ಹೋಮ್ಲಿ ಮಯೂರಿ ಈಗ ಸಖತ್‌ ಬೋಲ್ಡ್‌!

ನನ್ನ ಪ್ರಕಾರದಲ್ಲಿ ಮಾಡರ್ನ್ ಹುಡುಗಿ

Team Udayavani, Jul 14, 2019, 3:04 AM IST

mayuri

ಹುಬ್ಬಳ್ಳಿಯಿಂದ ಬಂದು ಹೋಮ್ಲಿ ಹುಡುಗಿ ಎಂಬ ಪಟ್ಟ ಪಡೆದಿದ್ದ ಮಯೂರಿ ಈಗ ಸಖತ್‌ ಬೋಲ್ಡ್‌ ಆಗಿದ್ದಾರೆ. ಹೋಮ್ಲಿ ಹುಡುಗಿ ಈಗ ಮಾಡರ್ನ್ ಹುಡುಗಿಯಾಗಿದ್ದಾರೆ. ಅದು ಯಾವ ಮಟ್ಟಿಗೆಂದರೆ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಾ, ಸಿಗರೇಟ್‌, ಹುಕ್ಕಾ ಸೇದುವ ಜೊತೆಗೆ ಮದ್ಯದ ನಶೆಯಲ್ಲಿ ತೇಲುವ ಮಟ್ಟಕ್ಕೆ! ಹೀಗೆಂದರೆ ನೀವು ಆಶ್ಚರ್ಯಪಡಬಹುದು.

ನಾವು ಇಲ್ಲಿ ಹೇಳುತ್ತಿರುವುದು ಮಯೂರಿ ಸಿನಿಮಾ ಕುರಿತು. “ನನ್ನ ಪ್ರಕಾರ’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ಮಯೂರಿ ಕೂಡಾ ನಟಿಸಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮಯೂರಿಗೆ ಈ ಹಿಂದೆ ಮಾಡಿರದಂತಹ ಪಾತ್ರ ಸಿಕ್ಕಿದೆ. ಅದು ಸಖತ್‌ ಬೋಲ್ಡ್‌ ಆಗಿರುವ ಪಾತ್ರ.

ಮಯೂರಿ ಕೂಡಾ ಈ ಪಾತ್ರವನ್ನು ಖುಷಿಯಿಂದಲೇ ಮಾಡಿದ್ದಾರೆ. ಈ ಪಾತ್ರದ ಬಗ್ಗೆ ಮಾತನಾಡುವ ಮಯೂರಿ, “ನನ್ನ ಪ್ರಕಾರ ಒಂದು ವಿಶಿಷ್ಟವಾದ ಪಾತ್ರ. ಇದನ್ನು ಮಲ್ಟಿಲೆಯರ್‌ ಸಿನಿಮಾ ಎಂದು ಕರೆಯಬಹುದು. ನನ್ನ ಪಾತ್ರ ಕಥೆಯ ಕೇಂದ್ರಬಿಂದು ಎಂದರೆ ತಪ್ಪಲ್ಲ. ನಾನಿಲ್ಲಿ ಸಖತ್‌ ಬೋಲ್ಡ್‌ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ.

ನನ್ನ ರಿಯಲ್‌ ಲೈಫ್ಗೆ ಸಂಪೂರ್ಣ ವಿರುದ್ಧವಾಗಿರುವ ಪಾತ್ರ. ಇಂಡಿಪೆಂಡೆಂಟ್‌ ಹುಡುಗಿಯಾಗಿರುವ ಆಕೆಯದ್ದೇ ಒಂದು ಲೈಫ್ಸ್ಟೈಲ್‌. ಪಾರ್ಟಿ, ಪಬ್‌, ಕುಡಿತ … ಇವೆಲ್ಲದಕ್ಕೆ ಅಂಟಿಕೊಂಡಿರುವ ಆಕೆ, ಅದರಿಂದ ಯಾವ ರೀತಿ ತೊಂದರೆ ಅನುಭವಿಸುತ್ತಾಳೆಂಬುದು ಕೂಡಾ ಸಿನಿಮಾದ ಹೈಲೈಟ್‌. ಚಿತ್ರದಲ್ಲಿ ಒಳ್ಳೆಯ ಸಂದೇಶವಿದೆ.

ನನ್ನ ಪಾತ್ರದ ಮೂಲಕವೂ ಯುವಜನತೆಗೊಂದು ಸಂದೇಶ ನೀಡಲಾಗಿದೆ. ಇತ್ತೀಚೆಗೆ ಬರುತ್ತಿರುವ ಹೊಸ ಬಗೆಯ ಸಿನಿಮಾಗಳನ್ನು ಪ್ರೇಕ್ಷಕರು ಇಷ್ಟಪಡುತ್ತಿದ್ದಾರೆ. “ನನ್ನ ಪ್ರಕಾರ’ ಕೂಡಾ ಬೇರೆ ಜಾನರ್‌ನ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ ಮಯೂರಿ. ಅಂದಹಾಗೆ, ಇತ್ತೀಚೆಗಷ್ಟೇ ಚಿತ್ರದ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಿದೆ.

ವಿನಯ್‌ ಎನ್ನುವವರು “ನನ್ನ ಪ್ರಕಾರ’ ಸಿನಿಮಾದ ನಿರ್ದೇಶಕರು. ಜಿವಿಕೆ ಕಂಬೈನ್ಸ್‌ ಹಾಗೂ ಗುರುರಾಜ್‌ ಈ ಚಿತ್ರದ ನಿರ್ಮಾಪಕರು.ಚಿತ್ರದಲ್ಲಿ ಕಿಶೋರ್‌, ಪ್ರಿಯಾಮಣಿ, ವೈಷ್ಣವಿ, ನಿರಂಜನ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರವಾಗಿದ್ದು, ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.