“ತ್ರಿಪುರ’ ರಿಲೀಸ್ಗೆ ಗ್ರೀನ್ ಸಿಗ್ನಲ್
Team Udayavani, Aug 6, 2019, 3:00 AM IST
ಅಶ್ವಿನಿ ಗೌಡ, ಶ್ರೀಧರ್, ಧರ್ಮ, ಟೆನ್ನಿಸ್ ಕೃಷ್ಣ, ಲಕ್ಷ್ಮಣ್ ರಾವ್, ಕಿಲ್ಲರ್ ವೆಂಕಟೇಶ್, ರಮಾನಂದ್, ಸುಂದರಶ್ರೀ, ಡಿಂಗ್ರಿ ನಾಗರಾಜ್, ಬೇಬಿ ಆದ್ಯ, ಪವಿತ್ರ, ಮಂಜುನಾಥ್ ಮುಂತಾದ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ತ್ರಿಪುರ’ ಚಿತ್ರ ತೆರೆಗೆ ಬರುವ ಸನ್ನಾಹದಲ್ಲಿದೆ. ಇತ್ತೀಚೆಗೆ “ತ್ರಿಪುರ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ಸ್ ನೀಡದೆ “ಯು/ಎ’ ಸರ್ಟಿಫಿಕೆಟ್ ನೀಡಿ, ಬಿಡುಗಡೆಗೆ ಅಸ್ತು ಎಂದಿದೆ.
ಶ್ರೀ ಅಂಕುರ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ರಂಗಭೂಮಿ ಕಲಾವಿದ, ತಬಲಾ ವಿದ್ವಾಂಸಕ ಎಲ್.ಮಂಜುನಾಥ್ ನಿರ್ಮಿಸುತ್ತಿದ್ದಾರೆ. ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಲವ್ ಸ್ಟೋರಿಯನ್ನು ಹೊಂದಿರುವ “ತ್ರಿಪುರ’ ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ.