‘ಹೊಂದಿಸಿ ಬರೆಯಿರಿ’ ಚಿತ್ರಕ್ಕೆ 25 ದಿನದ ಸಂಭ್ರಮ


Team Udayavani, Mar 6, 2023, 4:04 PM IST

hondisi bareyiri 25th day celebration

ರಾಮೇನಹಳ್ಳಿ ಜಗನ್ನಾಥ್‌ ನಿರ್ದೇಶನದ “ಹೊಂದಿಸಿ ಬರೆಯಿರಿ’ ಸಿನಿಮಾ ಈಗ 25 ದಿನದ ಸಂಭ್ರಮದಲ್ಲಿದೆ. ಫೆಬ್ರವರಿ 10ರಂದು ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ಇನ್ನಷ್ಟು ಜನರನ್ನು ತಲುಪುತ್ತಿರುವ ಈ ಸಿನಿಮಾ ಹೌಸ್‌ ಫ‌ುಲ್‌ ಶೋಗಳೊಂದಿಗೆ ಮುನ್ನುಗ್ಗುತ್ತಿದೆ.

ಈ ಖುಷಿಯಲ್ಲಿ ಮಾತನಾಡುವ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌, “ಹೊಂದಿಸಿ ಬರೆಯಿರಿ’ ಸಿನಿಮಾ ತಂಡದ ಬಾಂಧವ್ಯ ಮೂರು ವರ್ಷದ್ದು. ಇದೀಗ ಸಿನಿಮಾ ಬಿಡುಗಡೆಯಾಗಿ 25ದಿನ ಪೂರೈಸುತ್ತಿದೆ. ಫೆಬ್ರವರಿ 10ರಂದು ಸಿನಿಮಾ ಬಿಡುಗಡೆಯಾಗಿತ್ತು. ಆರಂಭದಲ್ಲಿ 70 ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾಗಿತ್ತು. ನಾಲ್ಕು ವಾರದಲ್ಲಿ 40 ಸಿನಿಮಾಗಳು ಬಿಡುಗಡೆಯಾಗಿವೆ. ಇಷ್ಟು ಸಿನಿಮಾಗಳಲ್ಲಿ ನಮ್ಮ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಎಲ್ಲಾ ಚಿತ್ರಮಂದಿರಕ್ಕೂ ಭೇಟಿ ಕೊಟ್ಟಿದ್ದೇವೆ. ಸಿನಿಮಾ ನೋಡಿ ಜನರು ಹೇಳುತ್ತಿದ್ದ ಪಾಸಿಟಿವ್‌ ಮಾತುಗಳು ಸಿನಿಮಾವನ್ನು ಮತ್ತಷ್ಟು ಪ್ರಮೋಟ್‌ ಮಾಡುವಂತೆ ಮಾಡಿತು. ಸಿನಿಮಾ 25 ದಿನಗಳನ್ನು ಪೂರೈಸುತ್ತಿರುವ ಈ ಸಮಯದಲ್ಲಿ ಕುಶಾಲ ನಗರ, ಕೆ.ಆರ್‌.ಪೇಟೆ, ಶಿವಮೊಗ್ಗ ಸೇರಿದಂತೆ ತಾಲೂಕು ಕೆಂದ್ರಗಳಿಗೂ ಸಿನಿಮಾವನ್ನು ತಲುಪಿಸುತ್ತಿದ್ದೇವೆ. ಚಿತ್ರಮಂದಿರದ ಸಂಖ್ಯೆಯನ್ನು ಹೆಚ್ಚು ಮಾಡುತ್ತಿದ್ದೇವೆ’ ಎಂದು ಮಾಹಿತಿ ಹಂಚಿಕೊಂಡರು.

