ತೆಲುಗಿನತ್ತ ಮಾರಿಮುತ್ತು ಮೊಮ್ಮಗಳು

ಮೇರಾದೋಸ್ತ್ ಚಿತ್ರಕ್ಕೆ ಜಯಶ್ರೀ ನಾಯಕಿ

Team Udayavani, Apr 30, 2019, 3:00 AM IST

jayashree

ಮಾರಿಮುತ್ತು ಖ್ಯಾತಿಯ ನಟಿ ಸರೋಜಮ್ಮ ಅವರ ಮೊಮ್ಮಗಳು ಜಯಶ್ರೀ ಸಿನಿಮಾ ರಂಗಕ್ಕೆ ಎಂಟ್ರಿಯಾಗಿರುವ ಕುರಿತು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. “ಶಶಿಕಲಾ ಲವ್ವರ್‌ ಆಫ್ ಪುಟ್ಟರಾಜು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟ ಜಯಶ್ರೀ, ಈಗ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ.

ಹೌದು, ಕನ್ನಡದಲ್ಲೇ ಒಳ್ಳೆಯ ಚಿತ್ರಗಳನ್ನು ಎದುರು ನೋಡುತ್ತಿದ್ದ ಜಯಶ್ರೀಗೆ ತೆಲುಗು ಚಿತ್ರದಲ್ಲಿ ನಟಿಸುವ ಅವಕಾಶ ಬಂದಿದೆ. ಆ ಚಿತ್ರಕ್ಕೆ “ಮೇರಾ ದೋಸ್ತ್’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರವನ್ನು ಮುರಳಿ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ.

ತೆಲುಗಿನ ಈಟಿವಿಯಲ್ಲಿ ಒಂದು ದಶಕದ ಕಾಲ ಮನರಂಜನೆ ವಿಭಾಗದಲ್ಲಿ ಕೆಲಸ ಮಾಡಿದ್ದ ಮುರಳಿ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಇನ್ನು, ವಿಜಯ್‌ ಎಂಬ ಹೊಸ ಪ್ರತಿಭೆ ಈ ಚಿತ್ರದ ನಾಯಕ. ಚಿತ್ರದಲ್ಲಿ ನಾಯಕ, ನಾಯಕಿ ಹೊಸಬರಿದ್ದರೆ, ಉಳಿದಂತೆ ಪೋಷಕ ಪಾತ್ರಗಳಲ್ಲಿ ಅನುಭವಿ ಕಲಾವಿದರೇ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಜಯಶ್ರೀ ಮಾತು.

ಅಂದಹಾಗೆ, ಇದು ಗೆಳೆತನ ಮತ್ತು ಪ್ರೀತಿ ನಡುವಿನ ಕಥೆ. ಈಗಿನ ಟ್ರೆಂಡ್‌ಗೆ ತಕ್ಕಂತಹ ಇರುವ ಕಥೆ ಇದಾಗಿದ್ದು, ಜಯಶ್ರೀ ಅವರಿಗಿಲ್ಲಿ ಎರಡು ಶೇಡ್‌ ಇರುವ ಪಾತ್ರ ಸಿಕ್ಕಿದೆಯಂತೆ. ಒಂದು ಹಳ್ಳಿ ಹುಡುಗಿಯಾಗಿ, ಇನ್ನೊಂದು ಕಾಲೇಜು ಓದುವ ಮಾರ್ಡನ್‌ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ.

ಅದೊಂದು ರೀತಿ ಮನೆಯಲ್ಲಿ ಮುಗ್ಧವಾಗಿರುವ ಹುಡುಗಿ, ಹೊರಗೆ ಸಿಕ್ಕಾಪಟ್ಟೆ ತರೆಲ ಮಾಡುವ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ವೈದ್ಯರೊಬ್ಬರು ನಿರ್ಮಿಸುತ್ತಿದ್ದು, ಅವರಿಗೂ ಇದು ಮೊದಲ ಚಿತ್ರವಂತೆ. ಇನ್ನು, “ಮೇರಾ ದೋಸ್ತ್’ ಚಿತ್ರಕ್ಕೆ ಮೇ 6 ರಿಂದ ಚಿತ್ರೀಕರಣ ಶುರುವಾಗಲಿದೆ.

ಸುಮಾರು 30 ದಿನಗಳ ಕಾಲ ಮೂರು ಹಂತದಲ್ಲಿ ಹೈದರಾಬಾದ್‌ ನಗರ, ಹಳ್ಳಿ ಮತ್ತು ರಾಮೋಜಿ ಫಿಲ್ಮ್ಸಿಟಿ ಸೇರಿದಂತೆ ಇತರೆಡೆ ಚಿತ್ರೀಕರಣ ಮಾಡಲು ನಿರ್ಧರಿಸಿರುವ ಚಿತ್ರತಂಡದಲ್ಲಿ ನುರಿತ ತಂತ್ರಜ್ಞರು ಕೆಲಸ ಮಾಡಲಿದ್ದಾರಂತೆ. ಜಯಶ್ರೀ ಅವರಿಗೆ ತೆಲುಗು ಭಾಷೆ ಶೇ.40 ರಷ್ಟು ಗೊತ್ತಿದೆ.

ಸಲೀಸಾಗಿ ಮಾತನಾಡಲು ಬರದಿದ್ದರೂ, ಹೇಳಿದ್ದನ್ನು ಅರ್ಥ ಮಾಡಿಕೊಳ್ಳಬಲ್ಲರಂತೆ. ತಮ್ಮ ಎರಡನೇ ಚಿತ್ರಕ್ಕೆ ತೆಲುಗಿನಿಂದ ಅವಕಾಶ ಬಂದಿರುವುದರಿಂದ ಅವರಿಗೆ ಸಹಜವಾಗಿಯೇ ಖುಷಿ ಇದೆ. ಹಾಗಂತ ಅವರು ಅಲ್ಲೇ ಇದ್ದು, ಸಿನಿಮಾಗಳನ್ನು ಮಾಡುತ್ತಾರಾ ಎಂಬ ಪ್ರಶ್ನೆಗೆ,

“ಖಂಡಿತ ಇಲ್ಲ ಎಂಬ ಉತ್ತರ ಬರುತ್ತದೆ. ಕನ್ನಡದಲ್ಲಿ ಒಂದೆರಡು ಮಾತುಕತೆ ನಡೆಯುತ್ತಿದ್ದು, ಈ ಚಿತ್ರ ಮುಗಿಸಿಕೊಂಡು ಪುನಃ ಕನ್ನಡದಲ್ಲೇ ಕೆಲಸ ಮಾಡ್ತೀನಿ. ಒಳ್ಳೆಯ ಅವಕಾಶ ಸಿಕ್ಕರೆ ಮಾತ್ರ ಯಾವ ಭಾಷೆ ಇದ್ದರೂ ಮಾಡ್ತೀನಿ’ ಎನ್ನುತ್ತಾರೆ ಜಯಶ್ರೀ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.