ಹಾರರ್ ‘ತಾಯ್ತ’ ಚಿತ್ರದ ಟ್ರೇಲರ್ ಬಂತು
Team Udayavani, Aug 4, 2023, 1:35 PM IST
ಹರ್ಷಿಕಾ ಪೂಣಚ್ಛ ಮತ್ತು ರಿಯಾನ್ ಜೋಡಿಯಾಗಿ ಅಭಿನಯಿಸಿರುವ “ತಾಯ್ತ’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. “ಎಂ.ಎಸ್ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಶಾಹಿದ್ ಕಥೆ ಬರೆದು ನಿರ್ಮಿಸಿರುವ ಔಟ್ ಆ್ಯಂಡ್ ಹಾರರ್ ಥ್ರಿಲ್ಲರ್ ಕಥಾಹಂದರದ “ತಾಯ್ತ’ ಸಿನಿಮಾಕ್ಕೆ ಲಯ ಕೋಕಿಲ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಈಗಾಗಲೇ ಸದ್ದಿಲ್ಲದೇ “ತಾಯ್ತ’ ಸಿನಿಮಾದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡಿತು. ನಟ ಸಾಧುಕೋಕಿಲ ಸೇರಿದಂತೆ ಸಿನಿಮಾ ಮತ್ತು ಇತರೆ ಕ್ಷೇತ್ರಗಳ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು.
“ತಾಯ್ತ’ ಸಿನಿಮಾದ ಹಾಡುಗಳ ಬಿಡುಗಡೆಯ ಬಳಿಕ ಮಾತನಾಡಿದ ನಾಯಕಿ ಹರ್ಷಿಕಾ ಪೂಣಚ್ಛ, “ಇದೊಂದು ಸಂಪೂರ್ಣ ಹಾರರ್, ಥ್ರಿಲ್ಲರ್ ಸಿನಿಮಾ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ಅಭಿನಯಿಸಿದ್ದು ನನಗೂ ಹೊಸ ಅನುಭವ. ನಮಗೆ ಗೊತ್ತಿಲ್ಲದ ಸ್ಥಳವೊಂದಕ್ಕೆ ಪ್ರವಾಸಕ್ಕೆ ಹೋದಾಗ, ಅಲ್ಲಿ ಏನೇನು ಘಟನೆಗಳು ನಡೆಯುತ್ತವೆ ಎಂಬುದನ್ನು ಈ ಸಿನಿಮಾದಲ್ಲಿ ಥ್ರಿಲ್ಲಿಂಗ್ ಆಗಿ ಹೇಳಲಾಗಿದೆ. ನಾನು ಈ ಸಿನಿಮಾದಲ್ಲಿ ಕಾಲೇಜು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ತುಂಬ ಚೆನ್ನಾಗಿ ಬಂದಿದೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.
ಸಿನಿಮಾದ ಬಗ್ಗೆ ಮಾತನಾಡಿದ ನಟ ಕಂ ನಿರ್ದೇಶಕ ಲಯ ಕೋಕಿಲ, “ಒಂದು ದಿನದಲ್ಲಿ ನಡೆಯುವ ಘಟನೆಗಳ ಸುತ್ತ ಇಡೀ ಸಿನಿಮಾದ ಕಥೆ ನಡೆಯುತ್ತದೆ. ಒಂದಷ್ಟು ಯೂಥ್ಸ್ ಮೋಜು-ಮಸ್ತಿಗಾಗಿ ತಮಗೆ ಗೊತ್ತಿಲ್ಲದ ಸ್ಥಳಕ್ಕೆ ಹೋದಾದ ಅಲ್ಲಿ ಏನೇನು ತೊಂದರೆಗೆ ಸಿಲುಕಿಕೊಳ್ಳುತ್ತಾರೆ. ಅಂತಿಮವಾಗಿ ಅದರಿಂದ ಹೊರಬರುತ್ತಾರಾ? ಇಲ್ಲಾವಾ? ಎಂಬುದೇ ಸಿನಿಮಾದ ಕಥಾಹಂದರ. ಚಿಕ್ಕಮಗಳೂರಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಸಿನಿಮಾದ ಶೂಟಿಂಗ್ ಮಾಡಲಾಗಿದೆ’ ಎಂದು ವಿವರಣೆ ನೀಡಿದರು.
ಜಿ. ಎಸ್. ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Kaatera; ಬರಹಗಾರರಿಗೆ ರಾಕ್ಲೈನ್ ಕಾರು ಗಿಫ್ಟ್
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