‘ಹೊಸ’ಬರ ಸಿನಿಮಾ ‘ದಿನಚರಿ’ ಶುರು


Team Udayavani, Oct 23, 2022, 3:55 PM IST

Hosa-dinachari

“ಕನ್ನಡ ಚಿತ್ರರಂಗದಲ್ಲಿ ಪ್ರತಿ ಎರಡು ದಶಕಕೊಮ್ಮೆ ಒಂದು ದೊಡ್ಡ ಬದಲಾವಣೆ ಆಗುತ್ತಿರುತ್ತದೆ. ಎಂಭತ್ತರಲ್ಲಿ, ಎರಡು ಸಾವಿರದಲ್ಲಿ ಈಗ ಎರಡು ಸಾವಿರದ ಇಪ್ಪತ್ತರಲ್ಲಿ, ಅಂಥ ಬದಲಾವಣೆಗಳಾಗುತ್ತಿದೆ. ಈ ಬದಲಾವಣೆ ಪ್ರತಿ ದಶಕಕ್ಕೊಮ್ಮೆ ಆಗಬೇಕು. ಆಗ ಕನ್ನಡ ಚಿತ್ರರಂಗ ವ್ಯಾಪ್ತಿ, ಇನ್ನಷ್ಟು ವಿಸ್ತಾರವಾಗುತ್ತದೆ’ ಇದು ಹಿರಿಯ ನಿರ್ದೇಶಕ ಟಿ. ಎಸ್‌ ನಾಗಾಭರಣ ಅಭಿಮತ.

ಇತ್ತೀಚೆಗೆ ನಡೆದ “ಹೊಸ ದಿನಚರಿ’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಟಿ. ಎಸ್‌ ನಾಗಾಭರಣ, “ಕನ್ನಡ ಚಿತ್ರರಂಗ ಈಗ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದೆ. ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಹೊಸ ದಿನಚರಿ’ ಸಿನಿಮಾದ ಟ್ರೇಲರ್‌ ನೋಡಿದ ನಂತರ ಈ ತಂಡದಿಂದಲೂ ಒಂದು ಒಳ್ಳೆಯ ಸಿನಿಮಾ ಬರುವ ನಿರೀಕ್ಷೆ ಮೂಡುತ್ತದೆ’ ಎಂದರು.

ಇನ್ನು “ಹೊಸ ದಿನಚರಿ’ ಸಿನಿಮಾದಲ್ಲಿ ದೀಪಕ್‌ ಸುಬ್ರಹ್ಮಣ್ಯ, ಚೇತನ್‌ ವಿಕ್ಕಿ, ಮಂದಾರ, ವರ್ಷ, ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್‌, ವಿವೇಕ್‌ ದೇವ್‌, ಶ್ರೀಪ್ರಿಯಾ, ಸುಪ್ರೀತಾ ಗೌಡ, ಬೇಬಿ ಮಾನಿನಿ ಮೊದಲಾದವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತಿ ಶೇಖರ್‌ ಹಾಗೂ ವೈಶಾಖ್‌ ಪುಷ್ಪಲತಾ ಜಂಟಿಯಾಗಿ “ಹೊಸ ದಿನಚರಿ’ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ.

“ಎಲ್ಲರ ಜೀವನದಲ್ಲೂ ಪ್ರೀತಿ ಇದ್ದೇ ಇರುತ್ತದೆ. ಆದರೆ ಪ್ರೀತಿಸಿದ ವ್ಯಕ್ತಿ ಕೊನೆಯವರೆಗೂ ಇರುತ್ತಾರಾ? ಅವರಿಲ್ಲದೇ ಬೇರೊಬ್ಬರು ಜೀವನದಲ್ಲಿ ಬಂದಾಗ ಏನಾಗುತ್ತದೆ? ಎಂಬುದೆ “ಹೊಸ ದಿನಚರಿ’ ಸಿನಿಮಾದ ಕಥಾಹಂದರ. ಈ ಹಿಂದೆ ಕೆಲವು ಕಿರುಚಿತ್ರಗಳು ಮಾಡಿರುವ ಅನುಭವವಿರುವ ನಾವು ಈ ಸಿನಿಮಾ ತೆರೆಗೆ ತರುತ್ತಿದ್ದೇವೆ. ಇಂದಿನ ಜನರೇಶನ್‌ಗೆ ಹತ್ತಿರವಾಗುವಂಥ ವಿಷಯ ಸಿನಿಮಾದಲ್ಲಿದ್ದು, “ಹೊಸ ದಿನಚರಿ’ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬುದು ಚಿತ್ರತಂಡದ ಒಕ್ಕೊರಲ ಮಾತು.

ಚಿತ್ರಕ್ಕೆ ರಾಕಿ ಛಾಯಾಗ್ರಹಣ, ರಂಜಿತ್‌ ಸಂಕಲನ ಮತ್ತು ವೈಶಾಖ್‌ ವರ್ಮ ಸಂಗೀತವಿದೆ. ಮೃತ್ಯುಂಜಯ ಶುಕ್ಲ, ಅಲೋಕ್‌ ಚೌರಾಸಿಯಾ ಹಾಗೂ ಗಂಗಾಧರ ಸಾಲಿಮಠ “ಹೊಸ ದಿನಚರಿ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.