ಪತ್ನಿಯಲ್ಲಿ ಅಮ್ಮನ ಕಂಡೆ …


Team Udayavani, Jan 14, 2019, 6:17 AM IST

ammana-mane.jpg

ಅದು “ಅಮ್ಮನ ಮನೆ’ ಚಿತ್ರ ಟೀಸರ್‌ ಬಿಡುಗಡೆ ಕಾರ್ಯಕ್ರಮ. ರಾಘವೇಂದ್ರ ರಾಜಕುಮಾರ್‌ ಚಿತ್ರದ ಹೈಲೈಟ್‌. ಅವರ ಸಿನಿಮಾ ಕಾರ್ಯಕ್ರಮ ಅಂದಮೇಲೆ, ಸಹಜವಾಗಿಯೇ ಜನಜಾತ್ರೆ ಇದ್ದೇ ಇರುತ್ತೆ. ಅಂದೇಕೋ ರಾಘವೇಂದ್ರ ರಾಜಕುಮಾರ್‌ ತುಂಬಾನೇ ಭಾವುಕರಾಗಿದ್ದರು. ಅದಕ್ಕೆ ಕಾರಣ, ವೇದಿಕೆ ಮೇಲಿದ್ದ ಅವರ ಅತ್ತೆ ನಾಗಮ್ಮ ಹಾಗೂ ಪತ್ನಿ ಮಂಗಳಾ.

ಹೌದು, ವೇದಿಕೆಗೆ ಬಂದ ನಾಗಮ್ಮ, ಮಂಗಳಾ ಅವರ ಬಗ್ಗೆ ರಾಘವೇಂದ್ರ ರಾಜಕುಮಾರ್‌, ಗುಣಗಾನ ಮಾಡುತ್ತಲೇ ಭಾವುಕರಾದರು. ಈ ವೇಳೆ, ಅತ್ತೆ ನಾಗಮ್ಮನ ಕಾಲಿಗೆ ನಮಸ್ಕರಿಸಿದ ರಾಘವೇಂದ್ರ ರಾಜಕುಮಾರ್‌ ಪತ್ನಿ ಮಂಗಳಾ ಅವರ ಕಾಲಿಗೂ ನಮಸ್ಕರಿಸಿದರು. ಹಣೆಗೊಂದು ಪ್ರೀತಿಯ ಮುತ್ತನಿಟ್ಟು, “ಅಮ್ಮನ ಮನೆ’ ಚಿತ್ರದ ಬಗ್ಗೆ ಹೇಳುತ್ತಾ ಹೋದರು.

“ನಾನು ಪತ್ನಿ ಮಂಗಳಾ ಅವರಲ್ಲಿ ನನ್ನ ತಾಯಿಯನ್ನು ನೋಡುತ್ತಿದ್ದೇನೆ. ಅಮ್ಮ ನನ್ನ ಚಿಕ್ಕ ವಯಸ್ಸಿನಲ್ಲಿ ಪಾಲನೆ ಮಾಡಿದರೆ, ಕೆಲ ವರ್ಷಗಳ ಹಿಂದೆ ನಾನು ಅನಾರೋಗ್ಯದಲ್ಲಿದ್ದಾಗ ಪತ್ನಿ ಸಾಕಷ್ಟು ಸಾಥ್‌ ಕೊಟ್ಟರು. ನನ್ನ ಪತ್ನಿ ಮಂಗಳಾ ನನ್ನ ಬದುಕಿನ ಮತ್ತೂಬ್ಬ ತಾಯಿ. ಇನ್ನು, ನನ್ನ ತಂದೆಯ ಸಹೋದರಿ ಅತ್ತೆ ನಾಗಮ್ಮ ಅವರು ಸಹ ತಾಯಿ ಸ್ವರೂಪದಂತೆ ಇದ್ದಾರೆ.

