ನನಗೆ ಬಾಯ್‌ಫ್ರೆಂಡ್‌ ಇಲ್ಲ – ಘಟನೆಗೂ ನನಗೂ ಸಂಬಂಧವಿಲ್ಲ


Team Udayavani, Mar 19, 2019, 5:41 AM IST

ragini.jpg

ನಟಿ ರಾಗಿಣಿಗಾಗಿ ರವಿ ಹಾಗೂ ಶಿವಪ್ರಕಾಶ್‌ ಎನ್ನುವವರು ಕಿತ್ತಾಡಿಕೊಂಡರಂತೆ ಎಂಬ ಸುದ್ದಿ ಕೆಲ ದಿನಗಳ ಹಿಂದೆಯಷ್ಟೇ ಜೋರಾಗಿ ಕೇಳಿಬಂದಿತ್ತು. ಜೊತೆಗೆ ರಾಗಿಣಿಯ ಬಾಯ್‌ಫ್ರೆಂಡ್‌ ಬಂದ ಗಲಾಟೆ ಮಾಡಿದನಂತೆ ಎಂಬೆಲ್ಲಾ ಸುದ್ದಿಗಳು ಓಡಾಡಿದವು. ಆದರೆ, ರಾಗಿಣಿ ಮಾತ್ರ ಈ ಬಗ್ಗೆ ಎಲ್ಲೂ ಮಾತನಾಡಿರಲಿಲ್ಲ. ಹಾಗಾದರೆ ಈ ಘಟನೆಗೂ ರಾಗಿಣಿಗೂ ಸಂಬಂಧವಿಲ್ಲವೇ ಎಂದು ನೀವು ಕೇಳಬಹುದು.

ರಾಗಿಣಿ ಮಾತ್ರ “ನನಗೂ ಆ ಘಟನೆಗೂ ಸಂಬಂಧವೇ ಇಲ್ಲ. ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ’ ಎನ್ನುತ್ತಿದ್ದಾರೆ. ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ರಾಗಿಣಿ, “ನನಗೆ ಯಾವ ಘಟನೆಯ ಬಗ್ಗೆಯೂ ಗೊತ್ತಿಲ್ಲ. ನಾನಿಲ್ಲಿ “ಗಾಂಧಿಗಿರಿ’ ಚಿತ್ರೀಕಣದಲ್ಲಿ ಬಿಝಿ ಇದ್ದೇನೆ. ಅದಕ್ಕಿಂತ ಹೆಚ್ಚಾಗಿ ನನಗೆ ಯಾವ ಬಾಯ್‌ಫ್ರೆಂಡ್‌ ಕೂಡಾ ಇಲ್ಲ.

ನಾನೊಬ್ಬಳೇ ಖುಷಿಯಾಗಿದ್ದೇನೆ’ ಎನ್ನುತ್ತಾರೆ. “ನಾನು ಆ ದಿನ ಊಟಕ್ಕೆ ಹೋಗಿದ್ದು ನಿಜ. ಆದರೆ, ನಾನು ಅವರಿಬ್ಬರ ಜೊತೆ ಹೋಗಿಲ್ಲ. ನನ್ನ ಮುಂಬೈ ಫ್ರೆಂಡ್ಸ್‌ ಬಂದಿದ್ದರು. ಅದೇ ರೆಸ್ಟೋರೆಂಟ್‌ನಲ್ಲಿ ಅವರಿಬ್ಬರು (ರವಿ-ಶಿವಪ್ರಕಾಶ್‌) ಇದ್ದರು. ಅವರ ಮಧ್ಯೆ ಏನೋ ವಾದ ನಡೆದು ಜಗಳವಾಗಿರಬೇಕು. ಹಾಗಂತ ಅದೇನು ಜಗಳವೆಂದು ನನಗೂ ಗೊತ್ತಿಲ್ಲ. ಅವರಿಬ್ಬರೂ ನನಗೆ ಪರಿಚಯ.

ಇಬ್ಬರು ಒಳ್ಳೆಯವರು. ಅವರ ನಡುವೆ ಏನಾಯಿತೆಂದು ನಿಜವಾಗಿಯೂ ನನಗೆ ಗೊತ್ತಿಲ್ಲ’ ಎನ್ನುವುದು ರಾಗಿಣಿ ಮಾತು. ಈ ಮೂಲಕ ತನಗೂ ಆ ಘಟನೆಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಾರೆ ರಾಗಿಣಿ.  ಸದ್ಯ ರಾಗಿಣಿ ಪ್ರೇಮ್‌ ನಾಯಕರಾಗಿರುವ “ಗಾಂಧಿಗಿರಿ’ ಚಿತ್ರೀಕರಣದಲ್ಲಿ ಬಿಝಿ. ಇದಲ್ಲದೇ ಎರಡು ನಾಯಕಿಪ್ರಧಾನ ಆ್ಯಕ್ಷನ್‌ ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ ರಾಗಿಣಿ. 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.