ಶುಭಾ-ಪೂಜಾ ಈಗ ದೇವತೆಯರು! 


Team Udayavani, Jul 17, 2018, 6:17 PM IST

hasanambepujashubha.jpg

ಶುಭಾಪೂಂಜಾ ಈಗ ದೇವತೆ..! ಅಷ್ಟೇ ಅಲ್ಲ, ಪೂಜಾಗಾಂಧಿ ಕೂಡ ದೇವತೆಯೇ!! ಹೌದು, ಕೆಲ ನಟಿಯರು ಅಭಿಮಾನಿಗಳ ಪಾಲಿಗೆ ದೇವತೆಯಾಗಿ ಕಾಣುವುದುಂಟು. ಇಲ್ಲೀಗ ಹೇಳಹೊರಟಿರುವ ವಿಷಯ, ಶುಭಾಪೂಂಜಾ ಮತ್ತು ಪೂಜಾಗಾಂಧಿ ದೇವತೆಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ದೇವತೆ ಪಾತ್ರದಲ್ಲಿ ಮಿಂಚುತ್ತಿರುವ ಶುಭಾಪೂಂಜಾ ಹಾಗೂ ಪೂಜಾಗಾಂಧಿ ಇಬ್ಬರಿಗೂ ದೈವಭಕ್ತಿ ಇನ್ನಷ್ಟು ಹೆಚ್ಚಾಗಿದೆ ಎಂಬುದು ಸುಳ್ಳಲ್ಲ. ಅಂದಹಾಗೆ, ಇವರಿಬ್ಬರು ದೇವತೆಯರಾಗಿ ಕಾಣಿಸಿಕೊಳ್ಳುತ್ತಿರುವುದು “ಹಾಸನಾಂಭ’ ಚಿತ್ರದಲ್ಲಿ. ಈ ಚಿತ್ರವನ್ನು ಬಿ.ಎ.ಪುರುಷೋತ್ತಮ್‌ ಓಂಕಾರ್‌ ನಿರ್ದೇಶಿಸುತ್ತಿದ್ದಾರೆ. 

ಇದುವರೆಗೆ ಬಹುತೇಕ ಭಕ್ತಿಪ್ರಧಾನ ಚಿತ್ರಗಳನ್ನೇ ನಿರ್ದೇಶಿಸಿರುವ ಪುರುಷೋತ್ತಮ್‌ ಓಂಕಾರ್‌ ಅವರಿಗೆ ಇದು ಹದಿನೈದನೇ ಚಿತ್ರ ಎಂಬುದು ವಿಶೇಷ. ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಹಾಡು ಕೂಡ ನಿರ್ದೇಶಕರೇ ಬರೆದಿದ್ದಾರೆ. ಈಗಾಗಲೇ ಶೇ.90 ರಷ್ಟು ಚಿತ್ರೀಕರಣವನ್ನೂ ಮುಗಿಸಲಾಗಿದೆ.

ಚಿತ್ರದ ಶೀರ್ಷಿಕೆ ಹೇಳುವಂತೆ, ಇದು ಭಕ್ತಿ ಪ್ರಧಾನ ಸಿನಿಮಾ. “ಹಾಸನಾಂಭೆ’ ಹಾಸನದಲ್ಲಿ ಯಾಕೆ ನೆಲೆಸಿದ್ದು, ಅಲ್ಲಿಗೆ ಬಂದಿದ್ದು ಹೇಗೆ, ವರ್ಷಕ್ಕೊಮ್ಮೆ ಬಾಗಿಲು ತೆರೆಯಲು ಕಾರಣವೇನು ಎಂಬಿತ್ಯಾದಿ ಅಚ್ಚರಿಯ ವಿಷಯಗಳು ಚಿತ್ರದಲ್ಲಿರಲಿವೆ. ಚಿತ್ರದಲ್ಲಿ ಪೂಜಾಗಾಂಧಿ ಪಾರ್ವತಿಯಾಗಿ ನಟಿಸಿದರೆ, ಶುಭಾಪೂಂಜಾ ಅವರು ವೈಷ್ಣವಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶುಭಾಪೂಂಜಾ ಅವರು ಈ ಹಿಂದೆ “ಸಿಗಂಧೂರೇಶ್ವರಿ’ ಚಿತ್ರದಲ್ಲಿ ಭಕ್ತಿಯಾಗಿ ನಟಿಸಿದ್ದರು. ಈ ಹಿಂದೆ ಭಕ್ತಪ್ರಧಾನ ಚಿತ್ರಗಳಲ್ಲಿ ನಟಿಸುವ ಆಸೆ ವ್ಯಕ್ತಪಡಿಸಿದ್ದ ಶುಭಾಪೂಂಜಾ ಅವರಿಗೆ ಇಲ್ಲಿ ವೈಷ್ಣವಿ ದೇವತೆಯಾಗಿ ನಟಿಸುವ ಅವಕಾಶ ಸಿಕ್ಕಿದೆ. ಅಂತೆಯೇ ಪೂಜಾಗಾಂಧಿ ಅವರಿಗೆ ದೇವತೆಯಾಗಿ ಇದು ಮೊದಲ ಅನುಭವ. 

