ಹೊಸ ಚಿತ್ರಕ್ಕಾಗಿ “ಗುಳ್ಟು’ ನವೀನ್‌ ತಾಲೀಮು


Team Udayavani, May 27, 2019, 3:24 PM IST

Cinema

ಕಳೆದ ವರ್ಷ ತೆರೆಗೆ ಬಂದಿದ್ದ “ಗುಳ್ಟು’ ಚಿತ್ರ ನಿಮಗೆ ನೆನಪಿರಬಹುದು. ಬಹುತೇಕ ಹೊಸ ಪ್ರತಿಭೆಗಳೆ ಸೇರಿ ಮಾಡಿದ್ದ ಈ ಚಿತ್ರ ಸೂಪರ್‌ ಹಿಟ್‌ ಕೂಡ ಆಗಿತ್ತು. ಆದರೆ ಆ ಚಿತ್ರದ ನಂತರ ಅದರ ನಾಯಕ ನಟ ನವೀನ್‌ ಶಂಕರ್‌ ಬೇರೆ ಯಾವ ಚಿತ್ರಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಅದೇ “ಗುಳ್ಟು’ ಖ್ಯಾತಿಯ ನವೀನ್‌ ಶಂಕರ್‌ ಹೊಸ ಚಿತ್ರವೊಂದನ್ನು ಮಾಡುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಹೌದು, ನವೀನ್‌ ಹುಟ್ಟುಹಬ್ಬದ ಪ್ರಯುಕ್ತ ಅವರು ಅಭಿನಯಿಸುತ್ತಿರುವ ಮುಂಬರುವ ಚಿತ್ರದ, ಇನ್ನೂ ಹೆಸರಿಡದ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಇನ್ನು ಈ ಹೊಸ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದ್ದು, ಜೂನ್‌ ತಿಂಗಳಿನಲ್ಲಿ ಚಿತ್ರ ಸೆಟ್ಟೇರಲಿದೆ ಎನ್ನಲಾಗುತ್ತಿದೆ. ಈ ಹಿಂದೆ ಪುರಿ ಜಗನ್ನಾಥ್‌ ಸೇರಿದಂತೆ ಹಲವು ಖ್ಯಾತ ನಾಮ ನಿರ್ದೇಶಕರ ಜೊತೆಗೆ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಶ್ರೀಧರ್‌ ಷಣ್ಮುಖ ಎನ್ನುವ ನವ ಪ್ರತಿಭೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಅಂದಹಾಗೆ, ಇದೊಂದು ಹೈಪರ್‌ ಲಿಂಕ್‌ ಅಥವಾ ಹಾಫ್ ಬೀಟ್‌ ಶೈಲಿಯ ಚಿತ್ರ ಎಂದು ಹೇಳಲಾಗುತ್ತಿದ್ದು, ಕ್ರೈಮ್‌ ಕಥಾನಕ ಹೊಂದಿರುವ ಈ ಚಿತ್ರದಲ್ಲಿ ಲವ್‌, ಸೆಂಟಿಮೆಂಟ್‌, ಕಾಮಿಡಿ, ಆ್ಯಕ್ಷನ್ಸ್‌ ಎಲ್ಲವೂ ಇರಲಿದೆಯಂತೆ. ಚಿತ್ರದಲ್ಲಿ ಪ್ರತಿಯೊಂದು ಪಾತ್ರಗಳೂ ಪ್ರಮುಖವಾಗಿದ್ದು, ಒಂದಕ್ಕೊಂದು ಪಾತ್ರಗಳು ಕನೆಕ್ಟ್ ಆಗುತ್ತ ಚಿತ್ರದ ಕಥೆ ಸಾಗುತ್ತ ಹೋಗುತ್ತವೆ. ಅಂತಿಮವಾಗಿ ಏನಾಗುತ್ತದೆ ಅನ್ನೋದೆ ಚಿತ್ರದ ಕ್ಲೈಮ್ಯಾಕ್ಸ್‌. ಎಲ್ಲಾ ವರ್ಗದ ಆಡಿಯನ್ಸ್‌ಗೂ ಇಷ್ಟವಾಗುವಂತ ಕಥೆ ಚಿತ್ರದಲ್ಲಿರಲಿದ್ದು, ಚಿತ್ರದ ಒಂದೊಂದೆ ಪಾತ್ರಗಳನ್ನ ಪರಿಚಯ ಮಾಡಿ, ಜೂನ್‌ ಅಂತ್ಯದೊಳಗೆ ಶೂಟಿಂಗ್‌ಗೆ ಹೊರಡುವ ಯೋಜನೆ ಇದೆ ಎನ್ನುತ್ತದೆ ಚಿತ್ರತಂಡ.

“ಬಾಕ್ಸ್‌ ಆಫೀಸ್‌ ಸಿನಿ ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಓಂಕಾರ್‌ ಮತ್ತು ಪ್ರಶಾಂತ್‌ ಅಂಚನ್‌ ನಿರ್ಮಾಪಕರಾಗಿ ಬಂಡವಾಳ ಹೂಡುತ್ತಿದ್ದಾರೆ. ಉಳಿದಂತೆ ಚಿತ್ರಕ್ಕೆ ಕೀರ್ತನ್‌ ಪೂಜಾರಿ ಛಾಯಗ್ರಹಣ, ರೋಣದ ಬಕ್ಕೇಶ್‌ ಮತ್ತು ಕಾರ್ತಿಕ್‌ ಚೆನ್ನೋಜಿರಾವ್‌ ಸಂಗೀತ ನೀಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಗೌಸ್‌ ಪೀರ್‌ ,ಶಿವಕುಮಾರ್‌ ಶೆಟ್ಟಿ ಮತ್ತು ಅಭಿನಂದನ್‌ ದೇಶ್‌ ಪ್ರಿಯಾ ಸಾಹಿತ್ಯವಿದೆ. ಸದ್ಯ ಸೆಟ್ಟೇರಲು ತೆರೆಮರೆಯಲ್ಲಿ ತಯಾರಿ ನಡೆಸುತ್ತಿರುವ ಈ ಹೊಸ ಚಿತ್ರದ ಟೈಟಲ್‌, ಕಲಾವಿದರು, ತಂತ್ರಜ್ಞರು ಮತ್ತಿತರ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.