ಹೈದರಾಬಾದ್ನಲ್ಲಿ ಗಣೇಶ್ ಆರೆಂಜ್
Team Udayavani, Mar 8, 2018, 3:40 PM IST
ಗಣೇಶ್ ನಾಯಕರಾಗಿರುವ “ಆರೆಂಜ್’ ಚಿತ್ರದ ಚಿತ್ರೀಕರಣ ಸದ್ದಿಲ್ಲದೇ ಆರಂಭವಾಗಿದೆ. ಹೈದರಾಬಾದ್ನಲ್ಲಿರುವ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಗಣೇಶ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ರೋಲ್ಸ್ ರಾಯ್ ಕಾರು ಸೇರಿದಂತೆ ಅದ್ಧೂರಿಯಾಗಿ ಈ ಹಾಡನ್ನು ಚಿತ್ರೀಕರಿಸಲಾಗುತ್ತಿದೆ. ಈ ಚಿತ್ರವನ್ನು ಪ್ರಶಾಂತ್ ರಾಜ್ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.
ಪ್ರಶಾಂತ್ ಹಾಗೂ ಗಣೇಶ್ ಕಾಂಬಿನೇಶನ್ನ ಎರಡನೇ ಸಿನಿಮಾ ಇದಾಗಿದ್ದು, ಈಗಾಗಲೇ ಈ ಜೋಡಿ “ಜೂಮ್’ ಸಿನಿಮಾ ಮಾಡಿದೆ. ಆ ಸಿನಿಮಾ ಒಂದು ಮಟ್ಟಕ್ಕೆ ಯಶಸ್ಸು ಕಂಡಿದ್ದು, ಈಗ ಅದೇ ತಂಡ ಜೊತೆಯಾಗಿರುವುದರಿಂದ ಚಿತ್ರದ ಬಗ್ಗೆಯೂ ನಿರೀಕ್ಷೆ ಇದೆ. ಪ್ರಶಾಂತ್ರಾಜ್ “ಜೂಮ್’ ಚಿತ್ರದಲ್ಲೂ ಗಣೇಶ್ ಅವರ ಹೇರ್ಸ್ಟೈಲ್ ಬದಲಿಸಿದ್ದರು.
ಈಗ “ಆರೆಂಜ್’ನಲ್ಲೂ ಅದು ಮುಂದುವರೆದಿದೆ. ಈಗಾಗಲೇ ಗಣೇಶ್ ಹೇರ್ಸ್ಟೈಲ್ ಬದಲಾಗಿದ್ದು, ಅಭಿಮಾನಿಗಳು ಅವರ ಗೆಟಪ್ನಲ್ಲಿ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಶಾಂತ್ ರಾಜ್, “ಆರೆಂಜ್’ ಚಿತ್ರವೂ “ಜೂಮ್’ಗಿಂಥ ಕಲರ್ಫುಲ್ ಆಗಿರುವುದಷ್ಟೇ ಅಲ್ಲ, ಮನರಂಜನೆಯೂ ಹೆಚ್ಚಿರುತ್ತದಂತೆ.
“ತೆಲುಗಿನಲ್ಲೂ ಇಂಥದ್ದೇ ಒಂದು ಹೆಸರಿನ ಚಿತ್ರ ಬಂದಿದೆ. ಆದರೆ, ರಾಮ್ಚರಣ್ ತೇಜ ಚಿತ್ರಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಅಪ್ಪಟ ಕನ್ನಡ ಚಿತ್ರ. ಸಖತ್ ಟ್ರೆಂಡಿಯಾಗಿರುತ್ತದೆ. ಶ್ರೀಮಂತ ಆಸೆಗಳು ಏನೇನಿರುತ್ತದೆ ಎಂದು ಈ ಚಿತ್ರದಲ್ಲಿ ಹೇಳುವುದಕ್ಕೆ ಹೊರಟಿದ್ದೇನೆ’ ಎನ್ನುತ್ತಾರೆ.
“ಆರೆಂಜ್’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿದ್ದು, ಚಿತ್ರದಲ್ಲಿ ಸಾಧುಕೋಕಿಲ, ರವಿಶಂಕರ್ ಗೌಡ, ರಂಗಾಯಣ ರಘು ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದ್ದು, “ಬಹದ್ದೂರ್’ ಚೇತನ್, ನಟರಾಜ್ ಸಂಭಾಷಣೆ ಬರೆಯುತ್ತಿದ್ದಾರೆ. ರವಿವರ್ಮ ಸಾಹಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’