ಕುತೂಹಲ ಹೆಚ್ಚಿಸುವ ‘ಯದಾ ಯದಾ ಹೀ’: ಜೂನ್ 2ರಂದು ರಿಲೀಸ್


Team Udayavani, May 23, 2023, 12:04 PM IST

ಕುತೂಹಲ ಹೆಚ್ಚಿಸುವ ‘ಯದಾ ಯದಾ ಹೀ’: ಜೂನ್ 2ರಂದು ರಿಲೀಸ್

ಮದುವೆಯಾದ ನಂತರ ಇದೇ ಮೊದಲ ಬಾರಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ತೆರೆಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವ “ಯದಾ ಯದಾ ಹೀ’ ಚಿತ್ರವೂ ಜೂನ್‌ 2ರಂದು ಈ ಚಿತ್ರ ರಾಜ್ಯಾದ್ಯಂತ ತೆರೆಕಾಣುತ್ತಿದ್ದು, ಜಾಕ್‌ ಮಂಜು ಅವರು ಚಿತ್ರವನ್ನು ರಿಲೀಸ್‌ ಮಾಡುತ್ತಿದ್ದಾರೆ. ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇತ್ತೀಚೆಗಷ್ಟೇ ಈ ಚಿತ್ರದ ಟೈಟಲ್‌ ಸಾಂಗನ್ನು ಕಿಚ್ಚ ಸುದೀಪ್‌ ಅವರು ಬಿಡುಗಡೆ ಮಾಡಿದ್ದರು. ಈ ಗೀತೆಗೆ ವಸಿಷ್ಠಸಿಂಹ ಹಾಗೂ ಹರಿಪ್ರಿಯ ದನಿಯಾಗಿದ್ದಾರೆ. ತೆಲುಗು ವರ್ಷನ್ನಲ್ಲಿ ನಟಿ ರೆಜಿನಾ ಅವರು ನಿರ್ವಹಿಸಿದ್ದ ಪಾತ್ರವನ್ನು, ಇಲ್ಲಿ ಹರಿಪ್ರಿಯಾ ಅವರು ಮಾಡಿದ್ದಾರೆ. ಹಿರಿಯ ನಟ ಅವಿನಾಶ್‌ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ದಿಗಂತ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.

ತೆಲುಗು ಮೂಲದ ಅಶೋಕ ತೇಜ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಈಗಾಗಲೇ ತೆಲುಗಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರೂ, ಕನ್ನಡದಲ್ಲಿ ಇದು ಮೊದಲ ಸಿನಿಮಾ.

ಇನ್ನು ಈ ಚಿತ್ರಕ್ಕೆ ಗೈಸ್‌ ಅಂಡ್‌ ಡಾಲ್ಸ್ ಕ್ರಿಯೇಶನ್ಸ್‌ ಮೂಲಕ ಹೈದರಾಬಾದ್‌ ಮೂಲದ ರಾಜೇಶ್‌ ಅಗರವಾಲ್‌ ಅವರು ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಕೇರಳದ ಮುನ್ನಾರ್‌, ಚಿಕ್ಕಮಗಳೂರು, ಹೈದರಾಬಾದ್‌ ಹಾಗೂ ಬೆಂಗಳೂರು ಸುತ್ತಮುತ್ತ ಸುಮಾರು 55 ದಿನಗಳ ಕಾಲ ಚಿತ್ರೀಕರಿಸಲಾಗಿದೆ.

ಈ ವೇಳೆ ಮಾತನಾಡಿದ ದಿಗಂತ್‌, ನಾವೆಲ್ಲಾ ಸಿನಿಮಾ ನೋಡಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಚಿತ್ರದ ನಿರ್ಮಾಪಕ, ನಿರ್ದೇಶಕರು ತೆಲುಗಿನವರು. ಆದರೆ, ಕನ್ನಡದ ಮೇಲಿನ ಪ್ರೀತಿಯಿಂದ ಇಲ್ಲಿ ಬಂದು ಸಿನಿಮಾ ಮಾಡಿದ್ದಾರೆ. ಇದೊಂದು ಸದಭಿರುಚಿಯ ಸಿನಿಮಾವಾಗಿ ಇಷ್ಟವಾಗುತ್ತದೆ. ನಾನಿಲ್ಲಿ ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದೇನೆ. ಮೊದಲ ಬಾರಿಗೆ ಈ ತರಹದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ನೆ’ ಎಂದರು.

