ಗುರುರಾಜ್‌ಗೆ ಮಗನ ಯುಗಾದಿ ಗಿಫ್ಟ್


Team Udayavani, Apr 8, 2019, 3:00 AM IST

gururaj

ಕನ್ನಡ ಚಿತ್ರರಂಗದಲ್ಲಿ ಪ್ರತಿ ಹಬ್ಬಕ್ಕೂ ಪ್ರಮುಖ ಆದ್ಯತೆ ಇದ್ದೇ ಇರುತ್ತೆ. ಅದು ಗಣೇಶ ಹಬ್ಬವಿರಲಿ, ದೀಪಾವಳಿ ಇರಲಿ, ದಸರಾ ಹಬ್ಬವಿರಲಿ ಹಾಗೆಯೇ ಯುಗಾದಿ ಹಬ್ಬವೇ ಇರಲಿ. ಚಿತ್ರಗಳಲ್ಲಿ ಹಬ್ಬದ ಸಂಕೇತ ಎಂಬಂತೆ ಹಾಡುಗಳನ್ನು ಕಟ್ಟಿಕೊಡುವ ಪ್ರಯತ್ನ ಮೊದಲಿನಿಂದಲೂ ನಡೆದಿದೆ. ಈಗಲೂ ನಡೆಯುತ್ತಲೇ ಇದೆ.

1963 ರಲ್ಲಿ ಬಿಡುಗಡೆಯಾದ “ಕುಲವಧು’ ಚಿತ್ರದಲ್ಲಿ ಸಂಗೀತ ನಿರ್ದೇಶಕ ಜಿ.ಕೆ.ವೆಂಕಟೇಶ್‌ ಅವರು ‘ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ..’ ಎಂಬ ಹಾಡನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಹಾಡು ಇಂದಿಗೂ ಜನಪ್ರಿಯ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ.

ಈಗ ಇದೇ ಹಾಡನ್ನು ಹೊಸ ಸಂಗೀತ ಸ್ಪರ್ಶದೊಂದಿಗೆ ಅದರಲ್ಲೂ ಯುರೋಪಿಯನ್‌ ಕೋರಸ್‌ನೊಂದಿಗೆ ವಿನೂತನ ರಾಗ ಬಳಸಿ ಪುನಃ ಕೇಳುವಂತೆ ಮಾಡಲಾಗಿದೆ. ಅಂದಹಾಗೆ, ಇಂಥದ್ದೊಂದು ಪ್ರಯತ್ನ ಮಾಡಿರೋದು ಸಂಗೀತ ನಿರ್ದೇಶಕ ಸಾಗರ್‌ ಗುರುರಾಜ್‌.

ಈ “ಯುಗಾದಿ’ ಹಾಡಿಗೆ ವಿನೂತನ ರಾಗ ಸಂಯೋಜಿಸಿ ತನ್ನ ತಂದೆ ಸೌಂಡ್‌ ಆಫ್ ಮ್ಯೂಸಿಕ್‌ನ ಗುರುರಾಜ್‌ ಅವರಿಗೆ ಕೊಡುಗೆ ನೀಡಿದ್ದಾರೆ. “ಕುಲವಧು’ ಚಿತ್ರದಲ್ಲಿರುವ ಹಾಡಿನ ಸಾಹಿತ್ಯಕ್ಕೆ ಈಗಿನ ಪೀಳಿಗೆ ಕೂಡ ಇಷ್ಟಪಡುವಂತೆ ರಾಕ್‌ ಸ್ಪರ್ಶದೊಂದಿಗೆ ತಬಲ ಮತ್ತು ಯುರೋಪಿಯನ್‌ ಕೋರಸ್‌ ಜೊತೆ ಹೊಸ ರಾಗದಲ್ಲಿ ಹಾಡನ್ನು ಸಿದ್ಧಪಡಿಸಲಾಗಿದೆ.

ಇನ್ನೊಂದು ಹೊಸ ಸುದ್ದಿಯೆಂದರೆ, ಈ ಹಾಡಿಗೆ ಚಿತ್ರೀಕರಣವನ್ನೂ ನಡೆಸಲಾಗಿದೆ. ಸೌಂಡ್‌ ಆಫ್ ಮ್ಯೂಸಿಕ್‌ನ ಗುರುರಾಜ್‌ ಮತ್ತು ಜ್ಯೋತಿ ರವಿಪ್ರಕಾಶ್‌ ಅವರು ಹಾಡುವುದರ ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ರಾಜ್ಯದಲ್ಲಿರುವ ಸುಂದರ ಪ್ರಮುಖ ತಾಣಗಳನ್ನು ಆಯ್ಕೆ ಮಾಡಿಕೊಂಡು, ಗ್ರೀನ್‌ಮ್ಯಾಟ್‌ನಲ್ಲಿ ಚಿತ್ರೀಕರಿಸಿ, ಗ್ರಾಫಿಕ್ಸ್‌ನೊಂದಿಗೆ ಹಾಡು ಚಂದಗೊಳಿಸಲಾಗಿದೆ.

ಈ ಹಾಡಿಗೆ ಸುಮಾರು 1.50 ಲಕ್ಷ ರು.ವೆಚ್ಚ ತಗುಲಿದ್ದು, ಮುಂದಿನ ದಿನಗಳಲ್ಲಿ ಯುಗಾದಿ ಹಬ್ಬಕ್ಕೆ ಸಂಬಂಧಿಸಿದಂತೆ ವಿ.ವಿ.ಗೋಪಾಲ್‌, ಹಲ್ಲಗೆರೆ ಶಂಕರ್‌ ಮತ್ತು ಸುಮನ್‌ದೇಸಾಯಿ ಅವರು ಬರೆದಿರುವ ಮೂರು ಗೀತೆಗಳಿಗೆ ನರಸಿಂಹನಾಯಕ್‌ ಸಂಗೀತ ಸಂಯೋಜಿಸಿದ್ದು, ಆ ಹಾಡು ಕೂಡ ಹೊರ ಬರಲಿದೆ ಎಂಬುದು ಗುರುರಾಜ್‌ ಮಾತು. ಈ ಹಾಡನ್ನು ಈಗ ಯುಟ್ಯೂಬ್‌ನಲ್ಲಿ ವೀಕ್ಷಿಸಬಹುದಾಗಿದೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.