ರೋಚಕ ಘಟ್ಟದಲ್ಲಿ ಗುರು ಶಿಷ್ಯರ ಪಂದ್ಯ


Team Udayavani, Sep 7, 2022, 11:22 AM IST

ರೋಚಕ ಘಟ್ಟದಲ್ಲಿ ಗುರು ಶಿಷ್ಯರ ಪಂದ್ಯ

ನಟ ಶರಣ್‌ ಅಭಿನಯದ ಬಹುನಿರೀಕ್ಷಿತ “ಗುರು ಶಿಷ್ಯರು’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಚಿತ್ರ ಇದೇ ಸೆಪ್ಟೆಂಬರ್‌ 23 ರಂದು ತೆರೆಗೆ ಬರಲಿದ್ದು, ಚಿತ್ರದ ಟ್ರೇಲರ್‌ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟ್ರೆಲರ್‌ ಹಿಟ್‌ಲಿಸ್ಟ್‌ ಸೇರಿದ್ದು, ಶರಣ್‌ ಕೆರಿಯರ್‌ನಲ್ಲಿ ವಿಭಿನ್ನ ಸಿನಿಮಾವಾಗಿ ನಿಲ್ಲುವ ಸೂಚನೆ ನೀಡಿದೆ.

ಚಿತ್ರದಲ್ಲಿ ಶರಣ್‌ 80ರ ದಶಕದ ಪಿಟಿ ಮಾಸ್ಟರ್‌ ಪಾತ್ರದಲ್ಲಿ ನಟಿಸಿದ್ದು, ಶರಣ್‌ಗೆ ಶಿಷ್ಯರಾಗಿ 12 ಮಕ್ಕಳು ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಗ್ರಾಮೀಣ ಆಟವಾದ ಖೋ ಖೋ ಹಿನ್ನೆಲೆ ಚಿತ್ರದಲ್ಲಿ ಹೈಲೆಟ್‌ ಆಗಿದ್ದು, ಇಂದಿನ ಪೀಳಿಗೆಗೆ ಖೋ ಖೋ ನೆನಪಿಸುವ ಒಂದು ಪ್ರಯತ್ನ ಎಂದು ಹೇಳಬಹುದು. 80-90ರ ದಶಕದ ಮಕ್ಕಳಿಗೆ ಚಿರಪರಿಚಿತವಾದ ಖೋ ಖೋ, ಇಂದಿನ ಕಾಲದ ಮಕ್ಕಳು ಆ ಆಟದ ಹೆಸರನ್ನು ಕೇಳಿರಲಿಕ್ಕಿಲ್ಲ. ಅಂಥಹ ಅಪ್ಪಟ ಗ್ರಾಮೀಣ ಕ್ರೀಡೆಯನ್ನು “ಗುರು ಶಿಷ್ಯರು’ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ.

ಶರಣ್‌ ಅಂದಮೆಲೆ ಕಾಮಿಡಿಗೆ ಕೊರತೆಯಿಲ್ಲ . ಅಂತೆಯೇ ಟ್ರೇಲರ್‌ನಲ್ಲಿ ಕಾಣುವಂತೆ ಶರಣ್‌ ಕಾಮಿಡಿ ಪ್ರೇಕ್ಷಕರನ್ನು ರಂಜಿಸಲಿದ್ದು, ಕಾಮಿಡಿ ಜೊತೆ ಜೊತೆಗೆ ಒಂದು ಲವ್‌ ಟ್ರ್ಯಾಕ್‌ ಕೂಡ ಚಿತ್ರದಲ್ಲಿದೆ ಎಂಬುದನ್ನು ಟ್ರೇಲರ್‌ನಲ್ಲಿ ಹೇಳಲಾಗಿದೆ. ಕೇವಲ ಪಿಟಿ  ಮಾಸ್ಟರ್‌ ಆಗಿ ಬಂದ ವ್ಯಕ್ತಿ ಹಳ್ಳಿ ಜನರ ಪಾಲಿಗೆ ರಕ್ಷಕನಾಗುತ್ತಾನೋ ಅಥವಾ ಶಿಕ್ಷಕನಾಗುತ್ತಾನೋ ಎನ್ನುವ ಕುತೂಹಲದ ಘಟ್ಟದೊಂದಿಗೆ ಟ್ರೇಲರ್‌ ಕೊನೆಗೊಳ್ಳುತ್ತದೆ.

ಚಿತ್ರದಲ್ಲಿ ನಿಶ್ವಿ‌ಕಾ ನಾಯ್ಡು ಹಾಲು ಮಾರುವ ಹುಡುಗಿಯಾಗಿ ಸೂಜಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಒಟ್ಟು 12 ಮಕ್ಕಳು ಕಾಣಿಸಿಕೊಂಡಿದ್ದು, ಇದರಲ್ಲಿ ಆರು ಮಂದಿ ಸೆಲೆಬ್ರೆಟಿಗಳ ಮಕ್ಕಳು ನಟಿಸಿದ್ದಾರೆ.

“ಲಡ್ಡು ಸಿನಿಮಾ ಹೌಸ್‌’ ಬ್ಯಾನರ್‌ ಅಡಿಯಲ್ಲಿ ಶರಣ್‌ ಕೃಷ್ಣಾ ನಿರ್ಮಾಣ, ತರುಣ್‌ ಸುಧೀರ್‌ ಸಹ ನಿರ್ಮಾಣವಿರುವ ಚಿತ್ರಕ್ಕೆ ಜಗದೀಶ್‌ ಕೆ ಹಂಪಿ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಶರಣ್‌ಗೆ ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ಅಭಿನಯಿಸಿದ್ದು, ದತ್ತಣ, ಸುರೇಶ್‌ ಹೇಬ್ಳಿಕರ್‌ ಮುಂತಾದವರು ಪ್ರಮುಖ   ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಬೇಡಿಕೆ ಹಾಗೂ ಬಿಝಿ ಸಂಭಾಷಣೆಕಾರ ಮಾಸ್ತಿ ಅವರ ಸಂಭಾಷಣೆ ಚಿತ್ರಕ್ಕಿದ್ದು, ಟ್ರೇಲರ್‌ನಲ್ಲಿರುವ ಸಂಭಾಷಣೆ ಗಮನ ಸೆಳೆಯುತ್ತಿದೆ.

ಬಿ.ಅಜನೀಶ್‌ ಲೋಕ್‌ನಾಥ್‌ ಸಂಗೀತ, ಆರೂರು ಸುಧಾಕರ್‌ ಶೆಟ್ಟಿ ಛಾಯಾಗ್ರಹಣವಿದೆ.

ಅದ್ಧೂರಿ ಟ್ರೇಲರ್‌ ರಿಲೀಸ್‌ :  ಇತ್ತೀಚೆಗೆ ಚಿತ್ರದ ಟ್ರೇಲರ್‌ ರಿಲೀಸ್‌ ಇವೆಂಟ್‌ ಅದ್ಧೂರಿಯಾಗಿ ನಡೆಯಿತು. ಹಿರಿಯ ನಟ ದ್ವಾರಕೀಶ್‌, ಉಮೇಶ್‌, ನಟರಾದ “ದುನಿಯಾ’ ವಿಜಯ್‌, ಪ್ರಜ್ವಲ್‌ ದೇವರಾಜ್‌ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ವೇಳೆ ಚಿತ್ರದಲ್ಲಿ ನಟಿಸಿದ 12 ಮಕ್ಕಳು ಹಾಗೂ ಅವರ ಪಾಲಕರು ಕೂಡಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.