ಸುಧಿ, ಕಾಕ್ರೋಚ್ ಆಗಿದ್ದು ಹೇಗೆ ಗೊತ್ತಾ?


Team Udayavani, Mar 7, 2018, 11:09 AM IST

Sudheer-1.jpg

“ಟಗರು’ ಚಿತ್ರದಲ್ಲಿ ಡಾಲಿ, ಚಿಟ್ಟೆ, ಕಾನ್‍ಸ್ಟಬಲ್ ಸರೋಜ ಪಾತ್ರಗಳು ಜನಪ್ರಿಯವಾದಂತೆ, ಜನಪ್ರಿಯವಾದ ಮತ್ತೊಂದು ಪಾತ್ರ ಎಂದರೆ ಅದು ಸುಧೀರ್ ಅಲಿಯಾಸ್ ಕಾಕ್ರೋಚ್‍ದು. ಕಾಕ್ರೋಚ್ ಪಾತ್ರ ಅದೆಷ್ಟು ಜನಪ್ರಿಯವಾಗಿದೆಯೆಂದರೆ, ಸುಧಿ ಮುಖ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದುಬಿಟ್ಟಿದೆಯಂತೆ. ಆದರೆ, ಅದಕ್ಕೂ ಮುನ್ನ ಸುಧಿ, ಕಾಕ್ರೋಚ್ ಆದ ವಿಷಯವೇ ಸ್ವಾರಸ್ಯಕರ.

ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಸುಧಿಗೆ ಒಂದು ದೊಡ್ಡ ಬ್ರೇಕ್ ಬೇಕಿತ್ತಂತೆ. ಒಮ್ಮೆ ನಿರ್ದೇಶಕ ಎ.ಪಿ. ಅರ್ಜುನ್ ಅವರ ಆಫೀಸಿಗೆ ಒಬ್ಬರ ಪರಿಚಯವಾಯಿತಂತೆ. ಅವರು ಸುಧಿಗೆ ಹೆಸರು ಬದಲಿಸಿಕೊಳ್ಳುವುದಕ್ಕೆ ಸಲಹೆ ನೀಡಿದ್ದಾರೆ. ಹೆಸರು ಬದಲಾಯಿಸಿಕೊಂಡರೆ, ಲಕ್ಕು ಕುದುರುವುದಾಗಿಯೂ ಅವರು ಹೇಳಿದರಂತೆ.

ಸರಿ, ಒಂದೊಳ್ಳೆಯ ಹೆಸರಿಗಾಗಿ ಸುಧಿ ತಮ್ಮ ಗುರು ಸೂರಿ ಬಳಿ ಹೋಗಿದ್ದಾರೆ. ಹೆಸರು ಬದಲಾಯಿಸಿಕೊಂಡರೆ ಯೋಗ ಬರುತ್ತದಂತೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಒಂದು ಒಳ್ಳೆಯ ಹೆಸರನ್ನಿಡುವುದಕ್ಕೂ ಕೇಳಿಕೊಂಡಿದ್ದಾರೆ. ಇದನ್ನು ಕೇಳಿ ಸೂರಿ ನಕ್ಕರಂತೆ. ಆ ನಂತರ ಒಂದು ದಿನ “ಟಗರು’ ಚಿತ್ರ ಮಾಡುವ, ಸುಧಿಯನ್ನು ಕರೆದು ಒಂದು ಪಾತ್ರ ಕೊಟ್ಟರಂತೆ.

ಆಗ ಹೆಸರು ಬದಲಾವಣೆಯ ಬಗ್ಗೆ ಸುಧಿ ಜ್ಞಾಪಿಸಿದಾಗ, ಯಾವ ಹೆಸರಿಟ್ಟರೂ ಓಕೆನಾ ಎಂದು ಕೇಳಿದರಂತೆ ಸೂರಿ. ಯಾವ ಹೆಸರಾದರೂ ಓಕೆ ಅಂತ ಸುಧಿ ಹೇಳಿದ್ದಾರೆ. ಆಗ ಸೂರಿ, ಸುಧಿಗೆ ಪಾತ್ರ ಮಾಡಿಸುವುದರ ಜೊತೆಗೆ ಕಾಕ್ರೋಚ್ ಎಂದು ನಾಮಕರಣ ಮಾಡಿದ್ದಾರೆ. ಜನ ನಿನ್ನ ಹೆಸರು ಮರೆಯೋದಿಲ್ಲ ಎಂದು ಹೇಳಿದ್ದಾರೆ. ಈಗ ನೋಡಿದರೆ, ಅವರ ಮಾತು ನಿಜವಾಗಿಬಿಟ್ಟಿದೆ.

ಸುಧಿಗೆ ನಿಜಕ್ಕೂ ಯೋಗ ಬಂದಿದೆ. ಯಾರು ನೋಡಿದರೂ, ಕಾಕ್ರೋಚ್ ಅಂತಲೇ ಕರೆಯುತ್ತಾರಂತೆ. ಹೆಸರು ಬದಲಾಯಿಸಿಕೊಂಡರೆ ಯೋಗ ಬರತ್ತೆ ಅಂತ ಹೇಳಿದ್ದರು. ಈಗ ನಿಜಕ್ಕೂ ಯೋಗ ಬಂದಿದೆ. ಎಲ್ಲರೂ ಕಾಕ್ರೋಚ್ ಅಂತಲೇ ಕರೆಯುತ್ತಾರೆ. ರಸ್ತೇಲಿ ಓಡಾಡೋದೇ ಕಷ್ಟವಾಗಿದೆ’ ಎನ್ನುತ್ತಾರೆ ಸುಧಿ.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.