ಹಾರರ್‌, ಥ್ರಿಲ್ಲರ್‌ನತ್ತ ಮಾಲಾಶ್ರೀ!


Team Udayavani, Nov 14, 2017, 6:44 PM IST

Malasri-(3).jpg

ಮಾಲಾಶ್ರೀ ನಟಿಸಿರುವ “ಉಪ್ಪು ಹುಳಿ ಖಾರ’ ಚಿತ್ರ ನವೆಂಬರ್‌ 24 ರಂದು ಬಿಡುಗಡೆಯಾಗುತ್ತಿದೆ. ಈ ನಡುವೆಯೇ ಮಾಲಾಶ್ರೀಯವರು ಎರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಾರಿ ಆ್ಯಕ್ಷನ್‌ ಬದಲು ಹೊಸ ಜಾನರ್‌ನಲ್ಲಿ ಮಾಲಾಶ್ರೀಯವರು ಕಾಣಿಸಿಕೊಳ್ಳುತ್ತಿದ್ದು, ಥ್ರಿಲ್ಲರ್‌ ಹಾಗೂ ಹಾರರ್‌ ಜಾನರ್‌ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಹೊಸ ಗೆಟಪ್‌ನಲ್ಲಿ ದರ್ಶನ ಕೊಡಲಿದ್ದಾರೆ. ಈ ಎರಡು ಚಿತ್ರಗಳು ಹೊಸ ವರ್ಷಕ್ಕೆ ಅಂದರೆ ಜನವರಿಯಲ್ಲಿ ಆರಂಭವಾಗಲಿವೆ. 

ಅಂದಹಾಗೆ, ಈ ಚಿತ್ರಗಳಿಗಾಗಿ ಮಾಲಾಶ್ರೀ ತಮ್ಮ ಲುಕ್‌, ಗೆಟಪ್‌ ಎಲ್ಲವನ್ನು ಬದಲಿಸಿಕೊಳ್ಳಲಿದ್ದಾರೆ. ಏಕೆಂದರೆ, ಚಿತ್ರದ ಪಾತ್ರ ತುಂಬಾ ವಿಶೇಷವಾಗಿದ್ದು, ಅದಕ್ಕಾಗಿ ಈಗಾಗಲೇ ತಯಾರಿ ನಡೆಸುತ್ತಿದ್ದಾರಂತೆ. ಮತ್ತೂಂದೆಡೆ ಮಾಲಾಶ್ರೀಯವರು ಈಗ ಸಖತ್‌ ಸ್ಲಿಮ್‌ ಆಗಿದ್ದಾರೆ. 9 ಕೆಜಿಯಷ್ಟು ತೂಕ ಇಳಿಸಿಕೊಂಡಿರುವ ಅವರು ಸತತವಾಗಿ ವರ್ಕೌಟ್‌ನಲ್ಲಿ ತೊಡಗಿದ್ದಾರೆ. ದಿನಕ್ಕೆ ಮೂರು ಗಂಟೆಗಳ ಕಾಲ ವರ್ಕೌಟ್‌ ಮಾಡಿ ತೂಕ ಇಳಿಸಿಕೊಂಡಿರುವ ಮಾಲಾಶ್ರೀಯವರಿಗೆ ಮತ್ತಷ್ಟು ಕೆಜಿ ಇಳಿಸಿಕೊಳ್ಳುವ ಇರಾದೆ ಇದೆ. ಆ ನಿಟ್ಟಿನಲ್ಲಿ ಅವರ ವರ್ಕೌಟ್‌ ಸಾಗುತ್ತಿದೆ.

“ನಾನು “ಉಪ್ಪು ಹುಳಿ ಖಾರ’ ಚಿತ್ರದ ನಂತರ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಬಹಳಷ್ಟು ಜನ ಚಿತ್ರ ಮಾಡೋಕೆ ಬಂದಿದ್ದರು. ಈ ಬಾರಿ ವಿಭಿನ್ನ ಚಿತ್ರವಷ್ಟೇ ಅಲ್ಲ, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಬೇಕು ಅಂತಾಸೆ. “ದುರ್ಗಿ’ ಚಿತ್ರದಲ್ಲಿ ಮೊದಲ ಬಾರಿಗೆ ಬಾಯ್‌ಕಟ್‌ನಲ್ಲಿ ಕಾಣಿಸಿಕೊಂಡೆ. ಅಲ್ಲಿಂದ, ಇಲ್ಲಿಯವರೆಗೂ ಒಂದೇ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಾಗಾಗಿ ಈ ಬಾರಿ ಗೆಟಪ್‌ ಸಹ ಬದಲಾಗಿದೆ. ಇನ್ನು ಈಗಾಗಲೇ 9 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದೇನೆ. ಹಾಗಂತ ಡಯಟಿಂಗ್‌ ಮಾಡಿಲ್ಲ.

ಜನವರಿಯಲ್ಲಿ ಚಿತ್ರ ಪ್ರಾರಂಭವಾಗುವಷ್ಟರಲ್ಲಿ ಇನ್ನೊಂದಿಷ್ಟು ತೂಕ ಕಳೆದುಕೊಂಡಿರುತ್ತೇನೆ’ ಎನ್ನುತ್ತಾರೆ ಮಾಲಾಶ್ರೀ. ಈ ಎರಡು ಚಿತ್ರಗಳ ಪೈಕಿ ಒಂದನ್ನು ರಾಮು ನಿರ್ಮಿಸಿದರೆ, ಇನ್ನೊಂದು ಚಿತ್ರವನ್ನು ಬೇರೆ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ. ಚಿತ್ರದ ಹೆಸರೇನು, ನಿರ್ದೇಶಕರು ಯಾರು ಎಂಬ ವಿಷಯ ಕೇಳಿದರೆ, ಅವೆಲ್ಲಾ ರಾಮು ಅವರ ಬಾಯಿಂದಲೇ ಬರಲಿ ಎಂದು ತಪ್ಪಿಸಿಕೊಳ್ಳುತ್ತಾರೆ ಮಾಲಾಶ್ರೀ. ಅಂದ ಹಾಗೆ, ಈ ಚಿತ್ರ 2018ರ ಜನವರಿಯಲ್ಲಿ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.