ಗಣಿನಾಡಲ್ಲಿ ಭರದಿಂದ ಸಾಗಿದ ಕೆಜಿಎಫ್ ಶೂಟಿಂಗ್
ಸಂಡೂರಿನ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ಚಿತ್ರೀಕರಣ
Team Udayavani, Dec 26, 2019, 7:03 AM IST
ಇತ್ತೀಚೆಗಷ್ಟೆ “ಕೆಜಿಎಫ್-2′ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಇದರ ನಡುವೆಯೇ ಚಿತ್ರತಂಡ ಗಣಿನಾಡು ಬಳ್ಳಾರಿಯಲ್ಲಿ ಸದ್ದಿಲ್ಲದೆ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಕಳೆದ ಮೂರು ದಿನಗಳಿಂದ ತುಂಗಾ ಮೈನ್ಸ್ ವ್ಯಾಪ್ತಿಯಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ.
ಚಿತ್ರದ ದೃಶ್ಯಗಳ ಚಿತ್ರೀಕರಣಕ್ಕಾಗಿ ಅದ್ಧೂರಿಯಾಗಿ ಸೆಟ್ಗಳನ್ನು ನಿರ್ಮಿಸಲಾಗಿದ್ದು, ಚಿತ್ರತಂಡದ ಪ್ರಮುಖ ಕಲಾವಿದರ ಜೊತೆಗೆ ನೂರಾರು ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಇನ್ನು “ಕೆಜಿಎಫ್-2′ ಚಿತ್ರದ ಚಿತ್ರೀಕರಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಅನೇಕ ವಾಹನಗಳು ಸಾಲಾಗಿ ಬರುತ್ತಿದ್ದು, ನೂರಾರು ಮಂದಿ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ದೃಶ್ಯಗಳು ಹರಿದಾಡುತ್ತಿದೆ. ಮೂಲಗಳ ಪ್ರಕಾರ ಸಹ ಕಲಾವಿದರ ಭಾಗದ ದೃಶ್ಯಗಳನ್ನು ಸದ್ಯ ಚಿತ್ರೀಕರಿಸಲಾಗುತ್ತಿದ್ದು,
ನಟ ಯಶ್ ಇಂದಿನಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯಶ್ ಅವರನ್ನು ನೋಡಲು ಎರಡು ದಿನಗಳಿಂದ ಜನರು ಚಿತ್ರೀಕರಣದ ಸ್ಥಳದತ್ತ ದೌಡಾಯಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಚಿತ್ರತಂಡ ಹರ ಸಾಹಸಪಡುತ್ತಿದೆ ಎನ್ನಲಾಗುತ್ತಿದೆ. “ಹೊಂಬಾಳೆ ಫಿಲ್ಮ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಕೆಜಿಎಫ್-2′ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ, ಹೊಸ ವರ್ಷದ ಮಧ್ಯ ಭಾಗಕ್ಕೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