ರಾಜಕೀಯಕ್ಕೆ ಬರ್ತೀರಾ ಶಿವಣ್ಣ? ಹ್ಯಾಟ್ರಿಕ್ ಹೀರೋ ಹೇಳಿದ್ದೇನು?
Team Udayavani, Jul 7, 2017, 3:48 PM IST
ಹಾಸನ : ನಾನು ರಾಜಕೀಯಕ್ಕೆ ಬರುತ್ತಿದ್ದೇನೆ ಎನ್ನುವುದು ಸುಳ್ಳು ಸುದ್ದಿ ಎಂದು ನಟ ಡಾ. ಶಿವರಾಜ್ಕುಮಾರ್ ಸ್ಪಷ್ಟನೆ ನೀಡಿದ್ದಾರೆ
ಶುಕ್ರವಾರ ಹಾಸನದಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಮಳಿಗೆಗೆ ಉದ್ಘಾಟನೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಯಾವುದೇ ಕಾರಣಕ್ಕೆ ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪತ್ನಿ ಗೀತಾ ಸಮಾಜಸೇವೆ ಮಾಡುತ್ತಿದ್ದು ಮುಂದುವರಿಸುವುದಾಗಿ ತಿಳಿಸಿದರು.
ನಮ್ಮ ತಾಯಿ ನಿಧನಾನಂತರ ನಮಗೆ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಮ್ಮ ಮನೆಗೆ ಆಗಮಿಸಿದ್ದಾರೆ. ಈ ಬಗ್ಗೆ ನಮಗೆ ಗೌರವವಿದೆ ಎಂದರು.
ರಾಹುಲ್ ಭೇಟಿ ಬಳಿಕ ಡಾ.ರಾಜ್ ಕುಟುಂಬದ ಸದಸ್ಯರೊಬ್ಬರು ರಾಜಕೀಯ ಪ್ರವೇಶಿಸುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜ್ಕುಮಾರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಶಿವರಾಜ್ ಕುಮಾರ್ ಅವರ ಭರ್ಜರಿ ಪ್ರಚಾರದ ಹೊರತಾಗಿಯೂ 3 ನೇ ಸ್ಥಾನ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