ಸಹ ನಿರ್ದೇಶಕರ ಸಹಾಯಕ್ಕೆ ಬಂದ ಗಣೇಶ್
Team Udayavani, Apr 9, 2020, 11:08 AM IST
ಕೋವಿಡ್ 19 ಎಫೆಕ್ಟ್ ನಿಂದ ಎಲ್ಲೆಡೆ ಪರಿಸ್ಥಿತಿ ಹದಗೆಟ್ಟಿದೆ. ಕಾರ್ಮಿಕರು, ದಿನಗೂಲಿಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರರಂಗದಲ್ಲಿರುವ ಹಲವು ವಿಭಾಗಗಳಲ್ಲಿ ದುಡಿಯುತ್ತಿರುವ ತಂತ್ರಜ್ಞರು ಕೂಡ ಸಮಸ್ಯೆಗೆ ಸಿಲುಕಿದ್ದಾರೆ. ಈಗಾಗಲೆ ಕಳೆದ ಒಂದು ವಾರದಿಂದಲೂ ನಟ ಗಣೇಶ್ ಅವರು ಬಡವರನ್ನು ಗುರುತಿಸಿ, ತಮ್ಮ ಅಭಿಮಾನಿ ಸಂಘದ ಪದಾಧಿಕಾರಿಗಳ ಮೂಲಕ ದಿನಸಿ ವಿತರಿಸುವ ಮೂಲಕ ಅವರ ಕಷ್ಟಕ್ಕೆ ನೆರವಾಗಿದ್ದರು. ಈಗ ನಿರ್ದೇಶಕರ ಸಂಘದ ಸಹಾಯಕ ನಿರ್ದೇಶಕರು, ಸಹ ನಿರ್ದೇಶಕರ ನೆರವಿಗೆ ಧಾವಿಸಿದ್ದಾರೆ.
ಅವರ ಈ ಸಹಾಯ ಕಾರ್ಯಕ್ಕೆ ಮೂಡಲಪಾಳ್ಯ ವಾರ್ಡ್ನ ಬಿಬಿಎಂಪಿ ಸದಸ್ಯ ದಾಸೇಗೌಡ ಅವರು ಕೂಡ ಕೈ ಜೋಡಿಸಿದ್ದಾರೆ. ಗಣೇಶ್ ತಮ್ಮ ಅಭಿಮಾನಿ ಸಂಘದ ರೇಣು, ಜಗ್ಗಿ ಅವರ ಮುಂದಾಳತ್ವದಲ್ಲಿ ಸಹಾಯಕ ನಿರ್ದೇಶಕರು ಮತ್ತು ಸಹ ನಿರ್ದೇಶಕರಿಗೆ ಅಕ್ಕಿ,ಬೇಳೆ, ಸಕ್ಕರೆ, ಸೋಪು ಸೇರಿದಂತೆ ಇನ್ನಿತರೆ ದಿನಸಿ ವಿತರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮೇಕಪ್ ಮ್ಯಾನ್, ಕಲಾನಿರ್ದೇಶಕರ ಸಹಾಯಕರು ಸೇರಿದಂತೆ ಹಲವು ವಿಭಾಗದಲ್ಲಿ ದುಡಿಯುವ ಸಿನಿಮಂದಿಗೆ ದಿನಸಿ ವಿತರಣೆ ಮಾಡಲಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು