ಸೈಕಲ್‌ ಮೇಲೊಂದು ಭಾವನಾತ್ಮಕ ಪಯಣ


Team Udayavani, Apr 6, 2019, 10:56 AM IST

Cinema

ಮನೆಯಲ್ಲಿರುವ ಹಳೆ ವಸ್ತುಗಳು, ಹಿರಿಯರನ್ನ ಗೌರವದಿಂದ ಕಾಣಬೇಕು. ಏಕೆಂದರೆ, ಎರಡಕ್ಕೂ ಅದರದ್ದೇ ಆದ ಮಹತ್ವವಿರುತ್ತದೆ. ಅರ್ಥ ಮಾಡಿಕೊಂಡವರಿಗಷ್ಟೇ ಅದರ ಮೌಲ್ಯ ಗೊತ್ತಿರುತ್ತದೆ. ಕಾಲ ಬದಲಾದರೂ ಕೆಲವು ವ್ಯಕ್ತಿಗಳು, ವಸ್ತುಗಳ ಮಹತ್ವ ಬದಲಾಗುವುದಿಲ್ಲ. ಇದು ಈ ವಾರ ತೆರೆಗೆ ಬಂದಿರುವ “ಗೌಡ್ರು ಸೈಕಲ್‌’ ಚಿತ್ರದ ಸಂದೇಶ.

ಮಂಡ್ಯ ಸೊಗಡಿರುವ ಹಳ್ಳಿಯೊಂದರಲ್ಲಿ ಗೌರವಯುತವಾಗಿ ಜೀವನ ನಡೆಸಿಕೊಂಡು ಬರುತ್ತಿರುವ ಕೆಂಪೇಗೌಡರು ಅನೇಕರಿಗೆ ಮಾದರಿಯಾಗಿರುವ ಹಿರಿಯ ಜೀವ. ಅದೇ ಗೌಡರಿಗೆ ತಮ್ಮ ಬಳಿಯಿರುವ ಹಳೆಯ ಸೈಕಲ್‌ ಮೇಲೆ ಅದೇನೊ ಮೋಹ. ಆದರೆ ಊರಿನಲ್ಲಿರುವ ಅನೇಕರಿಗೆ ಗೌಡರ ಸೈಕಲ್‌ ಅಂದ್ರೆ ಅದೇನೋ ಅಸಡ್ಡೆ. ಕೆಲವರ ಕಣ್ಣಿಗೆ ಗೌಡ್ರ ಸೈಕಲ್‌ ಗುಜರಿ ಅಂಗಡಿ ಸೇರಬಹುದಾದ ವಸ್ತು.

ಹೀಗಿರುವಾಗಲೇ ಒಮ್ಮೆ “ಗೌಡ್ರು ಸೈಕಲ್‌’ ಕಳುವಾಗಿ ಹೋಗುತ್ತದೆ. ತನ್ನ ಜೀವ ಮತ್ತು ಜೀವನದ ಭಾಗ ಎಂದೇ ಭಾವಿಸಿರುವ ಸೈಕಲ್‌ ಕಳುವಾಗಿದ್ದರಿಂದ ಗೌಡರು ಏನು ಮಾಡುತ್ತಾರೆ? ಅಷ್ಟಕ್ಕೂ ಗೌಡರು ತಮ್ಮ ಸೈಕಲ್‌ ಮೇಲೆ ಅಷ್ಟೊಂದು ಪ್ರೀತಿಯನ್ನು ಇಟ್ಟುಕೊಂಡಿರುವುದು ಯಾಕೆ? ಕೊನೆಗೆ ಗೌಡರ ಸೈಕಲ್‌ ಅವರ ಕೈ ಸೇರುತ್ತಾ ಅಥವಾ ಗುಜರಿ ಅಂಗಡಿ ಸೇರುತ್ತಾ ಅನ್ನೋದೇ “ಗೌಡ್ರು ಸೈಕಲ್‌’ ಚಿತ್ರದ ಕಥೆ.

ಚಿತ್ರದ ಹೆಸರೇ ಹೇಳುವಂತೆ ಹಳ್ಳಿಯ ಗೌಡ್ರು ಮತ್ತು ಸೈಕಲ್‌ ಎರಡರ ಸುತ್ತ ಚಿತ್ರದ ಕಥೆ ನಡೆಯುತ್ತದೆ. ಇದರ ಜೊತೆ ಇಂದಿನ ಹುಡುಗರ ಪ್ರೀತಿ-ಪ್ರೇಮ, ಹುಡುಗಾಟ, ಗುದ್ದಾಟ ಎಲ್ಲವೂ ಚಿತ್ರದಲ್ಲಿ ಮೇಳೈಸಿದೆ. ಒಂದು ಕಮರ್ಷಿಯಲ್‌ ಚಿತ್ರದಲ್ಲಿ ಏನೇನು ಇರಬೇಕೊ ಅದೆಲ್ಲವನ್ನು ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಆದರೆ “ಗೌಡ್ರು ಸೈಕಲ್‌’ ಪಕ್ಕಾ ಹಳ್ಳಿಯ ಸೊಗಡಿನ ಕಥೆಯಾಗಿರುವುದರಿಂದ ಮತ್ತು ಭಾವನಾತ್ಮಕ ಅಂಶಗಳಿಗೆ ಚಿತ್ರದಲ್ಲಿ ಹೆಚ್ಚು ಒತ್ತುಕೊಟ್ಟಿರುವುದರಿಂದ ಚಿತ್ರ ಅಲ್ಲಲ್ಲಿ ಕೆಲವೊಮ್ಮೆ ನೋಡುಗರಿಗೆ ತೀರಾ ಗಂಭಿರವಾಗಿ ಕಾಣಿಸುತ್ತದೆ.

ಚಿತ್ರದ ಕಥಾವಸ್ತು ಚೆನ್ನಾಗಿದ್ದರೂ, ಕೆಲವೊಂದು ಸನ್ನಿವೇಶಗಳು ನಿರೂಪಣೆಯ ವೇಗಕ್ಕೆ ಕಡಿವಾಣ ಹಾಕುತ್ತವೆ. ಚಿತ್ರದ ಬಹುತೇಕ ಕಲಾವಿದರು ತಮ್ಮ ಪಾತ್ರವನ್ನ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಚಿತ್ರದ ಕೆಲವು ತಪ್ಪುಗಳನ್ನು ಸಂಭಾಷಣೆ ಮತ್ತಿತರ ಸಂಗತಿಗಳು ಮರೆಮಾಚಿಸುತ್ತವೆ. ಚಿತ್ರದ ಛಾಯಾಗ್ರಹಣ ಹಳ್ಳಿಯ ಸೊಗಡನ್ನು ಅಂದವಾಗಿ ಕಟ್ಟಿಕೊಟ್ಟಿದೆ. ಸಂಕಲನ ಕಾರ್ಯ ಪರವಾಗಿಲ್ಲ ಎನ್ನಬಹುದು.

ಉಳಿದಂತೆ ಚಿತ್ರದಲ್ಲಿ ಒಂದೆರಡು ಹಾಡುಗಳು ತಲೆದೂಗುವಂತಿದೆ. ಹಿನ್ನೆಲೆ ಸಂಗೀತಕ್ಕೆ ನಿರ್ದೇಶಕರು ಇನ್ನಷ್ಟು ಗಮನ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು. ಕೆಲವೊಂದು ಒಪ್ಪಬಹುದಾದ ತಪ್ಪುಗಳನ್ನು ಬದಿಗಿಟ್ಟು ನೋಡಿದರೆ, “ಗೌಡ್ರು ಸೈಕಲ್‌’ ಒಂದೊಳ್ಳೆ ಪ್ರಯತ್ನ ಎನ್ನಲು ಅಡ್ಡಿಯಿಲ್ಲ. ಹಳ್ಳಿಯ ಸೊಗಡನ್ನು ತೆರೆಮೇಲೆ ನೋಡಲು ಇಷ್ಟಪಡುವವರು “ಗೌಡ್ರು ಸೈಕಲ್‌’ನಲ್ಲಿ ಒಂದು ರೌಂಡ್‌ ಹಾಕಿ ಬರಬಹುದು.

ಚಿತ್ರ: ಗೌಡ್ರು ಸೈಕಲ್‌
*ನಿರ್ಮಾಣ: ಸವಿತಾ ರಾಜೇಶ್‌ ಚೌಟ
* ನಿರ್ದೇಶನ: ಪ್ರಶಾಂತ್‌ ಕೆ. ಎಳ್ಳಂಪಳ್ಳಿ
* ತಾರಾಗಣ: ಶಶಿಕಾಂತ್‌, ಬಿಂಬಶ್ರೀ, ಕೃಷ್ಣಮೂರ್ತಿ ಕವತ್ತಾರ್‌, ರಾಮಸ್ವಾಮಿ, ಎಂ.ಕೆ ಮಠ, ಆರ್ಯಹರ್ಷ ಶೆಟ್ಟಿ ಮತ್ತಿತರರು.

*ಜಿಎಸ್‌ಕೆ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.