‘777 ಚಾರ್ಲಿ’ಗೆ ಸಿಕ್ತು ಭರ್ಜರಿ ರೆಸ್ಪಾನ್ಸ್‌: ಪ್ರೀಮಿಯರ್‌ ಶೋ ನೋಡಿದವರಿಂದ ಬಹುಪರಾಕ್‌


Team Udayavani, Jun 5, 2022, 10:14 AM IST

‘777 ಚಾರ್ಲಿ’

ರಕ್ಷಿತ್‌ ಶೆಟ್ಟಿ ನಟನೆಯ “777 ಚಾರ್ಲಿ’ ತಂಡ ಖುಷಿಯಾಗಿದೆ. ಆ ಖುಷಿಗೆ ಕಾರಣ ಪ್ರೀಮಿಯರ್‌ ಶೋನಲ್ಲಿ ಸಿಕ್ಕ ಭರ್ಜರಿ ರೆಸ್ಪಾನ್ಸ್‌. ಹೌದು, ಚಿತ್ರತಂಡ ಜೂ.02ರಿಂದಲೇ 21 ಮಹಾನಗರಗಳಲ್ಲಿ ಚಿತ್ರದ ಪ್ರೀಮಿಯರ್‌ ಶೋ ಆಯೋಜಿಸಿದೆ. ಈಗಾಗಲೇ ದೆಹಲಿ ಹಾಗೂ ಅಮೃತಸರ್‌ನಲ್ಲಿ ಶೋ ನಡೆದಿದ್ದು, ಸಿನಿಮಾ ವೀಕ್ಷಿಸಿದ ಪ್ರೇಕ್ಷಕರ ಕಣ್ಣಂಚು ಒದ್ದೆಯಾಗಿದೆ.

ದೆಹಲಿಯಲ್ಲಿ ನಡೆದ ಪ್ರೀಮಿಯರ್‌ ಶೋನಲ್ಲಿ ಲೋಕಸಭಾ ಸದಸ್ಯೆ ಹಾಗೂ ಹೋರಾಟಗಾರ್ತಿ ಮನೇಕಾ ಗಾಂಧಿ ಕೂಡಾ ಭಾಗಿಯಾಗಿ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅವರು ಖುಷಿಯಾಗಿದ್ದಾರೆ. “ಇತ್ತೀಚಿನ ದಿನಗಳಲ್ಲಿ ನಾನು ನೋಡಿದ ಒಂದು ಅತ್ಯುತ್ತಮ ಸಿನಿಮಾ. ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಜೊತೆಗೆ ಈ ಸಿನಿಮಾದಲ್ಲೊಂದು ಒಳ್ಳೆಯ ಸಂದೇಶವಿದೆ. ಇವತ್ತಿನ ಸಮಾಜಕ್ಕೆ ಆ ಸಂದೇಶ ಬಹಳ ಮುಖ್ಯವಾಗಿದೆ. ಈ ಚಿತ್ರಕ್ಕೆ ನಾನು ಐದರಲ್ಲಿ ಐದು ಸ್ಟಾರ್‌ ಕೊಡುತ್ತೇನೆ’ ಎನ್ನುವ ಮೂಲಕ “777 ಚಾರ್ಲಿ ‘ಗೆ ಮೊದಲ ಗೆಲುವು ಸಿಕ್ಕಂತಾಗಿದೆ.

