ಮುಂದಿನ ನಿಲ್ದಾಣ ಟ್ರೇಲರ್‌ಗೆ ಮೆಚ್ಚುಗೆ


Team Udayavani, Nov 21, 2019, 4:10 PM IST

Ananya

ಕೆಲವೊಂದು ಚಿತ್ರಗಳೇ ಹಾಗೆ. ತಮ್ಮ ಚಿತ್ರದ ಶೀರ್ಷಿಕೆ ಮೂಲಕವೇ ಒಂದಷ್ಟು ಕುತೂಹಲ ಕೆರಳಿಸುತ್ತವೆ. ಅಂತಹ ಚಿತ್ರಗಳ ಸಾಲಿಗೆ “ಮುಂದಿನ ನಿಲ್ದಾಣ’ ಚಿತ್ರವೂ ಸೇರಿದೆ. ಹೌದು, ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ. ನಾಲ್ವರು ಗೆಳೆಯರು ಸೇರಿ ಪ್ರೀತಿಯಿಂದ ನಿರ್ಮಿಸಿರುವ ಚಿತ್ರ ಅನ್ನೋದು ಒಂದಾದರೆ, ಇದೇ ಮೊದಲ ಸಲ ಶಾರುಖ್‌ ಖಾನ್‌ ಅವರ ಮಾಲೀಕತ್ವದ ರೆಡ್‌ ಚಿಲ್ಲೀಸ್‌ ಸ್ಟುಡಿಯೋದಲ್ಲಿ ಚಿತ್ರದ ಕಲರ್‌ ಗ್ರೇಡಿಂಗ್‌ ಮಾಡಿಸಿರುವ ಚಿತ್ರ ಅನ್ನೋದು ಮತ್ತೂಂದು ವಿಶೇಷ.

ಇವೆಲ್ಲದರ ನಡುವೆ, ಮಸಾಲ ಕಾಫಿ ತಂಡ ಸಂಗೀತ ನೀಡಿರುವ ಚಿತ್ರದ ಹಾಡೊಂದನ್ನು ಮೆಚ್ಚಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಕೂಡ ಟ್ವೀಟ್‌ ಮಾಡಿದ್ದು ಇನ್ನೊಂದು ವಿಶೇಷ. ಏಳು ಜನ ಸಂಗೀತ ನಿರ್ದೇಶಕರು ಏಳು ಹಾಡುಗಳನ್ನು ಕೊಟ್ಟಿರುವುದು ಚಿತ್ರದ ಹೊಸತನಕ್ಕೊಂದು ಸಾಕ್ಷಿ. ಸದ್ಯಕ್ಕೆ ಸಾಕಷ್ಟು ನಿರೀಕ್ಷೆ ಹುಟ್ಟಿಸುವ ಮೂಲಕ ಈಗಾಗಲೇ ಹಾಡು, ಟೀಸರ್‌, ಟ್ರೇಲರ್‌ನಲ್ಲೂ ಮೆಚ್ಚುಗೆ ಪಡೆದ “ಮುಂದಿನ ನಿಲ್ದಾಣ’ ನವೆಂಬರ್‌ 29 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ, ವಿದೇಶದಲ್ಲಿ ಚಿತ್ರದ ಪೂರ್ವಭಾವಿ ಪ್ರದರ್ಶನ ಏರ್ಪಡಿಸಲು ನಿರ್ಮಾಪಕ ಮುರಳೀಧರ್‌ ಸಿದ್ಧತೆ ನಡೆಸಿದ್ದಾರೆ.

ವಿದೇಶದಲ್ಲಿ “ಮುಂದಿನ ನಿಲ್ದಾಣ’ ಪ್ರದರ್ಶನಕ್ಕೆ ಕಾರಣ, ಅಲ್ಲಿನ ಅನಿವಾಸಿ ಭಾರತೀಯರು, ಚಿತ್ರದ ಹಾಡು, ಟ್ರೇಲರ್‌ ನೋಡಿ, ಸಿನಿಮಾ ಪ್ರದರ್ಶನ ಏರ್ಪಡಿಸಬೇಕು ಎಂದು ಮಾಡಿದ ಮನವಿ. ಹೀಗಾಗಿ, ಇಲ್ಲಿ ಬಿಡುಗಡೆಯಾಗುವ ಮೊದಲೇ ಅನಿವಾಸಿ ಭಾರತೀಯರಿಗೆ “ಮುಂದಿನ ನಿಲ್ದಾಣ’ ದರ್ಶನವಾಗಲಿದೆ ಎಂಬುದು ಚಿತ್ರತಂಡದ ಹೇಳಿಕೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಟ್ರೆಂಡಿಂಗ್‌ನಲ್ಲಿದೆ.

ಪೋಸ್ಟರ್‌ನಲ್ಲೇ ಸಣ್ಣದ್ದೊಂದು ಕುತೂಹಲ ಮೂಡಿಸಿದ್ದ ಈ ಚಿತ್ರ, ನಂತರದ ದಿನಗಳಲ್ಲಿ “ಮನಸೇ ಮಾಯ’ ಹಾಡು ಹಾಗು ವಾಸುಕಿ ವೈಭವ್‌ ಸಂಯೋಜಿಸಿ ಹಾಡಿದ “ಇನ್ನೂನು ಬೇಕಾಗಿದೆ…’ ಹಾಡು ಕೇಳುಗರಿಂದ ಮೆಚ್ಚುಗೆ ಪಡೆದಿತ್ತು. ಟ್ರೇಲರ್‌ ಕೂಡ ಮುಂಬೈನಲ್ಲೇ ರೆಡಿಯಾಗಿದ್ದು ಚಿತ್ರದ ವಿಶೇಷತೆಗಳಲ್ಲೊಂದು. ಈ ಎಲ್ಲಾ ವಿಶೇಷತೆಗಳ ಜೊತೆಗೆ ಚಿತ್ರದಲ್ಲಿ ಸುಂದರ ತಾಣಗಳು ಸಹ ಮಾತನಾಡುತ್ತವೆ. ನಾಯಕ ಪ್ರವೀಣ್‌ ತೇಜ್‌ ಇಲ್ಲಿ ಮೊದಲ ಸಲ ಸಿಕ್ಸ್‌ಪ್ಯಾಕ್‌ ಜೊತೆಗೆ ಗ್ಲಾಮರಸ್‌ ಆಗಿ ಕಾಣಿಸಿಕೊಂಡರೆ, ರಾಧಿಕಾ ನಾರಾಯಣ್‌ ಹೊಸ ಪಾತ್ರದ ಮೂಲಕ ಗಮನಸೆಳೆಯಲಿದ್ದಾರೆ. ಹೊಸ ಹುಡುಗಿ ಅನನ್ಯಾ ಕಶ್ಯಪ್‌ಗ್ೂ ಇದು ವಿಶೇಷ ಸಿನಿಮಾ ಎಂಬುದು ತಂಡದ ಮಾತು.

ವಿನಯ್‌ ಭಾರಧ್ವಜ್‌ ನಿರ್ದೇಶನದ ಈ ಚಿತ್ರದಲ್ಲಿ ದತ್ತಣ್ಣ, ಅಜೇಯ್‌ರಾಜ್‌ ಇತರರು ನಟಿಸಿದ್ದಾರೆ. ಕೋಸ್ಟಲ್‌ ಬ್ರಿಜ್‌ ಪ್ರೊಡಕ್ಷನ್ಸ್‌ ನಿರ್ಮಾಣದ ಈ ಚಿತ್ರವನ್ನು ಕಾರ್ತಿಕ್‌ ಗೌಡ ವಿತರಣೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.