ಹಾಡಿನೊಂದಿಗೆ ಜಂಟಲ್ ಮನ್ ಎಂಟ್ರಿ
Team Udayavani, Dec 17, 2019, 6:35 AM IST
ನಟ ಪ್ರಜ್ವಲ್ ದೇವರಾಜ್ ನಾಯಕನಾಗಿ ಅಭಿನಯಿಸುತ್ತಿರುವ “ಜಂಟಲ್ ಮನ್’ ಚಿತ್ರ ತೆರೆಗೆ ಬರಲು ತಯಾರಿ ಮಾಡಿಕೊಳ್ಳುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಈಗ “ಜಂಟಲ್ ಮನ್’ ಆಡಿಯೋ ಬಿಡುಗಡೆಯ ಮೂಲಕ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ಕೊಡುವ ಯೋಚನೆಯಲ್ಲಿದೆ. ಇದೇ ಡಿ.18ರಂದು “ಜಂಟಲ್ ಮನ್’ ಚಿತ್ರದ ಮೊದಲ ಲಿರಿಕಲ್ ವೀಡಿಯೋ ಹಾಡು ಬಿಡುಗಡೆಯಾಗಲಿದ್ದು, ನಂತರ ಪ್ರತಿವಾರ ಚಿತ್ರದ ಒಂದೊಂದು ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.
ಗುರು ದೇಶಪಾಂಡೆ ನಿರ್ಮಾಣದಲ್ಲಿ ಮೂಡಿಬರುತ್ತಿರುವ “ಜಂಟಲ್ ಮನ್’ ಚಿತ್ರಕ್ಕೆ, ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗುರು ದೇಶಪಾಂಡೆ, “ಸದ್ಯ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರವನ್ನು ಜನವರಿಗೆ ಪ್ರೇಕ್ಷಕರ ಮುಂದೆ ತರುವ ಯೋಜನೆ ಇದೆ. ಇಲ್ಲಿಯವರೆಗೆ ನೋಡಿರದ ಅಪರೂಪದ ಕಥೆ ಚಿತ್ರದಲ್ಲಿದ್ದು, ಕನ್ನಡದ ಪ್ರೇಕ್ಷಕರ ಮಟ್ಟಿಗೆ ಇದೊಂದು ವಿಭಿನ್ನವಾದ, ವಿಶೇಷವಾದ ಕಥೆ ಎಂದೇ ಹೇಳಬಹುದು.
ಇಲ್ಲಿಯವರೆಗೆ ಯಾವತ್ತೂ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ನಟಿಸಿರುವ ಪ್ರಜ್ವಲ್ ದೇವರಾಜ್, ಪ್ರೇಕ್ಷಕರೆಲ್ಲ ಅಚ್ಚರಿಗೊಳ್ಳು ವಂಥಾ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರಪಂಚದಲ್ಲಿ ಕೆಲವೇ ಕೆಲವರನ್ನು ಬಾಧಿಸುವಂಥ ವಿಚಿತ್ರ ಕಾಯಿಲೆ ಪೀಡಿತ ಯುವಕನ ಪಾತ್ರದಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದಾರೆ. ದಿನದ ಬಹುಭಾಗವನ್ನು ನಿದ್ರೆಯಲ್ಲಿಯೇ ಕಳೆಯುವ ಯುವಕ ಎಚ್ಚರವಿರುವ ಕೆಲ ಗಂಟೆಗಳಲ್ಲಿ ಏನೆಲ್ಲ ಮಾಡುತ್ತಾನೆ, ಆತನಿಗೆ ಎದುರಾಗುವ ಸವಾಲುಗಳೇನು ಅನ್ನೋ ಥ್ರಿಲ್ಲಿಂಗ್ ಎಲಿಮೆಂಟ್ಸ್ ಸಿನಿಮಾದಲ್ಲಿದೆ’ ಎನ್ನುತ್ತಾರೆ.
“ಚಿತ್ರ ಚೆನ್ನಾಗಿ ಮೂಡಿಬಂದಿದ್ದು, ಕನ್ನಡ ಪ್ರೇಕ್ಷಕರಿಗೆ ಚಿತ್ರ ಇಷ್ಟವಾಗುವುದು’ ಎಂಬ ಭರವಸೆಯಲ್ಲಿರುವ ನಿರ್ಮಾಪಕ ಗುರು ದೇಶಪಾಂಡೆ, ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ಕೊಡುವ ಯೋಚನೆಯಲ್ಲಿದ್ದಾರೆ. ಇನ್ನು “ಜಂಟಲ್ ಮನ್’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ಜೋಡಿಯಾಗಿದ್ದಾರೆ. ಸದ್ಯ ಡಿ.18ರ ಬಳಿಕ ಹಾಡುಗಳ ಮೂಲಕ ಹೊರಬರುತ್ತಿರುವ “ಜಂಟಲ್ ಮನ್’ ಜನವರಿ ಮೂರನೇ ವಾರ ಥಿಯೇಟರ್ಗಳಲ್ಲಿ ಪ್ರೇಕ್ಷಕ ಪ್ರಭುಗಳಿಗೆ ದರ್ಶನ ಕೊಡುವ ಸಿದ್ಧತೆ ಮಾಡಿಕೊಳ್ಳುತ್ತಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