ಗರುಡ ಚಿತ್ರದ ಟ್ರೇಲರ್ ರಿಲೀಸ್ ಮಾಡಿದರು ಶಿವಣ್ಣ!


Team Udayavani, Oct 1, 2019, 8:01 PM IST

Garuda-01-10

ಮೂರು ವರ್ಷಗಳ ಹಿಂದೆ ‘ಸಿಪಾಯಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಿದ್ಧಾರ್ಥ್ ಮಹೇಶ್ ಅವರ ಎರಡನೇ ಚಿತ್ರ ಗರುಡ. ಆರೆಂಜ್ ಪಿಕ್ಸಲ್ಸ್ ಲಾಂಛನದಲ್ಲಿ, ಕಿಶೋರ್ ಎ ಅರ್ಪಿಸಿ, ಬಿ.ಕೆ. ರಾಜಾರೆಡ್ಡಿ ಮತ್ತು ಪ್ರಸಾದ್ ರೆಡ್ಡಿ ಎಸ್ ಅವರು ನಿರ್ಮಿಸುತ್ತಿರುವ ಚಿತ್ರದ ಪಕ್ಕಾ ಕಮರ್ಷಿಯಲ್ ಟ್ರೇಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡಿ, ಶುಭಾಶಯ ಕೋರಿದ್ದಾರೆ.

ಸರಿ ಸುಮಾರು ಹನ್ನೆರಡು ವರ್ಷಗಳಿಂದ ಸ್ವತಂತ್ರ ನೃತ್ಯ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿರುವ ಧನಕುಮಾರ್ ಗರುಡ ಸಿನಿಮಾವನ್ನು ನಿರ್ದೇಶಿಸಿಸುತ್ತಿದ್ದಾರೆ. ಸಿನಿಮಾದ ಕಂಟೆಂಟ್ ದೊಡ್ಡದು. ಹೆಚ್ಚು ಲೊಕೇಶನ್‌ ಗಳು, ಕಲಾವಿದರು ಎಲ್ಲಾ ಇರುವುದರಿಂದ ಸತತ ಮೂರು ವರ್ಷಗಳ ಕಾಲ ಗರುಡ ಚಿತ್ರಕ್ಕಾಗಿ ಸಮಯ ತೆಗೆದುಕೊಂಡಿದ್ದೇವೆ ಎನ್ನುವ ನಿರ್ದೇಶಕ ಧನಕುಮಾರ್ ಅವರಿಗೆ ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ಸಿದ್ಧಾರ್ಥ್ ಮಹೇಶ್ ಯಾವ ಸಮಸ್ಯೆಯೂ ಆಗದಂತೆ ನೋಡಿಕೊಂಡು ಸಲೀಸಾಗಿ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಟ್ಟರಂತೆ. ಗರುಡ ಚಿತ್ರದ ಟ್ರೇಲರ್ ಅನ್ನು ರಘು ದೀಕ್ಷಿತ್ ಅವರ ಯೂಟ್ಯೂಬ್ ಚಾನಲ್‌ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸದ್ಯದಲ್ಲೇ ಗರುಡ ತೆರೆಗೆ ಬರುವ ತಯಾರಿ ನಡೆಸುತ್ತಿದೆ.

‘ತುಂಬು ಕುಟುಂಬದಲ್ಲಿ ಒಂದು ಘಟನೆ ನಡೆಯುತ್ತದೆ. ಅದು ನಾಯಕನ ಹೆಗಲಿಗೆ ಸಾಮಾಜಿಕ ಜವಾಬ್ದಾರಿಯನ್ನು ವಹಿಸುತ್ತದೆ. ಅದು ಏನು ಅನ್ನೋದು ಗರುಡ ಸಿನಿಮಾದ ಎಳೆ. ಇನ್ನು ಸಾಕಷ್ಟು ಮಾಹಿತಿ ಇದೆ. ಅದನ್ನು ಚಿತ್ರ ಬಿಡುಗಡೆಯ ಮುನ್ನ ಹಂಚಿಕೊಳ್ಳುತ್ತೇವೆ. ಈ ಚಿತ್ರವನ್ನು ನಮ್ಮ ತಂದೆ ನಿರ್ಮಿಸಿದ್ದಾರೆ. ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಇದು ನನ್ನ ಎರಡನೇ ಸಿನಿಮಾ. ಎಲ್ಲೂ ಯಾವುದಕ್ಕೂ ಕೊರತೆಯಾಗದಂತೆ ನೋಡಿಕೊಂಡಿದ್ದೀನಿ ಎಂದು ನಾಯಕ ನಟ ಸಿದ್ಧಾರ್ಥ್ ಮಹೇಶ್ ನುಡಿದರು.