ನಟ ಪ್ರವೀಣ್‌ ತೇಜ್‌ ಮಾತನಾಡಿ, “25 ದಿನವನ್ನು ಸಂಭ್ರಮಿಸಲು ಪ್ರಮುಖ ಕಾರಣ ಮಾಧ್ಯಮ ಹಾಗೂ ಪತ್ರಿಕಾ ಮಿತ್ರರು. ನಿಮ್ಮ ಸಹಕಾರ ದೊಡ್ಡದು. ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ ಅವರು ಕೂಡ ಸಿನಿಮಾ ನೋಡಿ ಇಷ್ಟಪಟ್ಟರು. ಸಿನಿಮಾದಲ್ಲಿ ತೋರಿಸಲಾದ ಮಂತ್ರಮಾಂಗಲ್ಯದ ಬಗ್ಗೆ ಕೂಡ ಮಾತನಾಡಿದರು’ ಎಂದು ಪ್ರವೀಣ್‌ ತೇಜ್‌ ಸಿನಿಮಾ ಯಶಸ್ಸಿನ ಸಂತಸ ಹಂಚಿಕೊಂಡರು.

ನಟಿ ಭಾವನ ರಾವ್‌ ಮಾತನಾಡಿ, ಈ ಸಿನಿಮಾ ತುಂಬಾ ಪ್ರೀತಿಯಿಂದ ಮಾಡಿರುವ ಸಿನಿಮಾ. ಅಷ್ಟೇ ಪ್ರೀತಿಯನ್ನು ಜನರು ತೋರಿಸಿದ್ದಾರೆ. ನಾವೆಲ್ಲರು ಮೂರು ವರ್ಷದಿಂದ ಈ ಸಿನಿಮಾದ ಜೊತೆಯಾಗಿದ್ದೇವೆ’ ಎಂದರು.

ಮತ್ತೂಬ್ಬ ನಾಯಕಿ ಐಶಾನಿ ಶೆಟ್ಟಿ ಮಾತನಾಡಿ, ನಿರ್ದೇಶಕ ಜಗನ್ನಾಥ್‌ ತುಂಬಾ ಶ್ರಮ ಹಾಕಿದ್ದಾರೆ. ಸಿನಿಮಾ ಬಿಡುಗಡೆಯಾದ ಮೇಲೂ ಅದನ್ನು ಜನರಿಗೆ ತಲುಪಿಸಲು ಅವರು ಸಖತ್‌ ಎಫ‌ರ್ಟ್‌ ಹಾಕಿದ್ದಾರೆ. ಸಿನಿಮಾ ಬಗ್ಗೆ ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ಸಿನಿಮಾದ ಹಾಡು, ಸಂಭಾಷಣೆ, ಸಾಹಿತ್ಯ ಪ್ರತಿಯೊಂದರ ಬಗ್ಗೆ ಜನ ಮಾತನಾಡುತ್ತಿದ್ದಾರೆ. ನಿರ್ದೇಶಕರ ಮೊದಲ ಸಿನಿಮಾ ಎಂದು ಎನಿಸುವುದಿಲ್ಲ ಎಂದು ಪ್ರಶಂಸೆಯ ಮಾತುಗಳನ್ನಾಡುತ್ತಿದ್ದಾರೆ. ಇದೀಗ 25 ದಿನಗಳನ್ನು ಸಿನಿಮಾ ಪೂರೈಸುತ್ತಿದೆ ತುಂಬಾ ಖುಷಿಯಾಗುತ್ತಿದೆ ಎಂದರು.

ಸಂಡೇ ಸಿನಿಮಾಸ್‌ ಬ್ಯಾನರ್‌ ನಡಿ ರಾಮೇನಹಳ್ಳಿ ಜಗನ್ನಾಥ್‌ ಹಾಗೂ ಸ್ನೇಹಿತರು “ಹೊಂದಿಸಿ ಬರೆಯಿರಿ’ ಸಿನಿಮಾ ನಿರ್ಮಾಣ ಮಾಡಿದ್ದು, ಜೋ ಕೋಸ್ಟ ಸಂಗೀತ ನಿರ್ದೇಶನ, ಶಾಂತಿ ಸಾಗರ್‌ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.