ಮುಂದಿನ ನಿಲ್ದಾಣ ಟ್ರೇಲರ್‌ಗೆ ಮೆಚ್ಚುಗೆ


Team Udayavani, Nov 21, 2019, 4:10 PM IST

Ananya

ಕೆಲವೊಂದು ಚಿತ್ರಗಳೇ ಹಾಗೆ. ತಮ್ಮ ಚಿತ್ರದ ಶೀರ್ಷಿಕೆ ಮೂಲಕವೇ ಒಂದಷ್ಟು ಕುತೂಹಲ ಕೆರಳಿಸುತ್ತವೆ. ಅಂತಹ ಚಿತ್ರಗಳ ಸಾಲಿಗೆ “ಮುಂದಿನ ನಿಲ್ದಾಣ’ ಚಿತ್ರವೂ ಸೇರಿದೆ. ಹೌದು, ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ. ನಾಲ್ವರು ಗೆಳೆಯರು ಸೇರಿ ಪ್ರೀತಿಯಿಂದ ನಿರ್ಮಿಸಿರುವ ಚಿತ್ರ ಅನ್ನೋದು ಒಂದಾದರೆ, ಇದೇ ಮೊದಲ ಸಲ ಶಾರುಖ್‌ ಖಾನ್‌ ಅವರ ಮಾಲೀಕತ್ವದ ರೆಡ್‌ ಚಿಲ್ಲೀಸ್‌ ಸ್ಟುಡಿಯೋದಲ್ಲಿ ಚಿತ್ರದ ಕಲರ್‌ ಗ್ರೇಡಿಂಗ್‌ ಮಾಡಿಸಿರುವ ಚಿತ್ರ ಅನ್ನೋದು ಮತ್ತೂಂದು ವಿಶೇಷ.

ಇವೆಲ್ಲದರ ನಡುವೆ, ಮಸಾಲ ಕಾಫಿ ತಂಡ ಸಂಗೀತ ನೀಡಿರುವ ಚಿತ್ರದ ಹಾಡೊಂದನ್ನು ಮೆಚ್ಚಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಕೂಡ ಟ್ವೀಟ್‌ ಮಾಡಿದ್ದು ಇನ್ನೊಂದು ವಿಶೇಷ. ಏಳು ಜನ ಸಂಗೀತ ನಿರ್ದೇಶಕರು ಏಳು ಹಾಡುಗಳನ್ನು ಕೊಟ್ಟಿರುವುದು ಚಿತ್ರದ ಹೊಸತನಕ್ಕೊಂದು ಸಾಕ್ಷಿ. ಸದ್ಯಕ್ಕೆ ಸಾಕಷ್ಟು ನಿರೀಕ್ಷೆ ಹುಟ್ಟಿಸುವ ಮೂಲಕ ಈಗಾಗಲೇ ಹಾಡು, ಟೀಸರ್‌, ಟ್ರೇಲರ್‌ನಲ್ಲೂ ಮೆಚ್ಚುಗೆ ಪಡೆದ “ಮುಂದಿನ ನಿಲ್ದಾಣ’ ನವೆಂಬರ್‌ 29 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ, ವಿದೇಶದಲ್ಲಿ ಚಿತ್ರದ ಪೂರ್ವಭಾವಿ ಪ್ರದರ್ಶನ ಏರ್ಪಡಿಸಲು ನಿರ್ಮಾಪಕ ಮುರಳೀಧರ್‌ ಸಿದ್ಧತೆ ನಡೆಸಿದ್ದಾರೆ.

ವಿದೇಶದಲ್ಲಿ “ಮುಂದಿನ ನಿಲ್ದಾಣ’ ಪ್ರದರ್ಶನಕ್ಕೆ ಕಾರಣ, ಅಲ್ಲಿನ ಅನಿವಾಸಿ ಭಾರತೀಯರು, ಚಿತ್ರದ ಹಾಡು, ಟ್ರೇಲರ್‌ ನೋಡಿ, ಸಿನಿಮಾ ಪ್ರದರ್ಶನ ಏರ್ಪಡಿಸಬೇಕು ಎಂದು ಮಾಡಿದ ಮನವಿ. ಹೀಗಾಗಿ, ಇಲ್ಲಿ ಬಿಡುಗಡೆಯಾಗುವ ಮೊದಲೇ ಅನಿವಾಸಿ ಭಾರತೀಯರಿಗೆ “ಮುಂದಿನ ನಿಲ್ದಾಣ’ ದರ್ಶನವಾಗಲಿದೆ ಎಂಬುದು ಚಿತ್ರತಂಡದ ಹೇಳಿಕೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಟ್ರೆಂಡಿಂಗ್‌ನಲ್ಲಿದೆ.

ಪೋಸ್ಟರ್‌ನಲ್ಲೇ ಸಣ್ಣದ್ದೊಂದು ಕುತೂಹಲ ಮೂಡಿಸಿದ್ದ ಈ ಚಿತ್ರ, ನಂತರದ ದಿನಗಳಲ್ಲಿ “ಮನಸೇ ಮಾಯ’ ಹಾಡು ಹಾಗು ವಾಸುಕಿ ವೈಭವ್‌ ಸಂಯೋಜಿಸಿ ಹಾಡಿದ “ಇನ್ನೂನು ಬೇಕಾಗಿದೆ…’ ಹಾಡು ಕೇಳುಗರಿಂದ ಮೆಚ್ಚುಗೆ ಪಡೆದಿತ್ತು. ಟ್ರೇಲರ್‌ ಕೂಡ ಮುಂಬೈನಲ್ಲೇ ರೆಡಿಯಾಗಿದ್ದು ಚಿತ್ರದ ವಿಶೇಷತೆಗಳಲ್ಲೊಂದು. ಈ ಎಲ್ಲಾ ವಿಶೇಷತೆಗಳ ಜೊತೆಗೆ ಚಿತ್ರದಲ್ಲಿ ಸುಂದರ ತಾಣಗಳು ಸಹ ಮಾತನಾಡುತ್ತವೆ. ನಾಯಕ ಪ್ರವೀಣ್‌ ತೇಜ್‌ ಇಲ್ಲಿ ಮೊದಲ ಸಲ ಸಿಕ್ಸ್‌ಪ್ಯಾಕ್‌ ಜೊತೆಗೆ ಗ್ಲಾಮರಸ್‌ ಆಗಿ ಕಾಣಿಸಿಕೊಂಡರೆ, ರಾಧಿಕಾ ನಾರಾಯಣ್‌ ಹೊಸ ಪಾತ್ರದ ಮೂಲಕ ಗಮನಸೆಳೆಯಲಿದ್ದಾರೆ. ಹೊಸ ಹುಡುಗಿ ಅನನ್ಯಾ ಕಶ್ಯಪ್‌ಗ್ೂ ಇದು ವಿಶೇಷ ಸಿನಿಮಾ ಎಂಬುದು ತಂಡದ ಮಾತು.

ವಿನಯ್‌ ಭಾರಧ್ವಜ್‌ ನಿರ್ದೇಶನದ ಈ ಚಿತ್ರದಲ್ಲಿ ದತ್ತಣ್ಣ, ಅಜೇಯ್‌ರಾಜ್‌ ಇತರರು ನಟಿಸಿದ್ದಾರೆ. ಕೋಸ್ಟಲ್‌ ಬ್ರಿಜ್‌ ಪ್ರೊಡಕ್ಷನ್ಸ್‌ ನಿರ್ಮಾಣದ ಈ ಚಿತ್ರವನ್ನು ಕಾರ್ತಿಕ್‌ ಗೌಡ ವಿತರಣೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.