ಹರ್ಷಿಕಾಗೂ ಕಾಸ್ಟಿಂಗ್‌ ಕೌಚ್‌ ಅನುಭವ


Team Udayavani, Apr 26, 2018, 4:58 PM IST

harshika-poonacha.jpg

ಹರ್ಷಿಕಾ ಪೂಣಚ್ಚ ಈ ಹಿಂದೆ ಬಾಲಿವುಡ್‌ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿನ ಎರಡು ಹಿಂದಿ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ ಎಂಬ ಸುದ್ದಿ ಇದೇ ಬಾಲ್ಕನಿಯಲ್ಲಿ ಬಂದಿತ್ತು. ಅದಾಗಿ ಸ್ವಲ್ಪ ದಿನಗಳ ಬಳಿಕ ಹರ್ಷಿಕಾ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸುತ್ತಿಲ್ಲ ಎಂದು ಹೇಳಿದ್ದರು. ಆದರೆ, ಯಾಕೆ ನಟಿಸುತ್ತಿಲ್ಲ ಎಂಬುದಕ್ಕೆ ಸ್ಪಷ್ಟ ಉತ್ತರ ಕೊಟ್ಟಿರಲಿಲ್ಲ. ಅವರೀಗ ಅದಕ್ಕೊಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅವರೇ ಹೇಳುವಂತೆ, “ಬಾಲಿವುಡ್‌ ಆಫ‌ರ್‌ ಬಿಡಲು ಕಾರಣ ಕಾಸ್ಟಿಂಗ್‌ ಕೌಚ್‌. ಹೌದು, ನನಗೂ ಕಾಸ್ಟಿಂಗ್‌ ಕೌಚ್‌ ಅನುಭವ ಆಗಿದೆ.

ಬಾಲಿವುಡ್‌ ಆಫ‌ರ್‌ ಬಂದಿದ್ದು ಸುಳ್ಳಲ್ಲ. ಎರಡು ಹಿಂದಿ ಚಿತ್ರಗಳಿಗೆ ಅಗ್ರಿಮೆಂಟ್‌ ಕೂಡ ಮಾಡಿಕೊಂಡಿದ್ದೆ. ಇನ್ನೇನು ಅಡ್ವಾನ್ಸ್‌ ಆಗಬೇಕು ಎನ್ನುವಷ್ಟರಲ್ಲಿ, ಅಲ್ಲಿನ ಮ್ಯಾನೇಜರ್‌ ಒಬ್ಬರು, ಕಮಿಟ್‌ಮೆಂಟ್‌ ಇರುತ್ತೆ ಅಂದಾಗ, ತಕ್ಷಣವೇ ನಾನು ಆ ಎರಡು ಪ್ರಾಜೆಕ್ಟ್ ಕೈ ಬಿಟ್ಟು, ಫ್ಲೈಟ್‌ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಬಾಲಿವುಡ್‌ನ‌ಲ್ಲಿ ನನಗದು ಬ್ಯಾಡ್‌ ಎಕ್ಸ್‌ಪೀರಿಯನ್ಸ್‌ ಆಯ್ತು. ಪ್ರತಿಯೊಂದು ಅನುಭವ ಕೂಡ ಹೊಸದಾಗಿಯೇ ಇರುತ್ತೆ. ಆದರೆ, ಬಾಲಿವುಡ್‌ನ‌ಲ್ಲಿ ನನಗೆ ಆ ರೀತಿ ಆಗಿದ್ದು ಮರೆಯುವಂತಿಲ್ಲ. ಬೆಂಗಳೂರಿಗೆ ಬಂದಾಗ, ಎಷ್ಟೋ ಜನ ಬಾಲಿವುಡ್‌ ಸಿನಿಮಾಗಳ ಸುದ್ದಿ ಸುಳ್ಳು ಅಂತಾನೂ ಭಾವಿಸಿಕೊಂಡರು. ಆದರೆ, ನಿಜ ಸುದ್ದಿ ಏನೆಂಬುದು ನನಗಷ್ಟೇ ಗೊತ್ತು. ಅದನ್ನು ಹೇಳಿಕೊಳ್ಳುವುದಕ್ಕೂ ನನಗೆ ಇಷ್ಟವಿರಲಿಲ್ಲ. ಈಗ ಬಾಲಿವುಡ್‌ ಸಿನಿಮಾ ವಿಷಯ ಬಂದಾಗ ಅನಿವಾರ್ಯವಾಗಿ ಹೇಳಿಕೊಳ್ಳಬೇಕಾಗಿದೆ ಎನ್ನುತ್ತಾರೆ ಹರ್ಷಿಕಾ.

ನನಗೆ ದೇವರು ಸಾಕಷ್ಟು ಆಯ್ಕೆಗಳನ್ನು ಕೊಟ್ಟಿದ್ದಾನೆ. ಹಾಗಂತ ಶಾರ್ಟ್‌ಕಟ್‌ ರೂಟ್‌ನಲ್ಲಿ ಹೋಗುವುದು ಇಷ್ಟವಿಲ್ಲ. ಅಂತಹ ಚಿತ್ರಗಳೂ ನನಗೆ ಬೇಕಿಲ್ಲ ಅಂತಾನೇ ಅಲ್ಲಿಂದ ಹಿಂದಿರುಗಿ ಬಂದೆ. ಎಲ್ಲರೂ ಹಾಗೇ ಇರುವುದಿಲ್ಲ. ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡಿದ್ದೇನೆ. ನನ್ನೊಂದಿಗೆ ಯಾರೊಬ್ಬರೂ ಹಾಗೇ ಕೆಟ್ಟದ್ದಾಗಿ ನಡೆದುಕೊಂಡಿಲ್ಲ. ನಾನು ಕನ್ನಡ ಚಿತ್ರರಂಗಕ್ಕೆ ಬಂದಾಗ, 15 ವರ್ಷ ವಯಸ್ಸು. ಇಲ್ಲಿಗೆ ಬಂದು 11 ವರ್ಷಗಳಾಗಿವೆ. ಇಷ್ಟು ವರ್ಷಗಳಲ್ಲಿ ಅಂತಹ ಯಾವುದೇ ಕೆಟ್ಟ ಅನುಭವ ಆಗಿಲ್ಲ. ಇಲ್ಲಿ ಯಾರೋ ಒಂದಿಬ್ಬರು ಹಾಗೆ ಇರುತ್ತಾರೆ ಅಂದ ಮಾತ್ರಕ್ಕೆ  ಎಲ್ಲರೂ ಹಾಗೆಯೇ ಇರುವುದಿಲ್ಲ. ನಿಜ ಹೇಳುವುದಾದರೆ, ಸೌತ್‌ ಫಿಲ್ಮ್ ಇಂಡಸ್ಟ್ರಿಯಲ್ಲಿ ನನಗಂತೂ ಅಂತಹ ಯಾವುದೇ ಅನುಭವ ಆಗಿಲ್ಲ ಎಂದಷ್ಟೇ ಹೇಳುತ್ತಾರೆ ಹರ್ಷಿಕಾ.

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.