ಜೂನ್‌ಗೆ ಹ್ಯಾಂಗೋವರ್‌


Team Udayavani, May 20, 2019, 3:00 AM IST

hangover

ಯುವ ನಿರ್ದೇಶಕ ವಿಠಲ್‌ ಭಟ್‌ ನಿರ್ದೇಶನದ “ಹ್ಯಾಂಗೋವರ್‌’ ಈಗ ಮತ್ತೆ ಸದ್ದು ಮಾಡುತ್ತಿದೆ. ಇಲ್ಲಿಯವರೆಗೆ ಚಿತ್ರ ಬಿಡುಗಡೆ ತಯಾರಿಯಲ್ಲಿದ್ದ ಚಿತ್ರತಂಡ, ಈಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಹೌದು, ಜೂನ್‌ ತಿಂಗಳಲ್ಲಿ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ದೇಶಕ ವಿಠಲ್‌ ಭಟ್‌ ನಿರ್ಧರಿಸಿದ್ದಾರೆ.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದ್ದು, ಸಮಾಜ ಮತ್ತು ಪೋಷಕರು ಕೊಟ್ಟ ಸ್ವಾತಂತ್ರವನ್ನು ಯಾವುದೇ ಕಾರಣಕ್ಕೂ ದುರುಪಯೋಗ ಮಾಡಿಕೊಳ್ಳದೆ, ತಮ್ಮ ಹದಿಹರೆಯದ ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂಬ ಸಣ್ಣ ಸಂದೇಶದೊಂದಿಗೆ ಚಿತ್ರ ಮಾಡಿದ್ದಾಗಿ ಹೇಳುತ್ತಾರೆ ನಿರ್ದೇಶಕ ವಿಠಲ್‌ ಭಟ್‌.

ಚಿತ್ರದಲ್ಲಿ ಮೂವರು ನಾಯಕರಿದ್ದಾರೆ. ಅವರಿಗೆ ಮೂವರು ನಾಯಕಿಯರು. ಅವರೆಲ್ಲರೂ ಒಂದು ಕಾಕ್ಟೆಲ್‌ ಪಾರ್ಟಿ ಮುಗಿಸಿ, ನಾಯಕನ ಫಾರ್ಮ್ಹೌಸ್‌ಗೆ ಬಂದು, ಅಲ್ಲೇ ವಿಶ್ರಾಂತಿ ಪಡೆಯುತ್ತಾರೆ. ಮುಂಜಾನೆ ಎಚ್ಚರವಾದಾಗ, ಆ ಪೈಕಿ ಒಬ್ಟಾಕೆಯ ಕೊಲೆಯಾಗಿರುತ್ತೆ. ಆ ಕೊಲೆಯ ಸುತ್ತ ನಡೆಯುವ ಕಥೆಯೇ “ಹ್ಯಾಂಗೋವರ್‌’.

ಹಾಗಾದರೆ, ಆ ಕೊಲೆ ಮಾಡಿದ್ದು ಯಾರು? ಕುಡಿದ ಅಮಲಿನಲ್ಲಿ ಆ ಕೊಲೆ ನಡೆದುಹೋಯ್ತಾ? ಆ ಕುತೂಹಲಕ್ಕೆ ಚಿತ್ರ ನೋಡಬೇಕು. ಇನ್ನು ಚಿತ್ರದಲ್ಲಿ ನಟಿ ನೀತು ಶೆಟ್ಟಿ ಒಂದು ಹಾಡಿಗೆ ಹೆಜ್ಜೆ ಹಾಕಿದ್ದಾರೆ. “ನಾನೇ ರುಕ್ಕು… ಕೊಡ್ತೀನಿ ಒಂದು ಲುಕ್ಕು ಮತ್ತು ದಿನವೂ ಒಂದು ರೋಚಕ, ಹುಡುಕೋ ಒಳ್ಳೇ ಕೌತಕ …’ ಎಂಬ ಗೆಳೆತನದ ಹಾಡುಗಳಿಗೆ ಸಂಗೀತ ನಿರ್ದೇಶಕ ವೀರ್‌ಸಮರ್ಥ್ ರಾಗ ಸಂಯೋಜಿಸಿದ್ದಾರೆ.

ಚಿತ್ರಕ್ಕೆ ಚೇತನ್‌ ಬಹದ್ದೂರ್‌ ಮತ್ತು ಕೃಷ್ಟ ರಿಟ್ಟಿ ಸಾಹಿತ್ಯವಿದೆ. ಚಿತ್ರದಲ್ಲಿ ಭರತ್‌, ರಾಜ್‌, ಚಿರಾಗ್‌, ಮಹತಿ ಭಿಕ್ಷು, ಸಹನ್‌ ಮೊನ್ನಮ್ಮ, ನಂದಿನಿ ನಟರಾಜ್‌, ಶಫಿ, ಅಶ್ವಥ್‌ ನೀನಾಸಂ, ಶ್ರೀಧರ್‌, ಯತಿರಾಜ್‌ ಇತರರು ನಟಿಸಿದ್ದಾರೆ. ಮೈಸೂರು, ಬೆಂಗಳೂರು, ಊಟಿ ಸೇರಿದಂತೆ ಸುಮಾರು 32 ದಿನಗಳ ಚಿತ್ರೀಕರಣ ನಡೆದಿದೆ. ರಾಕೇಶ್‌ ನಿರ್ಮಾಣವಿದೆ. ಗಣೇಶ್‌ ರಾಣೆಬೆನ್ನೂರು ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.