Hide And Seek; ಕಿಡ್ನ್ಯಾಪೊಂದರ ಸುತ್ತ ಹೈಡ್‌ ಅಂಡ್‌ ಸೀಕ್‌; ಟ್ರೇಲರ್‌ ಬಂತು


Team Udayavani, Feb 29, 2024, 5:37 PM IST

hide and seek kannada movie

ಅನೂಪ್‌ ರೇವಣ್ಣ ನಾಯಕರಾಗಿರುವ “ಹೈಡ್‌ ಅಂಡ್‌ ಸೀಕ್‌’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಮಾ.15ರಂದು ತೆರೆಕಾಣಲಿದ್ದು, ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

ಸಚಿವ ರಾಮಲಿಂಗರೆಡ್ಡಿ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿ ಶುಭಕೋರಿದರು. ಈ ವೇಳೆ ಅನೇಕ ಗಣ್ಯರು ಸಾಥ್‌ ನೀಡಿದರು. ಪುನೀತ್‌ ನಾಗರಾಜು ಈ ಸಿನಿಮಾದ ನಿರ್ದೇಶಕರು. ಜೊತೆಗೆ ನಿರ್ಮಾಣದಲ್ಲೂ ಭಾಗಿಯಾಗಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪುನೀತ್‌ ನಾಗರಾಜು ಮಾತನಾಡಿ, “ಹೈಡ್‌ ಆ್ಯಂಡ್‌ ಸೀಕ್‌ ಒಂದು ಸಸ್ಪೆನ್ಸ್‌, ಥ್ರಿಲ್ಲರ್‌ ಜಾನರ್‌ನ ಚಿತ್ರವಾಗಿದೆ. 25 ದಿನಗಳಲ್ಲಿ ಮಾಗಡಿ, ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತಲೂ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ. ಚಿತ್ರದಲ್ಲಿ ರಿವರ್ಸ್‌ ಸ್ಕ್ರೀನ್‌ ಪ್ಲೇ ಮಾದರಿಯನ್ನು ಪ್ರಯೋಗ ಮಾಡಿದ್ದೇವೆ. ಕನ್ನಡದಲ್ಲಿ ಈ ಮಾದರಿ ಮೊದಲು ಎನ್ನಬಹುದು. ಚಿತ್ರದಲ್ಲಿ ಒಂದು ಕಿಡ್ನಾಪ್‌ ನಡೆಯುತ್ತದೆ. ಅದು ಯಾಕೆ, ಹೇಗೆ, ಯಾರಿಂದ ಎಂಬುದೇ ಚಿತ್ರದ ಕಥೆಯಾಗಿದೆ’ ಎಂದು ಮಾಹಿತಿ ನೀಡಿದರು.

ಅನೂಪ್‌ ರೇವಣ್ಣ ಕೂಡಾ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. “ನಾನು ಈ ಮೊದಲು ಮಾಡಿದ ಪಾತ್ರಕ್ಕೂ ಈಗ ಹೈಡ್‌ ಆ್ಯಂಡ್‌ ಸೀಕ್‌ನಲ್ಲಿ ಮಾಡಿದ ಪಾತ್ರಕ್ಕೂ ತುಂಬಾ ಭಿನ್ನತೆ ಇದೆ. ಹೊಸತನದ, ಒಂದು ರಾ ಕ್ಯಾರೆಕ್ಟರ್‌ ಇದು. ಒಂದು ಥರಾ ಹೀರೋ, ವಿಲನ್‌ ಎರಡೂ ಶೇಡ್‌ ಬರುತ್ತದೆ. ಎಲ್ಲೂ ಕೂಡಾ ಹೀರೋಯಿಸಂ ತೋರಿಸದೇ, ಫೈಟ್ಸ್‌ ಇಲ್ಲದೇ ಸೈಲೆಂಟ್‌ ಆಗಿ ಇರುವ ಪಾತ್ರ. ಕಡಿಮೆ ಮಾತನಾಡಿ ಹೆಚ್ಚು ಕೆಲಸ ಮಾಡುವ ಪಾತ್ರ ನನ್ನದು. ಚಿತ್ರೀಕರಣದ ದಿನಗಳು ಅದ್ಭುತವಾಗಿದ್ದವು’ ಎನ್ನುವುದು ಅನೂಪ್‌ ಮಾತು.

ಧನ್ಯಾ ರಾಮ್‌ಕುಮಾರ್‌ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಥ್ರಿಲ್ಲರ್‌ ಜಾನರ್‌ನಲ್ಲಿ ಕಾಣಿಸಿಕೊಂಡಿರುವ ಧನ್ಯಾ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಧನ್ಯಾ ರಾಮ್‌ಕುಮಾರ್‌, “ಸಸ್ಪೆನ್ಸ್‌ , ಥ್ರಿಲ್ಲರ್‌ ನನಗೆ ಇಷ್ಟವಾದ ಜಾನರ್‌. ಮೊದಲು ಕಥೆ ಕೇಳಿದಾಗ ಬಹಳ ಇಷ್ಟವಾಯ್ತು. ನನ್ನ ಎರಡನೇ ಚಿತ್ರ ಈ ಜಾನರ್‌ ಆಗಿರಬೇಕು ಎಂದು ಆಯ್ಕೆ ಮಾಡಿಕೊಂಡೆ. ಚಿತ್ರೀಕರಣಕ್ಕೂ ಮುಂಚೆ ಚಿತ್ರತಂಡದವರು ವರ್ಕ್‌ ಶಾಪ್‌ ಮಾಡುವ ಮೂಲಕ ಒಂದು ಬಾಂಡಿಂಗ್‌ ಬೆಳೆಸಿಕೊಂಡೆವು. ಚಿತ್ರದಲ್ಲಿ ನನ್ನದು ಅಪ್ಪನ ಮುದ್ದಿನ ಮಗಳ ಪಾತ್ರ. ದೊಡ್ಡ ಉದ್ಯಮಿಯ ಮಗಳಾಗಿ ಕಾಣಿಸಿಕೊಂಡಿದ್ದೇನೆ. ಕೊನೆಯವರೆಗೂ ಕುತೂಹಲ ಮೂಡಿಸುವ ಚಿತ್ರ ಇದಾಗಿದೆ’ ಎಂದರು.

ಚಿತ್ರಕ್ಕೆ ರೆಜೋ ಪಿ ಜಾನ್‌ ಛಾಯಾಗ್ರಹಣ, ಸ್ಯಾಂಡಿ ಅಡ್ಡಂಕಿ ಸಂಗೀತ, ಮಧು ತುಂಬೇಕೆರೆ ಸಂಕಲನ ಚಿತ್ರಕ್ಕಿದೆ. ಅನೂಪ್‌ ರೇವಣ್ಣ, ಧನ್ಯಾ ರಾಮ್‌ ಕುಮಾರ್‌, ಮೈತ್ರೀ ಜಗ್ಗಿ, ರಕ್ಷಾ ಉಮೇಶ್‌, ಅರವಿಂದ್‌, ಸೂರಜ್‌ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.