ಇಡ್ಕ ವಸಿ ತಡ್ಕ…

ನವೀನ್‌ ಸಜ್ಜು ಧ್ವನಿಯಲ್ಲಿ ದೇಸಿ ಹಾಡು

Team Udayavani, Sep 24, 2019, 3:02 AM IST

Brahamachari

“ಎದೆಯೊಳಗಿನ ತಮತಮತಮಟೆ ಯಾರೋ ಬಡ್ದಂಗ್‌ ಆಯ್ತಾ ಐತೆ…’ ಬಹುಶಃ ಈ ಹಾಡು ಕೇಳದವರೇ ಇಲ್ಲ ಬಿಡಿ. ಅದರಲ್ಲೂ ಪಡ್ಡೆಗಳ ಬಾಯಲ್ಲಂತೂ ಆಗಾಗ ಈ ಹಾಡು ಗುನುಗುತ್ತಲೇ ಇರುತ್ತೆ. ಪವನ್‌ ಕುಮಾರ್‌ ನಿರ್ದೇಶನದ ಸತೀಶ್‌ ನೀನಾಸಂ ಅಭಿನಯದ “ಲೂಸಿಯಾ’ ಚಿತ್ರದಲ್ಲಿ ಮೂಡಿಬಂದ ಈ ಹಾಡಿಗೆ ಧ್ವನಿಯಾಗಿದ್ದ ಗಾಯಕ ನವೀನ್‌ ಸಜ್ಜು. ಈ ಹಾಡು ಬಹುತೇಕರ ಫೇವರೇಟ್‌ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಎಲ್ಲಾ ಸರಿ, ಇಷ್ಟಕ್ಕೂ ಈ ಹಾಡಿನ ವಿಷಯ ಈಗೇಕೆ ಎಂಬ ಪ್ರಶ್ನೆ ಎದುರಾಗಬಹುದು. ವಿಷಯ ಇದೆ. ಅದಕ್ಕೆ ಕಾರಣ, ಪುನಃ ನವೀನ್‌ ಸಜ್ಜು ಅದೇ ರೀತಿಯ ಹಾಡನ್ನು ಹಾಡಿರುವುದು. ಅಂದಹಾಗೆ, “ಎದೆಯೊಳಗಿನ ತಮತಮತಮಟೆ …’ ಹಾಡು ಪಕ್ಕಾ ಮಂಡ್ಯ ಭಾಷೆಯ ಸೊಗಡಿನಲ್ಲೇ ಮೂಡಿಬಂದಿತ್ತು. ಅದರಲ್ಲೂ ಸತೀಶ್‌ ನೀನಾಸಂ ಅವರು ಸಹ ಆ ಚಿತ್ರದಲ್ಲಿ ಮಂಡ್ಯ ಭಾಷೆಯಲ್ಲೇ ನೋಡುಗರನ್ನು ಸೆಳೆದಿದ್ದರು.

ಈಗ ಪುನಃ, ನವೀನ್‌ ಸಜ್ಜು ಅವರು ಸತೀಶ್‌ ನೀನಾಸಂ ಅಭಿನಯದ “ಬ್ರಹ್ಮಚಾರಿ’ ಚಿತ್ರದಲ್ಲಿ ಹಾಡಿದ್ದಾರೆ. ಹೌದು, ಉದಯ್‌ ಕೆ. ಮೆಹ್ತಾ ನಿರ್ಮಾಣದ ಈ ಚಿತ್ರವನ್ನು ಚಂದ್ರಮೋಹನ್‌ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನವೀನ್‌ ಸಜ್ಜು “ಇಡ್ಕ ಇಡ್ಕ, ವಸಿ ತಡ್ಕ ತಡ್ಕ..’ ಎಂಬ ದೇಸಿ ಸೊಗಡಿರುವ ಹಾಡನ್ನು ಹಾಡಿದ್ದಾರೆ. ಈ ಹಿಂದೆ “ಲೂಸಿಯಾ’ ಚಿತ್ರದಲ್ಲಿ ನವೀನ್‌ ಸಜ್ಜು ಹಾಡಿದ್ದ ಹಾಡುಗಳು ಹಿಟ್‌ ಆಗಿದ್ದವು.

ಈಗ ಪುನಃ, ಸತೀಶ್‌ ನೀನಾಸಂ ಅಭಿನಯದ “ಬ್ರಹ್ಮಚಾರಿ’ ಚಿತ್ರಕ್ಕೆ ಹಾಡಿದ್ದಾರೆ. ಅಂದಹಾಗೆ, ಈ ಚಿತ್ರಕೆಕ ಧರ್ಮ ವಿಶ್‌ ಸಂಗೀತ ನೀಡಿದ್ದಾರೆ. ರವಿ ಛಾಯಾಗ್ರಹಣವಿದೆ. ಅರ್ಜುನ್‌ ಕಿಟ್ಟು ಸಂಕಲನವಿದೆ. “ಬ್ರಹ್ಮಚಾರಿ’ ಚಿತ್ರಕ್ಕೆ “ಹಂಡ್ರೆಡ್‌ ಪರ್ಸೆಂಟ್‌ ವರ್ಜಿನ್‌’ ಎಂಬ ಅಡಿಬರಹ ಹೈಲೆಟ್‌ ಆಗಿದ್ದು, ಇಡೀ ಚಿತ್ರದ ಕಥೆ ಒಂದು ಟ್ಯಾಗ್‌ಲೈನ್‌ ಹೇಳುವಂತಿದೆ.

ಈ ಹಿಂದೆ ನಿರ್ದೇಶಕ ಚಂದ್ರಮೋಹನ್‌ ಕೂಡ “ಬಾಂಬೆ ಮಿಠಾಯಿ’ ಹಾಗು “ಡಬ್ಬಲ್‌ ಇಂಜಿನ್‌’ ಚಿತ್ರ ನಿರ್ದೇಶಿಸಿದ್ದರು. ಈ ಎರಡು ಚಿತ್ರಗಳು ಸಹ ಪಕ್ಕಾ ಹಾಸ್ಯಮಯ ಚಿತ್ರಗಳಾಗಿ ಮೂಡಿಬಂದಿದ್ದವು. ಈಗ “ಬ್ರಹ್ಮಚಾರಿ’ ಕೂಡ ಅದೇ ಸಾಲಿಗೆ ಸೇರುವ ಚಿತ್ರ ಎಂಬುದು ಚಿತ್ರತಂಡದ ಮಾತು. ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಇಷ್ಟರಲ್ಲೇ ನಡೆಸಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.