇಶ್‌ ಅವರ ಮತ್ತೂಬ್ಬ ಸಹೋದರ ಕೂಡ ಗಾಂಧಿನಗರಕ್ಕೆ ಕಾಲಿಟ್ಟಿದ್ದಾರೆ. ಈಗಾಗಲೇ ಗಣೇಶ್‌ ಅವರ ಮೊದಲ ತಮ್ಮ ಮಹೇಶ್‌ ಹೀರೋ ಆಗಿ ಕಾಣಿಸಿಕೊಂಡಿದ್ದಾಗಿದೆ.

ಈಗ ಎರಡನೇ ತಮ್ಮನ ಸರದಿ. ಹೌದು, ಗಣೇಶ್‌ ಅವರ ಮತ್ತೊಬ್ಬ ಸಹೋದರ ಉಮೇಶ್‌ ಈಗ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟಿರುವ ಉಮೇಶ್‌, ತಮ್ಮ ಹೆಸರನ್ನು ಸೂರಜ್‌ ಕೃಷ್ಣ ಎಂದು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅಷ್ಟಕ್ಕೂ ಸೂರಜ್‌ ಕೃಷ್ಣ ಅವರು ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವ ಚಿತ್ರದ ಹೆಸರು “ನಾನೇ ರಾಜ’. ಈಗಾಗಲೇ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಇನ್ನೇನು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ.

ಹಾಗೆ ನೋಡಿದರೆ, ಸೂರಜ್‌ಕೃಷ್ಣ ಅವರಿಗೆ ಸಿನಿಮಾ ಆಕಸ್ಮಿಕ ಎಂಟ್ರಿ. ಅವರು ನಾನು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತೇನೆ ಎಂಬ ಯಾವ ಕನಸನ್ನೂ ಸೂರಜ್‌ ಕೃಷ್ಣ ಕಂಡಿರಲಿಲ್ಲ. ಮಾನವ ಸಂಪನ್ಮೂಲ ವಿಷಯದಲ್ಲಿ ಮಾಸ್ಟರ್‌ ಪದವಿ ಪಡೆದಿರುವ ಸೂರಜ್‌ಗೌಡ ಅವರಿಗೆ “ನಾನೇ ರಾಜ’ ಚಿತ್ರ ಅಪರೂಪದ ಅವಕಾಶ. ಸಿಕ್ಕ ಅವಕಾಶವನ್ನು ಮಿಸ್‌ ಮಾಡಿಕೊಳ್ಳಬಾರದು ಎಂಬ ಕಾರಣಕ್ಕೆ, ಹೀರೋ ಆಗುವ ಮನಸು ಮಾಡಿದ್ದಾರೆ.

ಹಾಗಂತ ಅವರು ಸುಮ್ಮನೆ ಕ್ಯಾಮೆರಾ ಮುಂದೆ ಬಂದು ನಿಂತಿಲ್ಲ. ಒಬ್ಬ ಹೀರೋಗೆ ಇರಬೇಕಾದ ಎಲ್ಲಾ ಅರ್ಹತೆ ಪಡೆದುಕೊಂಡೇ ಕ್ಯಾಮೆರಾ ಮುಂದೆ ಬಂದು ನಿಂತಿದ್ದಾರೆ. “ನಾನೇ ರಾಜ’ ಚಿತ್ರಕ್ಕೆ ಹೀರೋ ಆದ ಕುರಿತು ಹೇಳಿಕೊಳ್ಳುವ ಸೂರಜ್‌ ಕೃಷ್ಣ, “ಇದು ನನ್ನ ಮೊದಲ ಚಿತ್ರ. ತಪ್ಪಿದ್ದರೆ ಕ್ಷಮಿಸಿ, ತಿದ್ದಿ ಹೇಳಿ, ನನ್ನನ್ನೂ ಬೆಂಬಲಿಸಿ, ಬೆಳೆಸಿ. ನಾನೆಂದಿಗೂ ಹೀರೋ ಆಗಬೇಕು ಎಂದು ಕನಸು ಕಂಡಿದ್ದೇ ಇಲ್ಲ. ಇದೆಲ್ಲಾ ಆಕಸ್ಮಿಕವಾಗಿ ಬಂದಿದ್ದು.

ಬಂದಿದ್ದನ್ನು ಸ್ವೀಕರಿಸಿದ್ದೇನೆ. ನಾನು ಇಂದು ಹೀರೋ ಆಗೋಕೆ ಕಾರಣ ನನ್ನ ಅಣ್ಣ ಗೋಲ್ಡನ್‌ ಸ್ಟಾರ್‌ ಗಣೇಶ್‌. ಅವರ ಸ್ಪೂರ್ತಿ, ಎನರ್ಜಿ ಕಾರಣ. ನಾನು ಅವರನ್ನು ನೋಡಿಕೊಂಡೇ ಬೆಳೆದವನು. ಅವರೊಂದಿಗೆ ಅನೇಕ ಚಿತ್ರಗಳ ಚಿತ್ರೀಕರಣಕ್ಕೆ ಹೋಗುತ್ತಿದ್ದೆ. ಸೂಕ್ಷ್ಮವಾಗಿಯೇ ಅವರನ್ನು ಗಮನಿಸುತ್ತಿದ್ದೆ. ಇಂದು ಸ್ವಲ್ಪ ನಟನೆ ಬಗ್ಗೆ ತಿಳಿದಿದ್ದರೆ ಅದು ಅಣ್ಣನಿಂದಲೇ. ಅಣ್ಣ ಮತ್ತು ಅತ್ತಿಗೆ ಇಬ್ಬರ ಆಶೀರ್ವಾದ ಪಡೆದಿದ್ದೇನೆ. ನನ್ನ ತಂದೆ, ತಾಯಿಯ ಆಶೀರ್ವಾದವೂ ಇದೆ.

ನನ್ನ ಇನ್ನೊಬ್ಬ ಸಹೋದರ ಮಹೇಶ್‌ ಅವರ ಸಹಕಾರ, ಪ್ರೋತಾಸಹವೂ ಇದೆ. ಇನ್ನು ಮುಂದೆ ನಿಮ್ಮಗಳ ಆಶೀರ್ವಾದ ಬೇಕು’ ಎಂಬುದು ಸೂರಜ್‌ ಕೃಷ್ಣ ಮಾತು. ಅಂದಹಾಗೆ, ಸೂರಜ್‌ ಕೃಷ್ಣ ಇಲ್ಲಿ ಹಳ್ಳಿ ಹುಡುಗನ ಪಾತ್ರ ನಿರ್ವಹಿಸಿದ್ದು, ಹಳ್ಳಿಯ ಜನರ ಸಮಸ್ಯೆ ಪರಿಹರಿಸುವ ಮತ್ತು ಕೆಲ ಸಮಸ್ಯೆಯಲ್ಲಿ ಸಿಲುಕಿಕೊಂಡು ಒದ್ದಾಡುವ ಹುಡುಗನ ಪಾತ್ರ ನಿರ್ವಹಿಸಿದ್ದಾರಂತೆ. ಈ ಚಿತ್ರವನ್ನು ಶ್ರೀನಿವಾಸ್‌ ಶಿವಾರ ನಿರ್ದೇಶಿಸಿದ್ದು, ಆನಂದ್‌ ನಿರ್ಮಾಣವಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.