ಸಿನಿಮಾದಲ್ಲಿನ ಶ್ವಾನ ಪ್ರೀತಿ, ನಾಯಕ ನಟನ ಪಾತ್ರ ಸಾಗುವ ಹಾದಿ … ಪ್ರೇಕ್ಷಕರ ಕಣ್ಣಂಚಲ್ಲಿ ನೀರು ತರಿಸುವಲ್ಲಿ ಯಶಸ್ವಿಯಾಗಿದೆ. ನಾಯಕ ನಟ ರಕ್ಷಿತ್‌ ಕೂಡಾ ಈ ಸಿನಿಮಾ ಬಗ್ಗೆ ಎಕ್ಸೈಟ್‌ ಆಗಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅವರು, “”777 ಚಾರ್ಲಿ’ ಸಿನಿಮಾದ ಬಗ್ಗೆ ಏನೂ ಹೇಳಲಾಗದು. ಏಕೆಂದರೆ, ಇದೊಂದು ಕಂಪ್ಲೀಟ್‌ ಎಮೋಶನ್ಸ್‌ ಇಟ್ಟುಕೊಂಡು ಮಾಡಿದಂಥ ಸಿನಿಮಾ. ಅದರ ಅನುಭವಗಳು ನನಗೆ ಮಾತ್ರ ಗೊತ್ತು. ಆದರೆ ಅದನ್ನು ವಿವರಿಸಲಾಗದು. “777 ಚಾರ್ಲಿ’ ಸಿನಿಮಾದಿಂದ ಏನು ಕಲಿತೆ ಅಂತ ಕೇಳಿದ್ರೆ, ವಿವರಣೆ ಕೊಡೋಕಾಗಲ್ಲ. ಇಡೀ ನಿಮಾ ನನಗೆ ಮಾತ್ರವಲ್ಲ ನಮ್ಮ ಇಡೀ ತಂಡಕ್ಕೆ ಒಂದು ಎಮೋಶನಲ್‌ ಜರ್ನಿ ಎಂದಷ್ಟೇ ಹೇಳಬಹುದು. ಸಿನಿಮಾದ ಸಬ್ಜೆಕ್ಟ್ ನನಗೆ ಅಷ್ಟರ ಮಟ್ಟಿಗೆ ಹತ್ತಿರವಾಗಿದ್ದರಿಂದ, ಇಷ್ಟು ವರ್ಷ ಸಮಯ ತೆಗೆದುಕೊಂಡು ಈ ಸಿನಿಮಾ ಮಾಡೋದಕ್ಕೆ ಸಾಧ್ಯವಾಯ್ತು’ ಎನ್ನುವುದು ರಕ್ಷಿತ್‌ ಮಾತು.

ಇದನ್ನೂ ಓದಿ:ನಾಸಾದಿಂದ “ಗುರು’ವಿನ ಅದ್ಭುತ ವಿಡಿಯೋ; ಜುನೋ ಉಪಗ್ರಹ ತೆಗೆದ ವಿಡಿಯೋ

ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರು. ಇದೊಂದು ಪ್ಯಾನ್‌ ಇಂಡಿಯಾ ಸಿನಿಮಾ ವಾಗಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿದೆ. ಯುವ ನಿರ್ದೇಶಕ ಕಿರಣ್‌ ರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್‌ ನಾಯಿ ಒಂದು “ಚಾರ್ಲಿ’ ಎಂಬ ಹೆಸರಿನ ಪೂರ್ಣ ಪ್ರಮಾಣದ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಂಡಿದೆ.

ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ರಾಜ್‌ ಬಿ. ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ಭಾರ್ಗವಿ ಮೊದಲಾದ ಕಲಾವಿದರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಪರಂವಾ ಸ್ಟುಡಿಯೋಸ್‌’ ಬ್ಯಾನರ್‌ನಲ್ಲಿ ಜಿ. ಎಸ್‌ ಗುಪ್ತಾ ಮತ್ತು ರಕ್ಷಿತ್‌ ಶೆಟ್ಟಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ನೋಬಿನ್‌ ಪೌಲ್‌ ಸಂಗೀತ ಸಂಯೋಜಿಸಿದ್ದು, ಕನ್ನಡದಲ್ಲಿ ವಿಜಯ್‌ ಪ್ರಕಾಶ್‌, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್, ತಮಿಳಿನಲ್ಲಿ ಗಾನ ಬಾಲಚಂದರ್‌, ತೆಲುಗಿನಲ್ಲಿ ರಾಮ್‌ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್‌ ಖಾನ್‌ ಕ್ರಮವಾಗಿ “777 ಚಾರ್ಲಿ’ಯ ಆಯಾಯ ಭಾಷೆಗಳ ಅವತರಣಿಕೆಗಳ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.