ಹಂಡ್ರೆಡ್‌ ಪರ್ಸೆಂಟ್‌ “ಬ್ರಹ್ಮಚಾರಿ’ಯ ಟೀಸರ್‌ ಹೊರಬಂತು

ಪಕ್ಕಾ ಹಾಸ್ಯಮಯ ಚಿತ್ರದಲ್ಲಿ ಸತೀಶ್‌ ನೀನಾಸಂ ನಟನೆ

Team Udayavani, Jun 24, 2019, 3:00 AM IST

Brahmachari

ಕೆಲ ದಿನಗಳ ಹಿಂದಷ್ಟೇ ನಟ ನೀನಾಸಂ ಸತೀಶ್‌ ಅವರು, ನಿರ್ಮಾಪಕ ಉದಯ್‌ ಮೆಹ್ತಾ ನಿರ್ಮಾಣದ “ಬ್ರಹ್ಮಚಾರಿ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಕುರಿತು ಹೇಳಲಾಗಿತ್ತು. ಅದಾದ ಬಳಿಕ ಆ ಚಿತ್ರದಲ್ಲಿ ನೀನಾಸಂ ಸತೀಶ್‌ ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೂಡ ಹೊರಬಿದ್ದಿತ್ತು.

ಈಗ ಹೊಸ ಸುದ್ದಿಯೆಂದರೆ, “ಬ್ರಹ್ಮಚಾರಿ’ ಚಿತ್ರದ ಟೀಸರ್‌ ಹೊರಬಂದಿದೆ. ಹೌದು, ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಹಿರಿಯ ಕಲಾವಿದ ದತ್ತಣ್ಣ ಅವರು ಚಿತ್ರದ ಟೀಸರ್‌ ಬಿಡುಗಡೆ ಮಾಡಿ, ಚಿತ್ರದ ಕುತೂಹಲ ಮತ್ತು ಆ ಪಾತ್ರದೊಳಗೆ ಸಾಕಷ್ಟು ಮಜ ಇರುವ ಬಗ್ಗೆ ಹೇಳಿಕೊಂಡರು. ಇನ್ನು, “ಬ್ರಹ್ಮಚಾರಿ’ ಚಿತ್ರದ ಟೀಸರ್‌ ಬಿಡುಗಡೆಗೆ ಕಾರಣವೂ ಇತ್ತು.

ನೀನಾಸಂ ಸತೀಶ್‌ ಅವರ ಹುಟ್ಟುಹಬ್ಬ ಕೂಡ ಇದ್ದುದರಿಂದ ಅಂದೇ, ನಿರ್ಮಾಪಕ ಉದಯ್‌ ಕೆ.ಮೆಹ್ತಾ ಅವರು “ಬ್ರಹ್ಮಚಾರಿ’ ಚಿತ್ರದ ಟೀಸರ್‌ ಲಾಂಚ್‌ ಮಾಡುವ ಯೋಚನೆ ಮಾಡಿದ್ದರು. ಹಾಗಾಗಿ, ಅಂದು ಅದ್ಧೂರಿಯಾಗಿಯೇ ಚಿತ್ರದ ಟೀಸರ್‌ ಹೊರಬಂದಿದೆ. ಈ ಚಿತ್ರದ ಶೀರ್ಷಿಕೆ ಎಷ್ಟು ಕುತೂಹಲ ಕೆರಳಿಸಿದೆಯೋ, ಅಷ್ಟೇ ಕುತೂಹಲ ಚಿತ್ರದ ಅಡಿಬರಹದಲ್ಲೂ ಇದೆ.

ಅದೇನೆಂದರೆ, “100% ವರ್ಜಿನ್‌’ ಎಂಬುದು. ಇಲ್ಲೊಂದು ವಿಶೇಷ ಮನರಂಜನೆ ಪ್ಯಾಕೇಜ್‌ ಇದೆ ಎಂಬುದನ್ನು ನಿರ್ದೇಶಕ ಚಂದ್ರಮೋಹನ್‌ ಅವರು ಹೇಳಿಬಿಟ್ಟಿದ್ದಾರೆ. ಇಲ್ಲೂ ಸಹ ತರಹೇವಾರಿ ಪಾತ್ರಗಳು ಕಾಣಿಸಿಕೊಳ್ಳಲಿವೆ. ಸದ್ಯಕ್ಕೆ ಟೀಸರ್‌ ಹೊಸದೊಂದು ಕುತೂಹಲ ಹುಟ್ಟುಹಾಕಿದ್ದು, ಚಿತ್ರದಲ್ಲೂ ನಾನಾ ವಿಶೇಷಗಳು ತುಂಬಿರಲಿವೆ ಎಂಬುದನ್ನು ಚಿತ್ರತಂಡ ಹೆಮ್ಮೆಯಿಂದ ಹೇಳಿಕೊಂಡಿದೆ.

ನಿರ್ಮಾಪಕ ಉದಯ್‌ ಕೆ. ಮೆಹ್ತಾ ಅವರು ಈಗಾಗಲೇ ಚಿರಂಜೀವಿ ಸರ್ಜಾ ಅಭಿನಯದ “ಸಿಂಗ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದಲ್ಲೂ ಅದಿತಿ ಪ್ರಭುದೇವ ಅವರೇ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ “ಬ್ರಹ್ಮಚಾರಿ’ ಚಿತ್ರದಲ್ಲೂ ಅವರು ನಾಯಕಿ. ಇನ್ನು, ಇದೇ ಮೊದಲ ಬಾರಿಗೆ ಸತೀಶ್‌ ನೀನಾಸಂ ಹಾಗು ಅದಿತಿ ಪ್ರಭುದೇವ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅದೇನೆ ಇರಲಿದ, “ಬ್ರಹ್ಮಚಾರಿ’ ಚಿತ್ರದಲ್ಲಿ ಹಾಸ್ಯವೇ ಪ್ರಧಾನ ಎಂಬುದು ನಿರ್ದೇಶಕರ ಮಾತು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.