ನಂತರ ವಸಿಷ್ಠ ಸಿಂಹ ಮಾತನಾಡಿ, “ನಿರ್ದೇಶಕ ಅಶೋಕ್‌ ತೇಜ ಅವರು ಬಂದು ನನಗೆ ಈ ಕಥೆಯನ್ನು ಹೇಳಿದಾಗ ತುಂಬಾ ಇಂಟರೆಸ್ಟಿಂಗ್‌ ಅನಿಸಿತು. ತೆಲುಗಿನ ಯವುಡು ಕಾದಂಬರಿ ಆಧಾರಿತ ಚಿತ್ರ. ಒಂದೊಳ್ಳೆಯ ಜರ್ನಿ ಕಥೆ ಇದರಲ್ಲಿದೆ. ಟೈಟಲ್‌ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಸಿನಿಮಾದಲ್ಲಿನ ಪಾತ್ರಗಳು, ಅವುಗಳ ತೊಳಲಾಟಗಳನ್ನು ಹೇಳುವ ಸಾಹಿತ್ಯವಿದು. ಈಗಾಗಲೇ ಚಿತ್ರವನ್ನು ನೋಡಿದ್ದು, ಖುಷಿಯಾಗಿದ್ದೇವೆ. ಇದರಲ್ಲಿ ಪ್ರೀತಿ, ಮೋಸ, ದ್ವೇಷ ಎಲ್ಲವೂ ಇದೆ’ ಎಂದು ಹೇಳಿದರು,

ನಾಯಕಿ ಹರಿಪ್ರಿಯಾ ಮಾತನಾಡಿ, “ಈ ಕಥೆ ಕೇಳಿದಾಗಲೇ ನನಗೆ ತುಂಬಾ ಇಷ್ಟವಾಗಿತ್ತು. ಸಿನಿಮಾ ನೋಡಿ ಮತ್ತಷ್ಟು ಖುಷಿ ಕೊಟ್ಟಿತು. ನಾನು ವಸಿಷ್ಠ, ದಿಗಂತ್‌ ಮೂರೂ ಜನ ಸ್ಪರ್ಧೆಗೆ ಬಿದ್ದವರಂತೆ ನಟಿಸಿದ್ದೇವೆ. ನನ್ನದು ಅಭಿನಯಕ್ಕೆ ಹೆಚ್ಚು ಅವಕಾಶ ಇರುವಂಥ ಪಾತ್ರ. ತುಂಬಾ ಚಾಲೆಂಜಿಂಗ್‌ ಕೂಡ ಆಗಿತ್ತು. ಸಿನಿಮಾನೂ ಕ್ಲಾಸ್‌ ಆಗಿ ಮೂಡಿಬಂದಿದ್ದು, ಪ್ರೇಕ್ಷಕರಿಗೆ ಕುತೂಹಲ ಕೆರಳಿಸುತ್ತಾ ಹೋಗುತ್ತದೆ’ ಎಂದರು.

ನಿರ್ಮಾಪಕ ರಾಜೇಶ್‌ ಅಗರ್‌ವಾಲ್‌ ಮಾತನಾಡುತ್ತಾ, “ನನ್ನ ನಿರ್ಮಾಣದ ಮೊದಲ ಕನ್ನಡ ಚಿತ್ರವಿದು. ಸಿನಿಮಾ ಮಾಡೋದು ನನ್ನ ಕನಸು. ಮೂಲ ಕಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡು ಕನ್ನಡ ನೇಟಿವಿಟಿಗೆ ತಕ್ಕಂತೆ ಚಿತ್ರ ಮಾಡಿದ್ದೇವೆ. ದೊಡ್ಡ ಬಜೆಟ್‌ನಲ್ಲಿ ಒಳ್ಳೆಯ ಸಿನಿಮಾ ನಿರ್ಮಿಸಿದ್ದೇವೆ’ ಎಂದರು.

ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿಯಾಗಿದೆ. ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ಶ್ರೀಚರಣ್‌ ಪಾಕಾಲ ಅವರ ಸಂಗೀತ ನಿರ್ದೇಶನವಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.