ಗುಳೆ ಹೊರಟವರ ಬದುಕಿಗೆ ದೃಶ್ಯ ರೂಪ


Team Udayavani, Feb 11, 2020, 7:00 AM IST

Gule-Short-movie

ಜನರು ಉದ್ಯೋಗವನ್ನು ಅರಸಿಕೊಂಡು, ಬದುಕನ್ನ ಅರಸಿಕೊಂಡು ಒಂದು ಕಡೆಯಿಂದ ಮತ್ತೂಂದು ಕಡೆ “ಗುಳೆ’ ಹೋಗುವುದನ್ನು ನೀವು ನೋಡಿರಬಹುದು. ಅನಾದಿ ಕಾಲದಿಂದಲೂ ಹತ್ತಾರು ಕಾರಣಗಳನ್ನು ಇಟ್ಟುಕೊಂಡು ಜನರು “ಗುಳೆ’ ಹೋಗುವುದು ನಡೆದುಕೊಂಡೇ ಬರುತ್ತಿದೆ. ಈಗ ಇದೇ “ಗುಳೆ’ ಎನ್ನುವ ಹೆಸರಿನಲ್ಲೇ ಕಿರುಚಿತ್ರವೊಂದು ನಿರ್ಮಾಣವಾಗಿದೆ. ಸುಮಾರು 20 ನಿಮಿಷದ ಅವಧಿಯ ಈ ಕಿರುಚಿತ್ರದಲ್ಲಿ ಉತ್ತರ ಕರ್ನಾಟಕದ ಬಡ ಜನರ ಜೀವನವನ್ನು ತೆರೆಮೇಲೆ ತರುವ ಪ್ರಯತ್ನ ಮಾಡಲಾಗಿದೆ.

ಉತ್ತರ ಕರ್ನಾಟಕದ ಭಾಗದವರೇ ಆಗಿರುವ ಶ್ರೀನಾಥ್‌ ಎಸ್‌. ಹಡಗಲಿ ತನ್ನ ಜೀವನದಲ್ಲಿ ನಡೆದ ಮತ್ತು ತಾನು ಕಣ್ಣಾರೆ ಕಂಡ ಕೆಲ ಘಟನೆಗಳಿಗೆ ಚಿತ್ರರೂಪ ನೀಡಿ ಈ ಕಿರುಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ತಮ್ಮ ಕಿರುಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ಶ್ರೀನಾಥ್‌ ಎಸ್‌. ಹಡಗಲಿ,”ಕುಡುಕ ಗಂಡ, ಕಟ್ಟಡದಲ್ಲಿ ಕೆಲಸ ಮಾಡುವ ಹೆಂಡತಿ. ಇವರಿಬ್ಬರಿಗೊಬ್ಬ ಮಗ. ಅವನಿಗೆ ಶಾಲೆಗೆ ಹೋಗುವ ಬಯಕೆ. ಇದಕ್ಕೆ ಅಪ್ಪನಿಂದ ವಿರೋಧ.

ಸರ್ಕಾರದ ಆದೇಶದಂತೆ ಶಿಕ್ಷಕಿ ಮಗುವನ್ನು ಶಾಲೆಗೆ ಕಳುಹಿಸಲು ಕೋರಿದಾಗ ಅವನಿಂದ ಸ್ಪಂದನೆ ಸಿಗುವುದಿಲ್ಲ. ಅವಳಿಗೆ ಮಗು ವಿದ್ಯೆ ಕಲಿಯಬೇಕು ಎನ್ನುವ ಆಸೆ. ಕೊನೆಗೆ ಆ ಹುಡುಗನಿಗೆ ಶಿಕ್ಷಣ ಸಿಗುತ್ತದೆಯಾ, ಎನ್ನುವುದೇ ಈ ಕಿರುಚಿತ್ರ’ ಎಂದು ಕಥೆಯ ಎಳೆಯನ್ನು ತೆರೆದಿಟ್ಟರು. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ, ಯೋಗರಾಜ್‌ ಭಟ್‌, ನಟ ಸಂಚಾರಿ ವಿಜಯ್‌ ಮೊದಲಾದವರು ಹಾಜರಿದ್ದು “ಗುಳೆ’ ಕಿರುಚಿತ್ರವನ್ನು ಅನಾವರಣಗೊಳಿಸಿದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ಪಿ. ಶೇಷಾದ್ರಿ, “ನಮ್ಮ ಬದುಕಿನಲ್ಲಿ ಗುಳೆ ಯಾವಾಗಲೂ ನಡೆಯುತ್ತದೆ ಎನ್ನಬಹುದು. ಚಿತ್ರದ ಯಶಸ್ಸಿಗೆ ಇಲ್ಲಿಯವರೆವಿಗೂ ಯಾರೂ ಸೂತ್ರ ಕಂಡುಹಿಡಿದಿಲ್ಲ. ಭಾಷೆ, ಪ್ರಾದೇಶಿಕ, ನೈಜ ಸ್ಥಳ ಜೊತೆಗೆ ಶಿಕ್ಷಣದ ಬಗ್ಗೆ ಸಂದೇಶ ಮೂಡಿಸಿರುವುದು ಶ್ಲಾಘನೀಯವಾಗಿದೆ’ ಎಂದರು. ಕಾರ್ಯಕ್ರಮದಲ್ಲಿ ಹಾಜರಿದ್ದ ನಿರ್ದೇಶಕ ಯೋಗರಾಜ್‌ ಭಟ್‌, ನಟ ಸಂಚಾರಿ ವಿಜಯ್‌ “ಗುಳೆ’ ಕಿರುಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಇನ್ನು “ಗುಳೆ’ ಕಿರುಚಿತ್ರದಲ್ಲಿ ಮಾಸ್ಟರ್‌ ಮುತ್ತು ಶಾಲಾ ಬಾಲಕನಾಗಿ ಕಾಣಿಸಿಕೊಂಡರೆ, ಪುಟ್ಟಣ್ಣ ವಿಜಯಪುರ್‌ ಮತ್ತು ಶೃತಿ ಶಿವಶಂಕರ್‌ ಬಾಲಕನ ಪೋಷಕರಾಗಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಶಾಲಾ ಶಿಕ್ಷಕಿಯಾಗಿ ಅಭಿನಯಿಸಿದ್ದಾರೆ. ಸಂಗೀತ ರಾಜೀವ್‌ “ಗುಳೆ’ ಕಿರುಚಿತ್ರದ ಹಾಡಿಗೆ ಧ್ವನಿಯಾಗಿ, ರಾಗ ಸಂಯೋಜಸಿದ್ದಾರೆ. ಪ್ರಶಾಂತ್‌ ಗೌಡ ಛಾಯಾಗ್ರಹಣ, ಗೌತಮ್‌ ಎ. ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. “ಅಯ್ಯರ್‌ ಟಾಕೀಸ್‌’ ಬ್ಯಾನರ್‌ನಲ್ಲಿ ಮನೋಹರ್‌ ಅಯ್ಯರ್‌ “ಗುಳೆ’ ಕಿರುಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.