Hide And Seek; ಕಿಡ್ನ್ಯಾಪೊಂದರ ಸುತ್ತ ಹೈಡ್‌ ಅಂಡ್‌ ಸೀಕ್‌; ಟ್ರೇಲರ್‌ ಬಂತು


Team Udayavani, Feb 29, 2024, 5:37 PM IST

hide and seek kannada movie

ಅನೂಪ್‌ ರೇವಣ್ಣ ನಾಯಕರಾಗಿರುವ “ಹೈಡ್‌ ಅಂಡ್‌ ಸೀಕ್‌’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಮಾ.15ರಂದು ತೆರೆಕಾಣಲಿದ್ದು, ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

ಸಚಿವ ರಾಮಲಿಂಗರೆಡ್ಡಿ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿ ಶುಭಕೋರಿದರು. ಈ ವೇಳೆ ಅನೇಕ ಗಣ್ಯರು ಸಾಥ್‌ ನೀಡಿದರು. ಪುನೀತ್‌ ನಾಗರಾಜು ಈ ಸಿನಿಮಾದ ನಿರ್ದೇಶಕರು. ಜೊತೆಗೆ ನಿರ್ಮಾಣದಲ್ಲೂ ಭಾಗಿಯಾಗಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪುನೀತ್‌ ನಾಗರಾಜು ಮಾತನಾಡಿ, “ಹೈಡ್‌ ಆ್ಯಂಡ್‌ ಸೀಕ್‌ ಒಂದು ಸಸ್ಪೆನ್ಸ್‌, ಥ್ರಿಲ್ಲರ್‌ ಜಾನರ್‌ನ ಚಿತ್ರವಾಗಿದೆ. 25 ದಿನಗಳಲ್ಲಿ ಮಾಗಡಿ, ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತಲೂ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ. ಚಿತ್ರದಲ್ಲಿ ರಿವರ್ಸ್‌ ಸ್ಕ್ರೀನ್‌ ಪ್ಲೇ ಮಾದರಿಯನ್ನು ಪ್ರಯೋಗ ಮಾಡಿದ್ದೇವೆ. ಕನ್ನಡದಲ್ಲಿ ಈ ಮಾದರಿ ಮೊದಲು ಎನ್ನಬಹುದು. ಚಿತ್ರದಲ್ಲಿ ಒಂದು ಕಿಡ್ನಾಪ್‌ ನಡೆಯುತ್ತದೆ. ಅದು ಯಾಕೆ, ಹೇಗೆ, ಯಾರಿಂದ ಎಂಬುದೇ ಚಿತ್ರದ ಕಥೆಯಾಗಿದೆ’ ಎಂದು ಮಾಹಿತಿ ನೀಡಿದರು.

ಅನೂಪ್‌ ರೇವಣ್ಣ ಕೂಡಾ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ನಾನು ಈ ಮೊದಲು ಮಾಡಿದ ಪಾತ್ರಕ್ಕೂ ಈಗ ಹೈಡ್‌ ಆ್ಯಂಡ್‌ ಸೀಕ್‌ನಲ್ಲಿ ಮಾಡಿದ ಪಾತ್ರಕ್ಕೂ ತುಂಬಾ ಭಿನ್ನತೆ ಇದೆ. ಹೊಸತನದ, ಒಂದು ರಾ ಕ್ಯಾರೆಕ್ಟರ್‌ ಇದು. ಒಂದು ಥರಾ ಹೀರೋ, ವಿಲನ್‌ ಎರಡೂ ಶೇಡ್‌ ಬರುತ್ತದೆ. ಎಲ್ಲೂ ಕೂಡಾ ಹೀರೋಯಿಸಂ ತೋರಿಸದೇ, ಫೈಟ್ಸ್‌ ಇಲ್ಲದೇ ಸೈಲೆಂಟ್‌ ಆಗಿ ಇರುವ ಪಾತ್ರ. ಕಡಿಮೆ ಮಾತನಾಡಿ ಹೆಚ್ಚು ಕೆಲಸ ಮಾಡುವ ಪಾತ್ರ ನನ್ನದು. ಚಿತ್ರೀಕರಣದ ದಿನಗಳು ಅದ್ಭುತವಾಗಿದ್ದವು’ ಎನ್ನುವುದು ಅನೂಪ್‌ ಮಾತು.

ಧನ್ಯಾ ರಾಮ್‌ಕುಮಾರ್‌ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಥ್ರಿಲ್ಲರ್‌ ಜಾನರ್‌ನಲ್ಲಿ ಕಾಣಿಸಿಕೊಂಡಿರುವ ಧನ್ಯಾ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಧನ್ಯಾ ರಾಮ್‌ಕುಮಾರ್‌, “ಸಸ್ಪೆನ್ಸ್‌ , ಥ್ರಿಲ್ಲರ್‌ ನನಗೆ ಇಷ್ಟವಾದ ಜಾನರ್‌. ಮೊದಲು ಕಥೆ ಕೇಳಿದಾಗ ಬಹಳ ಇಷ್ಟವಾಯ್ತು. ನನ್ನ ಎರಡನೇ ಚಿತ್ರ ಈ ಜಾನರ್‌ ಆಗಿರಬೇಕು ಎಂದು ಆಯ್ಕೆ ಮಾಡಿಕೊಂಡೆ. ಚಿತ್ರೀಕರಣಕ್ಕೂ ಮುಂಚೆ ಚಿತ್ರತಂಡದವರು ವರ್ಕ್‌ ಶಾಪ್‌ ಮಾಡುವ ಮೂಲಕ ಒಂದು ಬಾಂಡಿಂಗ್‌ ಬೆಳೆಸಿಕೊಂಡೆವು. ಚಿತ್ರದಲ್ಲಿ ನನ್ನದು ಅಪ್ಪನ ಮುದ್ದಿನ ಮಗಳ ಪಾತ್ರ. ದೊಡ್ಡ ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದೇನೆ. ಕೊನೆಯವರೆಗೂ ಕುತೂಹಲ ಮೂಡಿಸುವ ಚಿತ್ರ ಇದಾಗಿದೆ’ ಎಂದರು.

ಚಿತ್ರಕ್ಕೆ ರೆಜೋ ಪಿ ಜಾನ್‌ ಛಾಯಾಗ್ರಹಣ, ಸ್ಯಾಂಡಿ ಅಡ್ಡಂಕಿ ಸಂಗೀತ, ಮಧು ತುಂಬೇಕೆರೆ ಸಂಕಲನ ಚಿತ್ರಕ್ಕಿದೆ. ಅನೂಪ್‌ ರೇವಣ್ಣ, ಧನ್ಯಾ ರಾಮ್‌ ಕುಮಾರ್‌, ಮೈತ್ರೀ ಜಗ್ಗಿ, ರಕ್ಷಾ ಉಮೇಶ್‌, ಅರವಿಂದ್‌, ಸೂರಜ್‌ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.