ಗಣೇಶ್‌ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌ಡೇ


Team Udayavani, Jul 3, 2017, 12:21 PM IST

Ganesh-New.jpg

ನಟ ಗಣೇಶ್‌ ಭಾನುವಾರ ತಮ್ಮ ಮನೆಯಲ್ಲಿ ಅಭಿಮಾನಿಗಳ ಹಾಗೂ ಕುಟುಂಬದ ಜೊತೆ ತಮ್ಮ 38 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಶನಿವಾರ ಮಧ್ಯರಾತ್ರಿಯಿಂದಲೇ ಗಣೇಶ್‌ ಅವರ ಮನೆಯ ಮುಂದೆ ಸಾಲುಗಟ್ಟಿದ್ದ ಅಭಿಮಾನಿಗಳು, ವಿವಿಧ ಬಗೆಯ ಕೇಕ್‌ ಹಿಡಿದು ತಮ್ಮ ಪ್ರೀತಿಯ ನಾಯಕನ ಮೂಲಕ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ದೂರದ ಊರುಗಳಿಂದಲೂ ಆಗಮಿಸಿದ್ದ ಅಭಿಮಾನಿಗಳು, ಹೂವಿನ ಹಾರ ಹಾಕಿ, ಮನೆಯ ಎದುರು ಪಟಾಕಿ ಸಿಡಿಸಿ, ಜೈಕಾರ ಕೂಗಿದರು. ಸಾಲುಗಟ್ಟಿದ್ದ ಅಭಿಮಾನಿಗಳನ್ನು ಪ್ರೀತಿಯಿಂದ ಮಾತನಾಡಿಸಿದರಲ್ಲದೆ, ಅವರ ಜತೆ ಸೆಲ್ಫಿ ತೆಗೆಸಿಕೊಂಡು ಅವರನ್ನು ಖುಷಿಪಡಿಸಿದರು. ಗಣೇಶ್‌ ಅವರ ಹುಟ್ಟುಹಬ್ಬದ ಅಂಗವಾಗಿ ಶಿಲ್ಪಾ ಹಾಗೂ ಗಣೇಶ್‌ ದಂಪತಿಯ ಫೋಟೋ ಇರುವಂತಹ ವಿಶೇಷ ಕೇಕ್‌ ತಂದಿದ್ದ ಅಭಿಮಾನಿಗಳು, ಅದನ್ನು ಗಣೇಶ್‌ ದಂಪತಿಯಿಂದ ಕೈಯಿಂದಲೇ ಕತ್ತರಿಸುವ ಮೂಲಕ ಸಂಭ್ರಮಪಟ್ಟರು. ಗಣೇಶ್‌ ಅವರ ಮನೆಯ ಮುಂದೆ ಅಭಿಮಾನಿಗಳು ಪ್ರೀತಿಯಿಂದ ಕಟೌಟ್‌ ನಿಲ್ಲಿಸಿ, ಹಾರ ಹಾಕುವ ಮೂಲಕ ಅಭಿಮಾನ ಮೆರೆದಿದ್ದಾರೆ.

ದಾರಿಯುದ್ದಕ್ಕೂ ಫ್ಲೆಕ್ಸ್‌ ಹಾಕಿಸಿದ್ದ ಅಭಿಮಾನಿಗಳು,  ಪ್ರೀತಿಯ ನಾಯಕನಿಗೆ ಹಲವು ಉಡುಗೊರೆ ಕೂಡ ನೀಡಿದ್ದಾರೆ. ಈ ಸಲದ ಹುಟ್ಟುಹಬ್ಬದಲ್ಲಿ ಹಲವು ವಿಶೇಷತೆಗಳಿದ್ದವು. ಶಿಲ್ಪಾ ಗಣೇಶ್‌ ಅವರು, ಗಣೇಶ್‌ ಹುಟ್ಟುಹಬ್ಬದ ಅಂಗವಾಗಿ ಆಗಮಿಸಿದ್ದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಿಸಿದ್ದರು. ಅಷ್ಟೇ ಅಲ್ಲ, ವಿಶೇಷವಾಗಿ ಬಡ ಮಕ್ಕಳಿಗೆ ಬಟ್ಟೆ ವಿತರಿಸಲಾಯಿತು. ಅಶಕ್ತ ಮಹಿಳೆಯರಿಗೂ ಸೀರೆ ವಿತರಿಸುವ ಮೂಲಕ ಹುಟ್ಟಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಗಣೇಶ್‌.

ಇನ್ನು, ಗಣೇಶ್‌ ಅಭಿನಯದ “ಮುಗುಳು ನಗೆ’ ಚಿತ್ರಕ್ಕಾಗಿ ನಿರ್ದೇಶಕ ಯೋಗರಾಜ್‌ಭಟ್‌ ಅವರು “ಜಿಎಸ್‌ಟಿ’ ಕುರಿತಂತೆ  “ಹೊಡಿ ಒಂಭತ್ತು’ ಎಂಬ ವಿಶೇಷ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಭಟ್ಟರು ಬರೆದಿದ್ದ ಆ ಹಾಡಿಗೆ ಇತ್ತೀಚೆಗೆ ಗಣೇಶ್‌ ಹಾಗೂ ದುನಿಯಾ ವಿಜಯ್‌ ಇಬ್ಬರೂ ಆ ಹಾಡಿಗೆ ದನಿಗೂಡಿಸಿದ್ದರು. ಆ ಹಾಡನ್ನೂ ಸಹ ಬರ್ತ್‌ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ.

ಅತ್ತ ನಿರ್ದೇಶಕ ಪ್ರಶಾಂತ್‌ ರಾಜ್‌ ಅವರೂ ಸಹ ಗಣೇಶ್‌ ಹುಟ್ಟುಹಬ್ಬಕ್ಕೆ “ಆರೆಂಜ್‌’ ಚಿತ್ರದ ಟೈಟಲ್‌ ಟೀಸರ್‌ ಬಿಡುಗಡೆ ಮಾಡಿದ್ದಾರೆ. ಅದರೊಂದಿಗೆ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಕೂಡ ಬಿಡುಗಡೆ ಮಾಡಿದ್ದಾರೆ. ಇನ್ನು, ಸುನಿ ನಿರ್ದೇಶಿಸುತ್ತಿರುವ “ಚಮಕ್‌’ ಚಿತ್ರದ ಟೀಸರ್‌ ಕೂಡ ಗಣೇಶ್‌ ಹುಟ್ಟುಹಬ್ಬದಂದೇ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.