ನೀರ್ದೋಸೆ ಚಿತ್ರದ ಹಿಂದಿನ ಕಥೆ ತೆರೆದಿಟ್ಟ ಹರಿಪ್ರಿಯಾ
Team Udayavani, Apr 21, 2020, 9:40 AM IST
ನೀರ್ ದೋಸೆ ಚಿತ್ರದಲ್ಲಿ ಬೆಳ್ಳುಳ್ಳಿ ಅಲಿಯಾಸ್ ಕುಮುದಾ ಪಾತ್ರದ ಮೂಲಕ ಪ್ರೇಕ್ಷಕರ ನಿದ್ದೆಗೆಡಿಸಿದ್ದ ನಟಿ ಹರಿಪ್ರಿಯಾ ಲಾಕ್ ಡೌನ್ ದಿನಗಳಲ್ಲಿ ಮತ್ತೂಮ್ಮೆ ಆ ಪಾತ್ರದ ಕುರಿತು ಮಾತನಾಡಿದ್ದಾರೆ.
ತಮ್ಮ ಬ್ಲಾಗಿನಲ್ಲಿ ಈ ಕುರಿತು ಬರೆದುಕೊಂಡ ನಟಿ ಹರಿಪ್ರಿಯಾ ನಿರ್ದೇಶಕ ವಿಜಯಪ್ರಸಾದ್ ಅವರ ಚಿತ್ರದಲ್ಲಿ ಕೆಲಸ ಮಾಡಿದ ಅನುಭವ ಮತ್ತು ಧೂಮಪಾನದ ಪರಿಣಾಮಗಳನ್ನು ಹಂಚಿಕೊಂಡಿದ್ದಾರೆ. ನಾನು ಧೂಮಪಾನ ಮಾಡುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ, ಆದರೆ ಇಲ್ಲಿ ನಾನು ನನ್ನ ಬೆರಳುಗಳ ನಡುವೆ ಸಿಗರೇಟ್ ಹಿಡಿದಿರುತ್ತೇನೆ ಮತ್ತು ಅದನ್ನು ಹೇಗೆ ಪಫ್ ಮಾಡುವುದೆಂದು ಕಲಿತೆ ಎಂದು ಹರಿಪ್ರಿಯಾ ಹೇಳುತ್ತಾರೆ. ಇದಕ್ಕೆ ಸಂಬಂಧಿಸಿದಂತೆ, ಧೂಮಪಾನಿಗಳಾಗಿದ್ದ ತನ್ನ ಸಹೋದರ ಮತ್ತು ಸ್ನೇಹಿತರಿಂದ ಸಲಹೆಗಳನ್ನು ಹರಿಪ್ರಿಯಾ ಪಡೆದಿದ್ದರಂತೆ.
ನಾನು ಯಾವಾಗಲೂ ಧೂಮಪಾನವನ್ನು ತ್ಯಜಿಸುವಂತೆ ಹೇಳುತ್ತಿದ್ದೆ. ಆದರೆ ನಾನೇ ಒಂದು ದಿನ ಕೈನಲ್ಲಿ ಸಿಗರೇಟ್ ಹಿಡಿಯಲಿದ್ದೇನೆಂದು ಯಾರು ಭಾವಿಸಿದ್ದರು? ಧೂಮಪಾನವು ತುಂಬಾ ಕೆಟ್ಟ ಪರಿಣಾಮ ಬೀರುವುದರಿಂದ ಜನರು ಹೇಗೆ ವ್ಯಸನಿಯಾಗುತ್ತಾರೆ ಎಂದು ಹರಿಪ್ರಿಯಾಆಶ್ಚರ್ಯಪಡುತ್ತಾರೆ. ಅಲ್ಲದೆ ಈ ಸಿಗರೇಟ್ ಸೇವನೆ ಆಕೆಯ ಮೇಲೂ ಎಷ್ಟು ಕೆಟ್ಟ ಪರಿಣಾಮ ಬೀರಿದೆ ಎಂದೂ ನೆನಪಿಸಿಕೊಳ್ಳುತ್ತಾರೆ.
ಆ ದಿನಗಳಲ್ಲಿ ನನಗೆ ಪ್ರತಿ ಸಾರಿ ಮೈಗ್ರೇನ್ ಪ್ರಾರಂಭವಾಗುತ್ತಿತ್ತು. ಇದು ನಾಲ್ಕು ವರ್ಷಗಳ ನಂತರವೂ ಇಂದಿಗೂ ನನ್ನ ಮೇಲೆ ಪರಿಣಾಮ ಬೀರುತ್ತಲಿದೆ. ಆದರೆ ಚಿತ್ರ ಜನಪ್ರಿಯತೆ ಎಲ್ಲವನ್ನೂ ಇಷ್ಟವಾಗಿಸಿದೆ ಎಂದಿದ್ದಾರೆ ಹರಿಪ್ರಿಯಾ.