ತ್ರಿಕೋನದಲ್ಲಿ ಅಜ್ಜ-ಅಜ್ಜಿ ಕಥೆ


Team Udayavani, Sep 19, 2018, 11:54 AM IST

trikona.jpg

ಕನ್ನಡದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಅಂದರೆ, 2014 ರಲ್ಲಿ “143′ ಎಂಬ ಚಿತ್ರ ಬಂದಿದ್ದು ನೆನಪಿರಬಹುದು. ನಿರ್ದೇಶಕ ಚಂದ್ರಕಾಂತ್‌, ನಾಯಕ ಮತ್ತು ನಾಯಕಿ ಎರಡು ಪಾತ್ರಗಳನ್ನಿಟ್ಟುಕೊಂಡು ಹೊಸಬಗೆಯ ಚಿತ್ರವನ್ನು ಕಟ್ಟಿಕೊಟ್ಟಿದ್ದರು. ಆ ಚಿತ್ರಕ್ಕೆ ಜನಮೆಚ್ಚುಗೆ ಸಿಕ್ಕಿದ್ದಷ್ಟೇ ಅಲ್ಲ, ರಾಜ್ಯ ಪ್ರಶಸ್ತಿಯೂ ಲಭಿಸಿತ್ತು. ಹೊಸ ಪ್ರಯೋಗದ ಚಿತ್ರ ಕೊಟ್ಟಿದ್ದ ಚಂದ್ರಕಾಂತ್‌ ಎಲ್ಲಿ ಹೋಗಿದ್ದರು ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಹೌದು, ಅವರೀಗ ಹೊಸದೊಂದು ಚಿತ್ರದೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಅವರ ಎರಡನೇ ನಿರ್ದೇಶನದ ಚಿತ್ರಕ್ಕೆ ಇಟ್ಟ ಹೆಸರು “ತ್ರಿಕೋನ’. ಈ ಚಿತ್ರದಲ್ಲಿ ಅವರು ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ನಿರ್ದೇಶನವಷ್ಟೇ ಮಾಡಿದ್ದಾರೆ. ಅವರ “ತ್ರಿಕೋನ’ ಚಿತ್ರದ ಹೀರೋ ಸುರೇಶ್‌ ಹೆಬ್ಳೀಕರ್‌. ಅವರಿಗೆ ನಾಯಕಿ ಲಕ್ಷ್ಮೀ. ಹೌದು ಇದು 60 ಪ್ಲಸ್‌ ಜೋಡಿಯ ಹೊಸ ಕಥೆ.

ಇವರೊಟ್ಟಿಗೆ 45 ಪ್ಲಸ್‌ ಜೋಡಿಯ ಕಥೆಯೂ ಸಾಗಲಿದೆ. ಅಚ್ಯುತ್‌ ಕುಮಾರ್‌ ಮತ್ತು ಸುಧಾರಾಣಿ ಜೋಡಿಯ ಕಥೆಯೂ ಇಲ್ಲೊಂದು ವಿಶೇಷತೆ ಹೊಂದಿದೆ. ಇದಷ್ಟೇ ಅಲ್ಲ, 25 ಪ್ಲಸ್‌ ಹುಡುಗನ ಕಥೆಯೂ ಒಳಗೊಂಡಿದೆ. ರಾಜ್‌ವೀರ್‌ ಎಂಬ ಹುಡುಗ ಆ ವಯಸ್ಸಿನ ಕಥೆಯ ಹೈಲೆಟ್‌. ಎಲ್ಲಾ ಸರಿ, 25, 45 ಮತ್ತು 60 ಪ್ಲಸ್‌ ವಯಸ್ಸಿನವರ ಕಥೆಯಲ್ಲೇನಿದೆ ಅಂದರೆ, “ಇದೊಂದು ಆ್ಯಕ್ಷನ್‌ ಕಮ್‌ ಥ್ರಿಲ್ಲರ್‌ ಬೇಸ್ಡ್ ಸಿನಿಮಾ. ಇಲ್ಲಿ ಎಲ್ಲವೂ ಇರಲಿದೆ.

ನೋವು, ನಲಿವು, ತಮಾಷೆ ಇತ್ಯಾದಿಯೊಂದಿಗೆ ಒಂದು ಹೊಸತನದ ಹೂರಣ ಇಲ್ಲಿ ಉಣಬಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಒಂದೇ ಮಾತಲ್ಲಿ ಹೇಳುವುದಾದರೆ, ಅಜ್ಜ-ಅಜ್ಜಿಯ ಕಥೆಯೇ ಇಲ್ಲಿ ಪ್ರಮುಖವಾಗಿದೆ ಎನ್ನುವ ನಿರ್ದೇಶಕ ಚಂದ್ರಕಾಂತ್‌, ಸುಮಾರು 40 ದಿನಗಳ ಕಾಲ ಬೆಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಇತ್ಯಾದಿ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ.  ಇನ್ನು, ಈ ಚಿತ್ರಕ್ಕೆ ರಾಜ್‌ಶೇಖರ್‌ ನಿರ್ಮಾಪಕರು.

ಅವರದೇ ಒನ್‌ಲೈನ್‌ ಸ್ಟೋರಿ. ಅದನ್ನಿಟ್ಟುಕೊಂಡು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾಗಿ’ ಹೇಳುತ್ತಾರೆ ಚಂದ್ರಕಾಂತ್‌. “143′ ಚಿತ್ರದ ಬಳಿಕ ಸಾಕಷ್ಟು ನಿರ್ಮಾಪಕರು ಬಂದು ಚಿತ್ರ ಮಾಡಿಕೊಡುವಂತೆ ಹೇಳಿದರಾದರೂ, ರೆಗ್ಯುಲರ್‌ ಕಥೆ ಫಾರ್ಮೆಟ್‌ ಹೊರತಾಗಿ ಬೇರೇನೋ ಮಾಡಬೇಕು ಅಂದುಕೊಂಡಿದ್ದೆ. ನನ್ನ ಕಲ್ಪನೆಗೆ ತಕ್ಕಂತಹ ಕಲಾವಿದರು ಬೇಕಿತ್ತು,

ಅದನ್ನು ಪ್ರೋತ್ಸಾಹಿಸಿ, ಬೆಂಬಲಿಸುವ ನಿರ್ಮಾಪಕರೂ ಬೇಕಿತ್ತು. ಹಾಗಾಗಿ ಎರಡನೇ ಚಿತ್ರ ಶುರುವಾಗಲು ತಡವಾಗಿದೆ. ಈಗ “ತ್ರಿಕೋನ’ ಚಿತ್ರ ಮುಗಿದಿದ್ದು, ಎಡಿಟಿಂಗ್‌ ಕೆಲಸದಲ್ಲಿ ತೊಡಗಿಕೊಂಡಿದೆ’ ಎನ್ನುತ್ತಾರೆ ಚಂದ್ರಕಾಂತ್‌. ಈ ಚಿತ್ರಕ್ಕೆ ಸುರೇಂದ್ರನಾಥ್‌ ಸಂಗೀತವಿದ್ದು, ಎರಡು ಹಾಡುಗಳಿಗೆ ಸಂಯೋಜನೆ ಮಾಡಿದ್ದಾರೆ. ಶ್ರೀನಿವಾಸ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.