ನಟ ಶ್ರೀನಗರ ಕಿಟ್ಟಿ ಮಾತನಾಡುತ್ತಾ ‘‘ನಾನು ಬೇರೆ ಬೇರೆ ರೀತಿಯ ಪಾತ್ರಗಳಲ್ಲಿ ಮಾಡುತ್ತಾ ಬಂದಿದ್ದೀನಿ. ಆದರೆ, ಗರುಡ ನನ್ನ ವೃತ್ತಿ ಬದುಕಿಗೆ  ಕರ್ಮಯಲ್ ಕಲರ್ ನೀಡಿ ನನ್ನ ಕೆರಿಯರ್‌ಗೆ ಬೇರೆ ದಾರಿ ನೀಡಿದೆ. ನನ್ನ ಹಾಗೂ ರಂಗಾಯಣ ರಘು ಕಾಂಬಿನೇಷನ್ ಸಾಕಷ್ಟು ಸಿನಿಮಾಗಳಲ್ಲಿ ವರ್ಕೌಟ್ ಆಗಿದೆ. ಈ ಚಿತ್ರದಲ್ಲೂ ಅದು ಮುಂದುವರೆಯುತ್ತದೆ’’ ಎಂದರು.

‘‘ತುಂಬಾ ದಿನಗಳ ಗ್ಯಾಪ್ ನಂತರ ಒಪ್ಪಿಕೊಂಡ ಸಿನಿಮಾ ಗರುಡ. ಈ ಚಿತ್ರದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದ್ದಾಗ ನನ್ನ ಮದುವೆಯನ್ನು ಅನೌನ್ಸ್ ಮಾಡಿಕೊಂಡಿದ್ದು ಯಾವತ್ತಿಗೂ ಮರೆಯಲಾರದಂಥ ಘಳಿಗೆ. ಈ ಸಿನಿಮಾದಿಂದ ನನ್ನ ಮದುವೆ ಪ್ರಿಪರೇಷನ್ನು ಸ್ವಲ್ಪ ಸ್ಲೋ ಆಗಿಬಿಟ್ಟಿತು’’ ಎಂದು ನಟಿ ಐಂದ್ರಿತಾ ರೇ ಗರುಡ ಸಿನಿಮಾಗೂ ತಮ್ಮ ಮದುವೆಗೂ ಇರುವ ನಂಟನ್ನು ಹೇಳಿಕೊಂಡರು. ಮತ್ತೊಬ್ಬ ನಾಯಕ ನಟಿ ಆಶಿಕಾ ರಂಗನಾಥ್ ‘ಈ ಸಿನಿಮಾದಲ್ಲಿ ನನ್ನದು ಕಾಲೇಜ್ ಹುಡುಗಿ ಪಾತ್ರ. ಮನಸಲ್ಲಿ ಉಳಿಯೋ ಕ್ಯಾರೆಕ್ಟರ್’ ಎಂದಷ್ಟೇ ಹೇಳಿದರು.

ನಟ ಆದಿ ಲೋಕೇಶ್  ‘‘ಪರ್ಸನಲ್ಲಾಗಿ ಮನಸಿಗೆ ಟಚ್ ಮಾಡಿದ ಸಿನಿಮಾ ಗರುಡ. ರಿಲೀಸ್ ಆದ ಮೇಲೆ ಹೆಣ್ಮಕ್ಕಳು ನನ್ನನ್ನು ನೋಡಿದರೆ ಚಪ್ಪಲಿ ತಗೊಂಡು ಹೊಡೀತಾರೆ. ಈ ಚಿತ್ರದಲ್ಲಿ ನಿರ್ದೇಶಕ ಧನು ನನ್ನನ್ನು ರಾಕ್ಷಸನ ಥರ, ಪ್ರಾಣಿಯ ರೀತಿ ತೋರಿಸಿದ್ದಾರೆ. ಆದರೆ ಗರುಡ ಸಿನಿಮಾ ತಂಡದವರು ಎಲ್ಲರನ್ನೂ ಮನೆಯ ಸದಸ್ಯರಂತೆ ನೋಡಿಕೊಂಡಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮಾ ನಮ್ಮನ್ನೆಲ್ಲ ರಾತ್ರಿ ಹಗಲೆನ್ನದೆ ರುಬ್ಬಿದ್ದಾರೆ.’’ ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.  ಹೆಸರಾಂತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ‘ಗರುಡ‘ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರುವುದಲ್ಲದೆ, ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿರುವ ಭಜರಂಗಿ ಖ್ಯಾತಿಯ ಜೈ ಆನಂದ್ ಮಾತಾಡುತ್ತಾ ‘ಈವರೆಗೂ 23 ಸಿನಿಮಾದಲ್ಲಿ ಕೆಲಸ ಮಾಡಿದ್ದೀನಿ. ಅದರಲ್ಲಿ ಹರ್ಷ, ಮಹೇಶ್ ರಾವ್, ಲಕ್ಕಿ ಶಂಕರ್ ಸೇರಿದಂತೆ ಐದು ಜನ ಬೆಸ್ಟ್ ಡೈರೆಕ್ಟರುಗಳಿದ್ಧಾರೆ. ಈಗ ಧನಕುಮಾರ್ ಆ ಐದು ಜನರಲ್ಲಿ ಒಬ್ಬರಾಗಿದ್ದಾರೆ’’ ಎಂದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.