ಇವರೊಂದಿಗೆ ಧರಣಿ ಎಂಬ ಹೊಸ ಪ್ರತಿಭೆ ಬ್ರಾಹ್ಮಿಯಾಗಿ ನಟಿಸುತ್ತಿದ್ದಾರೆ. ಈ ಮೂವರು ದೇವತೆ ಸೇರಿ “ಹಾಸನಾಂಭೆ’ ಹೆಸರಲ್ಲಿ ಪ್ರತಿಷ್ಠಾಪನೆಯಾಗಿದೆ. ಏಳು ದೇವತೆಯರು ಹಾಸನಕ್ಕೆ ಬಂದು, ಕೊನೆಯಲ್ಲಿ ಮೂವರು ದೇವತೆಗಳು ಮಾತ್ರ ಅಲ್ಲಿ ನೆಲೆಸುತ್ತಾರೆಂಬ ಮಾತಿದೆ. ಅದೇ ವಿಷಯ ಇಟ್ಟುಕೊಂಡು ಚಿತ್ರ ಮಾಡಿರುವುದಾಗಿ ಹೇಳುತ್ತಾರೆ ನಿರ್ದೇಶಕರು.

ಇನ್ನು, ಈ ಚಿತ್ರದಲ್ಲಿ ನವೀನ್‌ಕೃಷ್ಣ ಅವರು ಈಶ್ವರನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಕೃಷ್ಣಪ್ಪನಾಯಕ ಎಂಬ ರಾಜನ ಕಥೆಯೂ ಬರಲಿದ್ದು, ಆ ಕಥೆಯ ರಾಜನಾಗಿ ಶ್ರೀನಿವಾಸಮೂರ್ತಿ ನಟಿಸಿದರೆ, ಮಹಾಮಂತ್ರಿಯಾಗಿ ರಮೇಶ್‌ ಭಟ್‌, ನಾರದನಾಗಿ ಉಮೇಶ್‌, ಅಂಧಕಾಸುರ ಪಾತ್ರದಲ್ಲಿ ಉಮೇಶ್‌ ಬಣಕಾರ್‌ ಕಾಣಿಸಿಕೊಳ್ಳುತ್ತಿದ್ದಾರೆ. 

ಚಿತ್ರ ಶುರುವಾಗೋದೇ ಅಂಧಕಾಸುರನ ಮೂಲಕ ಎಂಬುದು ನಿರ್ದೇಶಕರ ಮಾತು. ರಾಜ್‌ಭಾಸ್ಕರ್‌ ಐದು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಗೌರಿ ವೆಂಕಟೇಶ್‌ ಛಾಯಾಗ್ರಹಣವಿದೆ. ಚಿತ್ರವನ್ನು ಹಾಸನ ಪ್ರಕಾಶ್‌ ಹರಳೆ ನಿರ್ಮಿಸುತ್ತಿದ್ದು, ಇದು ಅವರ ಮೊದಲ ಸಿನಿಮಾ. ಚಿತ್ರದಲ್ಲಿ ತಾರಾ, ಚಂದ್ರಕಲಾ ಮೋಹನ್‌ ಇತರರು ಇದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.