ಉತ್ತರ ಕೊಡಿ “ಕೋಟಿ’ ಗೆಲ್ಲಿ

ಕಲರ್ಸ್‌ ಕನ್ನಡದಲ್ಲಿ ಕೋಟ್ಯಾಧಿಪತಿ ಸಮಯ!

Team Udayavani, Jun 19, 2019, 3:02 AM IST

Kannadada-Kotyadhipathi

ಜ್ಞಾನವೇ ಸಂಪತ್ತು… ಈ ಮಾತಿಗೆ “ಕನ್ನಡದ ಕೋಟ್ಯಾಧಿಪತಿ’ ಗೇಮ್‌ ಶೋ ಸಾಕ್ಷಿ. ಹೌದು, ಈಗಾಗಲೇ ಎಲ್ಲರ ಗಮನಸೆಳೆದಿರುವ “ಕನ್ನಡದ ಕೋಟ್ಯಾಧಿಪತಿ’ ಗೇಮ್‌ ಶೋ ಜೂನ್‌ 22 ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 8 ಗಂಟೆಗೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿದೆ. ಕಾರ್ಯಕ್ರಮವನ್ನು ನಟ ಪುನೀತ್‌ರಾಜಕುಮಾರ್‌ ಅವರು ನಿರೂಪಿಸುತ್ತಿರುವುದು ಮತ್ತೊಂದು ವಿಶೇಷ.

ಐದು ವರ್ಷಗಳ ಬಳಿಕ ಪುನೀತ್‌ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ ಎಂಬುದು ಇನ್ನೊಂದು ವಿಶೇಷ. ಈ ಹಿಂದೆ “ಕನ್ನಡದ ಕೋಟ್ಯಾಧಿಪತಿ’ ಗೇಮ್‌ ಶೋ, ಚೆನ್ನೈನಲ್ಲಿ ಚಿತ್ರೀಕರಣವಾಗುತ್ತಿತ್ತು. ಆದರೆ, ಈ ಬಾರಿ ಕಲರ್ಸ್‌ ಕನ್ನಡ ವಾಹಿನಿ ಬೆಂಗಳೂರಲ್ಲೇ ಅದ್ಧೂರಿ ಸೆಟ್‌ ಹಾಕಿ, ವರ್ಣರಂಜಿತ ವೇದಿಕೆಯಲ್ಲಿ ಕಾರ್ಯಕ್ರಮ ನಡೆಸುತ್ತಿದೆ.

ಈ ಕಾರ್ಯಕ್ರಮ ಕುರಿತು ಒಂದಷ್ಟು ಮಾಹಿತಿ ಹಂಚಿಕೊಂಡ ವಾಹಿನಿ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್‌, 90 ರ ದಶಕದಲ್ಲಿ ಟಿವಿಯನ್ನು ಮೂರ್ಖರ ಪೆಟ್ಟಿಗೆ ಎನ್ನಲಾಗುತ್ತಿತ್ತು. ಆದರೆ, ಈಗ ಕಾಲ ಬದಲಾದಂತೆ, ಅದನು ಜಾಣ ಪೆಟ್ಟಿಗೆ ಅಂತ ಕರೆಯಲಾಗುತ್ತಿದೆ. ಉಳಿದ ಸಂದರ್ಭದಲ್ಲಿ ಮಾತ್ರ ಒಂದಷ್ಟು ವಾದಗಳಿವೆ. ಅದೇನೆ ಇದ್ದರೂ, ಈ “ಕನ್ನಡದ ಕೋಟ್ಯಾಧಿಪತಿ’ ಶೋಗೆ ಒಳ್ಳೆಯ ಮೆಚ್ಚುಗೆ ಇದೆ. ಹೊಸದೊಂದು ಫೀಲ್‌ ಕೂಡ ಇದೆ.