ನಾನು ಹುಟ್ಟಿದ್ದ ಸಂದರ್ಭದಲ್ಲಿ ನನ್ನ ತಾಯಿ ಚಿತ್ರೀಕರಣ ಸೇರಿದಂತೆ ವಜ್ರೆಶ್ವರಿ ಕಂಬೈನ್ಸ್‌ ಸಂಸ್ಥೆಯ ಜವಾಬ್ದಾರಿ ಹೊತ್ತುಕೊಂಡಿದ್ದರು. ಆ ಒತ್ತಡದ ಕೆಲಸಗಳ ಮಧ್ಯೆ ನನ್ನನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿರಲಿಲ್ಲ. ಆ ಸಂದರ್ಭದಲ್ಲಿ ನನ್ನ ಅತ್ತೆ ನಾಗಮ್ಮ ಕೂಡ ಅವರ ಮಗಳಿಗೆ ಜನ್ಮ ನೀಡಿದ್ದರು. ಆ ವೇಳೆ ನನಗೂ ಎದೆ ಹಾಲು ಉಣಿಸುವ ಮೂಲಕ ನನ್ನನ್ನು ಸಾಕಿ ಸಲುಹಿದ್ದಾರೆ’ ಎಂದು ನೆನಪು ಮೆಲುಕು ಹಾಕುತ್ತಲೇ ಭಾವುಕರಾದರು.

ಈ ಚಿತ್ರ ಗಂಡಸಿನ ಬದುಕಿನಲ್ಲಿ ಬರುವ ಮೂವರು ತಾಯಂದಿರ ಕುರಿತ ಕಥೆ ಹೇಳುತ್ತದೆ. ಹಾಗಾಗಿ, ಅಂದು ವೇದಿಕೆಗೆ ರಾಘವೇಂದ್ರ ರಾಜಕುಮಾರ್‌ ಅವರ ಅತ್ತೆ ನಾಗಮ್ಮ, ಪತ್ನಿ ಮಂಗಳಾ ಹಾಗೂ ಸೊಸೆ ಶ್ರೀದೇವಿ ಅವರನ್ನು ಆಹ್ವಾನಿಸಿ, ಅವರ ಮೂಲಕವೇ “ಅಮ್ಮನ ಮನೆ’ ಚಿತ್ರದ ಟೀಸರ್‌ ಬಿಡುಗಡೆ ಮಾಡಿಸಲಾಯಿತು.

ನಿಖೀಲ್‌ ಮಂಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಚಿತ್ರ ಸೆನ್ಸಾರ್‌ ಆಗಿದ್ದು, ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯಾದ್ಯಂತ ತೆರೆಗೆ ಬರಲಿದೆ. ಅಂದಹಾಗೆ, ರಾಘವೇಂದ್ರ ರಾಜಕುಮಾರ್‌ ಅವರು 14 ವರ್ಷಗಳ ಬಳಿಕ ಈ ಚಿತ್ರದ ಮೂಲಕ ನಟನೆ ಇಳಿದಿದ್ದಾರೆ. ಟೀಸರ್‌ ಬಿಡುಗಡೆ ಕಾರ್ಯಕ್ರಮಕ್ಕೆ ಪುನೀತ್‌ರಾಜಕುಮಾರ್‌, ವಿನಯರಾಜಕುಮಾರ್‌, ತಬಲಾನಾಣಿ, ಸುಚೇಂದ್ರಪ್ರಸಾದ್‌, ರೋಹಿಣಿ, ಶೀತಲ್‌ ಹೇಮಂತ್‌, ನಿರ್ಮಾಪಕ ಆರ್‌.ಎಸ್‌. ಕುಮಾರ್‌ ಸೇರಿದಂತೆ ಹಲವರು ಸಾಕ್ಷಿಯಾದರು.

ಪುನೀತ್‌ರಾಜಕುಮಾರ್‌ ಅವರಿಗೆ ರಾಘವೇಂದ್ರ ರಾಜಕುಮಾರ್‌ ಅವರನ್ನು ತೆರೆಯ ಮೇಲೆ ನೋಡಲು ಸಾಕಷ್ಟು ನಿರೀಕ್ಷೆ ಇದೆಯಂತೆ. ರಾಘವೇಂದ್ರ ರಾಜಕುಮಾರ್‌ ಇಲ್ಲಿ, ರಾಜೀವ ಪಾತ್ರದ ಮೂಲಕ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, “ಬಂಗಾರದ ಮನುಷ್ಯ’ ಚಿತ್ರದಲ್ಲಿ ಡಾ.ರಾಜಕುಮಾರ್‌ ಪಾತ್ರದ ಹೆಸರು ಕೂಡ ರಾಜೀವ ಎಂಬುದು ವಿಶೇಷ. ಈಗ ರಾಘವೇಂದ್ರ ರಾಜಕುಮಾರ್‌ ಕೂಡ “ರಾಜೀವ’ ಹೆಸರಿನ ಪಾತ್ರದ ಮೂಲಕ ಮೋಡಿ ಮಾಡಲಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.