ಪುನೀತ್‌ ಅವರು ನಡೆಸಿಕೊಡಲಿರುವ ಈ ಶೋ ಸಾಕಷ್ಟು ಕುತೂಹಲ ಕೆರಳಿಸಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಸ್ಪರ್ಧಿಗಳ ಆಯ್ಕೆ ನಡೆದಿತ್ತು. ಪ್ರಶ್ನೆಗಳ ಮೂಲಕ ಅವರ ಜಾಣತನದ ಉತ್ತರವನ್ನು ಗಮನಿಸಿ, ಅತೀ ಪ್ರತಿಭಾವಂತರನ್ನು ಆಯ್ಕೆ ಮಾಡಲಾಗಿದೆ. ಈ ಶೋಗೆ ಪ್ರತಿಕ್ರಿಯಿಸಿದ್ದ ಸಂಖ್ಯೆ ಲಕ್ಷಕ್ಕೂ ಅಧಿಕ. ಆ ಪೈಕಿ ಸಾವಿರಾರು ಜನರನ್ನು ಭೇಟಿ ಮಾಡಿ, ಅವರನ್ನು ಪರೀಕ್ಷಿಸಿ, ಆ ಪೈಕಿ ಒಂದಷ್ಟು ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಒಟ್ಟು 40 ಎಪಿಸೋಡ್‌ ಪ್ರಸಾರ ಮಾಡುವ ಉದ್ದೇಶವಿದೆ ಎಂದು ವಿವರ ಕೊಟ್ಟರು ಪರಮೇಶ್ವರ್‌ ಗುಂಡ್ಕಲ್‌. “ಕನ್ನಡದ ಕೋಟ್ಯಾಧಿಪತಿ’ ಗೇಮ್‌ ಶೋ ನಿರೂಪಿಸುವ ಜವಾಬ್ದಾರಿ ಹೊತ್ತಿರುವ ಪುನೀತ್‌ರಾಜಕುಮಾರ್‌ ಅವರಿಗೆ ಈ ಶೋ ನಡೆಸಿಕೊಡುತ್ತಿರುವುದಕ್ಕೆ ಹೆಮ್ಮೆ ಇದೆಯಂತೆ. ಆ ಬಗ್ಗೆ ಹೇಳುವ ಅವರು, “ಪುನಃ ಈ ಶೋಗೆ ಬಂದಿದ್ದೇನೆ. 2011 ರಲ್ಲಿ ಈ ಜರ್ನಿ ಶುರುಮಾಡಿದೆ.

ಅಪ್ಪಾಜಿಗೆ ಹಿಂದಿಯಲ್ಲಿ ಬರುತ್ತಿದ್ದ “ಕೌನ್‌ ಬನೇಗಾ ಕರೋಡ್‌ಪತಿ’ ತುಂಬ ಇಷ್ಟವಾಗಿತ್ತು. ನನಗೂ ಅದು ಇಷ್ಟವಾಗಿತ್ತು. ಆ ಶೋ ಕನ್ನಡದಲ್ಲಿ ಆಗುತ್ತೆ, ಅದಕ್ಕೆ ನಾನು ನಿರೂಪಣೆ ಮಾಡಬೇಕು ಅಂದಾಗ ಆರಂಭದಲ್ಲಿ ಭಯ ಇತ್ತು. ಆದರೂ, ಒಪ್ಪಿಕೊಂಡೆ. ಅಮಿತಾಭ್‌ ಬಚ್ಚನ್‌ ಅವರನ್ನೂ ಭೇಟಿ ಮಾಡಿದ್ದೆ. ಶೋ ಯಶಸ್ಸು ಆಗುತ್ತಾ ಎಂಬ ಭಯದಲ್ಲೇ ಕೆಲಸ ಮಾಡಿದ್ದೆ.

ಭರ್ಜರಿ ಯಶಸ್ಸು ಪಡೆದಿತ್ತು. ಈಗ ಪುನಃ ಈ ಶೋ ನಡೆಸಿಕೊಡುತ್ತಿದ್ದೇನೆ. ಸೀಟಲ್ಲಿ ಕೂತಾಗ, ಜವಾಬ್ದಾರಿ ಹೆಚ್ಚುತ್ತೆ. ಇನ್ನಷ್ಟು ಎನರ್ಜಿ ಸಿಗುತ್ತೆ. ಸ್ಪರ್ಧಿಗಳು ಗೆದ್ದರೆ ಮೊದಲು ನಾನು ಖುಷಿ ಪಡುತ್ತೇನೆ. ಏಳೆಂಟು ಪ್ರಶ್ನೆಗಳಿಗೆ ಅವರು ಉತ್ತರ ಕೊಟ್ಟರೆ, ಅವರ ಬದುಕೇ ಬದಲಾಗುತ್ತದೆ. ಸರಸ್ವತಿ ಜೊತೆ ಬರುವ ಸ್ಪರ್ಧಿಗಳು ಲಕ್ಷ್ಮೀ ಜೊತೆ ಹೋಗಬೇಕೆಂಬ ಆಸೆ ನನ್ನದು.

ಈ “ಕನ್ನಡದ ಕೋಟ್ಯಾಧಿಪತಿ’ ಶೋ ಮೂಲಕ ನನಗೂ ಇನ್ನಷ್ಟು ವಿಷಯ ತಿಳಿದುಕೊಳ್ಳಲು ಸಾಧ್ಯವಾಗುತ್ತಿದೆ’ ಎಂದರು ಅವರು. ವಯಾಕಾಮ್‌ 18 ಸಂಸ್ಥೆಯ ರೀಜನಲ್‌ ಎಂಟರ್‌ಟೈನ್‌ಮೆಂಟ್‌ ಮುಖ್ಯಸ್ಥ ರವೀಶ್‌ಕುಮಾರ್‌, “ಕನ್ನಡದ ಕೋಟ್ಯಾಧಿಪತಿ’ ನಿರ್ಮಾಪಕ ಸ್ಟುಡಿಯೋ ನೆಕ್ಸ್ಟ್ ಮುಖ್ಯಸ್ಥ ಇಂದ್ರನೀಲ್‌ ಚಕ್ರವರ್ತಿ, ಗೌರವ್‌ ಶರ್ಮ ಇದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.